ಪಂಚರಾಜ್ಯ ಚುನಾವಣೆ: ಕೇರಳ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆಯ ಮತದಾನ

Published : Apr 10, 2026, 08:51 AM IST
voting

ಸಾರಾಂಶ

ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಗುರುವಾರ ದಾಖಲೆಯ ಮತದಾನ ನಡೆದಿದೆ. ಪುದುಚೇರಿಯಲ್ಲಿ ಸಾರ್ವಕಾಲಿಕ ಗರಿಷ್ಠ ಶೇ.89.08, ಅಸ್ಸಾಂನಲ್ಲಿ ಶೇ.85.04 ಮತ್ತು ಕೇರಳದಲ್ಲಿ ಶೇ.78 ರಷ್ಟು ಮತದಾನವಾಗಿದ್ದು, ಸಣ್ಣಪುಟ್ಟ ಗಲಾಟೆಗಳನ್ನು ಹೊರತುಪಡಿಸಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿತ್ತು.

ಕೇರಳ, ಪುದುಚೇರಿ, ಅಸ್ಸಾಂನಲ್ಲಿ ದಾಖಲೆಯ ಮತದಾನ

ತಿರುವನಂತಪುರಂ/ ಗುವಾಹಟಿ/ಪುದುಚೇರಿ: ಭಾರೀ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯ ಚುನಾವಣೆ ಪೈಕಿ ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಗುರುವಾರ ದಾಖಲೆ ಮತದಾನ ನಡೆದಿದೆ. ಪುದುಚೇರಿಯಲ್ಲಿ 89.08, ಅಸ್ಸಾಂನಲ್ಲಿ 85.04 ಕೇರಳದಲ್ಲಿ ಶೇ.78 ಮತದಾನವಾಗಿದೆ. ಪುದುಚೇರಿ ಹಾಗೂ ಅಸಾಂನಲ್ಲಿ ಇದು ಸಾರ್ವಕಾಲಿಕ ದಾಖಲೆ ಆದರೆ, ಕೇರಳದಲ್ಲಿ 2021 ಕ್ಕಿಂತ ಹೆಚ್ಚು ಮತದಾನವಾಗಿದೆ. ಮೂರು ರಾಜ್ಯಗಳಲ್ಲಿ ಸುಸೂತ್ರವಾಗಿ ಮತದಾನ ನಡೆದಿದ್ದು, ಅಲ್ಲಿ ಸಣ್ಣಪುಟ್ಟ ಗಲಾಟೆ ಹೊರತುಪಡಿಸಿದರೆ ಹೆಚ್ಚಾಗಿ ಅಹಿತಕರ ಘಟನೆಗಳ ವರದಿಯಾಗಿಲ್ಲ.

ಕೇರಳದಲ್ಲಿ ಬಿರುಸಿನ ಮತದಾನ: ದೇವರನಾಡು ಕೇರಳದಲ್ಲಿ ಎಲ್ಲಾ 140 ಕ್ಷೇತ್ರಗಳಲ್ಲಿ ಶೇ.77ರಷ್ಟು ಬಿರುಸಿನ ಮತದಾನ ನಡೆದಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಪಕ್ಷ ನಾಯಕ ವಿ.ಡಿ. ಸತೀಸನ್, ಕೇಂದ್ರ ಸಚಿವ ಸುರೇಶ್ ಗೋಪಿ, ಕೆಪಿಸಿಸಿ ಅಧ್ಯಕ್ಷ ಸನ್ನಿ ಜೋಸೆಫ್, ಕಾಂಗ್ರೆಸ್ ಸಂಸದ ಶಶಿ ತರೂರ್, ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್, ನಟ ಮೋಹನ್‌ಲಾಲ್ ಸೇರಿ ಪ್ರಮುಖರು ಮತ ಚಲಾಯಿಸಿದರು.

ಅಸ್ಸಾಂನಲ್ಲೂ ಬಿರುಸು:

ಈಶಾನ್ಯ ರಾಜ್ಯ ಆಸಾಂನಲ್ಲಿಯೂ ಶೇ.85ರಷ್ಟು ಭರ್ಜರಿ ಮತದಾನ ಅಗಿದೆ. ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಮ್ಮ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೋಯ್ ತಮ್ಮ ತಾಯಿಯೊಂದಿಗೆ ಮತ ಹಾಕಿದರು. ಇಲ್ಲಿ ಕಾಂಗ್ರೆಸ್- ಬಿಜೆಪಿ ನಡುವಿನ ಪೈಪೋಟಿಯಲ್ಲಿ ಜನರು 722 ಅಭ್ಯರ್ಥಿಗಳ ಭವಿಷ್ಯವನ್ನು ಗುರುವಾರ ಬರೆದಿದ್ದಾರೆ.

ಪುದುಚೇರಿಯಲ್ಲಿ ಅತಿ ಗರಿಷ್ಠ:

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಅತಿ ಗರಿಷ್ಠ ಶೇ.89 ಮತದಾನವಾಗಿದೆ. ಮತಗಟ್ಟೆಯೊಂದರಲ್ಲಿ ರೋಬೋಟ್ ಮೂಲಕ ಮತದಾರರನ್ನು ಸ್ವಾಗತಿಸಿದ್ದು ಗಮನ ಸೆಳೆಯಿತು. ಸಿಎಂ ರಂಗಸ್ವಾಮಿ, ಪುದುಚೇರಿ ಗೃಹ ಸಚಿವ ಎ. ನಮಸ್ಸಿವಾಯಂ ಮತ್ತು ಕಾಂಗ್ರೆಸ್ ನಾಯಕ ನಾರಾಯಣಸಾಮಿ ಮತ ಹಾಕಿದರು. ಬೈಕಲ್ಲಿ ಬಂದು ಪುದುಚೇರಿ ಸಿಎಂ ಮತ ಹಾಕಿದರು.

ಇದನ್ನೂ ಓದಿ:  ಸ್ವಂತ ಕಾರೂ ಇಲ್ಲದ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ: ದೀದಿ ಆಸ್ತಿ ಬರೀ 15.4 ಲಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ವಂತ ಕಾರೂ ಇಲ್ಲದ ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ: ದೀದಿ ಆಸ್ತಿ ಬರೀ 15.4 ಲಕ್ಷ
Supreme Court on temple entry: ಕೆಲವು ಪಂಗಡಗಳಿಗೆ ದೇಗುಲ ಪ್ರವೇಶ ನಿರ್ಬಂಧ ಹಿಂದೂ ಧರ್ಮಕ್ಕೆ ಮಾರಕ: ಸುಪ್ರೀಂ