
ನವದೆಹಲಿ(ಡಿ.05): ಕೃಷಿ ಮಸೂದೆಯನ್ನು ಹಿಂಪಡೆಯಲು ರೈತರು ನಡೆಸುತ್ತಿರುವ ಪ್ರತಿಭಟನೆ ಕಾವು ತಣ್ಣಗಾಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಇದರ ಸತತ ಮಾತುಕತೆಗಳು ಫಲಪ್ರದವಾಗುತ್ತಿಲ್ಲ. ಪ್ರತಿಭಟನಾ ನಿರತ ರೈತ ಸಂಘಟನೆಗಳು ಡಿಸೆಂಬರ್ 8 ರಂದು ಭಾರತ್ ಬಂದ್ಗೆ ಕರೆ ನೀಡಿದೆ. ಇದಕ್ಕೆ ಎಡಪಕ್ಷಗಳು ಬೆಂಬಲ ಘೋಷಿಸಿದೆ.
ಭಾರತ್ ಬಂದ್ಗೆ ಕರೆ ನೀಡಿದ ರೈತ ಸಂಘಟನೆ, ದೇಶವ್ಯಾಪಿ ಪ್ರತಿಭಟನೆ ಕಿಚ್ಚು!
ರೈತ ಸಂಘಟನೆ ಕರೆ ನೀಡಿದ ಭಾರತ್ ಬಂದ್ಗೆ 5 ಪಕ್ಷಗಳು ಬೆಂಬಲ ನೀಡಿದೆ. ಎಡಪಕ್ಷಗಳಾದ ಅಖಿಲ ಭಾರತ ಸಮಾಜವಾದಿ ಪಕ್ಷ, ಭಾರತೀಯ ಕಮ್ಯುನಿಸ್ಟ್ ಪಕ್ಷ, ಮಾಕ್ಸ್ ವಾದಿ ಭಾರತೀಯ ಕಮ್ಯೂನಿಸ್ಟ್ ಸೇರಿದಂತೆ ಪ್ರಮುಕ 5 ಪಕ್ಷಗಳು ಬಂದ್ಗೆ ಬೆಂಬಲ ಘೋಷಿಸಿದೆ. ಇದರ ಜೊತೆ ಕೆಲ ಸಂಘಟನೆಗಳಲ್ಲಿ ಎಡಪಕ್ಷಗಳು ಬೆಂಬಲ ಸೂಚಿಸಲು ಮನವಿ ಮಾಡಿದೆ.
ರೈತರ ಪ್ರತಿಭಟನೆಯನ್ನು ಕೇಂದ್ರ ಸರ್ಕಾರ ಕಡೆಗಣಿಸುತ್ತಿದೆ. ಇದು ಕೇಂದ್ರ ಸರ್ಕಾರ ಅಂತ್ಯಕ್ಕೆ ಕಾರಣವಾಗಲಿದೆ. ರೈತರ ಬೇಡಿಕೆಯನ್ನು ಕೇಂದ್ರ ಸರ್ಕಾರ ಪೂರೈಸಬೇಕು. ಇದಕ್ಕಾಗಿ ಡಿಸೆಂಬರ್ 8 ರಂದು ರೈತರ ಭಾರತ್ ಬಂದ್ಗೆ ಎಡಪಕ್ಷಗಳು ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ