ಮಮತಾಗೆ ಮತ್ತೊಂದು ಹೊಡೆತ; ಬಿಜೆಪಿ ಸೇರಲು ಐವರು TMC ನಾಯಕರು ದೆಹಲಿಗೆ!

Published : Jan 30, 2021, 07:12 PM IST
ಮಮತಾಗೆ ಮತ್ತೊಂದು ಹೊಡೆತ; ಬಿಜೆಪಿ ಸೇರಲು ಐವರು TMC ನಾಯಕರು ದೆಹಲಿಗೆ!

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಗುದ್ದಾಟ ಹೆಚ್ಚಾಗುತ್ತಿದೆ. ತೃಣಮೂಲ ಕಾಂಗ್ರೆಸ್ ಹಾಗೂ ಬಿಜೆಪಿ ಸಂಘರ್ಷ ಕೂಡ ಹೆಚ್ಚಾಗುತ್ತಿದೆ. ಇದೀಗ ಟಿಎಂಸಿಯಿಂದ ಹೊರಬಂದ ಐವರು ನಾಯಕರು, ಬಿಜೆಪಿ ಸೇರಲು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.  

ನವದೆಹಲಿ(ಜ.30): ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಘರ್ಷ, ತೃಣ ಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಪರ್ವ ಹೆಚ್ಚಾಗುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ನಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕಂಗೆಡಿಸಿದೆ. ಈಗಾಗಲೇ ತೃಣಮೂಲ ಕಾಂಗ್ರೆಸ್ ತೊರೆದಿರುವ ಐವರು ನಾಯಕರು ಇದೀಗ ಬಿಜೆಪಿ ಸೇರಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ, ಜನ ಸೇವೆಗೆ ಅವಕಾಶ ನೀಡಿದ ಸಿಎಂಗೆ ಧನ್ಯವಾದ ಅಂದ್ರು...!.

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ(ಜ.31) ಹೌರಾದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಟಿಎಂಸಿಯ ಐವರು ನಾಯಕರು ಬಿಜೆಪಿ ಸೇರಲು ಸಜ್ಜಾಗಿದ್ದರು. ಆದರೆ ದೆಹಲಿ ಬಾಂಬ್ ಸ್ಫೋಟದ ಕಾರಣ ಅಮಿತ್ ಶಾ ಕೋಲ್ಕತಾ ಭೇಟಿ ರದ್ದು ಮಾಡಿದ್ದಾರೆ. ಹೀಗಾಗಿ ಟಿಎಂಸಿಯ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ.

ಬಂಗಾಳದ ತಂಟೆಗೆ ಬಂದರೆ ಛಿದ್ರ ಮಾಡ್ತೇವೆ ಹುಷಾರ್‌: ಬಿಜೆಪಿಗೆ ಟಿಎಂಸಿ ಬೆದರಿಕೆ!.

ಬಿಜೆಪಿ ಮುಖ್ಯ ಕಚೇರಿಯಲ್ಲಿ ಟಿಎಂಸಿಯ ಐವರು ನಾಯಕರನ್ನು ಅಮಿತ್ ಶಾ ಬಿಜೆಪಿಗೆ ಬರಮಾಡಿಕೊಳ್ಳಲಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಜೀಬ್ ಬ್ಯಾನರ್ಜಿ,MLA ಬೈಶಾಲಿ ದಾಲ್ಮಿಯಾ, ಉತ್ತರಾಪರ MLA ಪ್ರಬೀರ್ ಘೋಷಾಲ್,  ಹೌರಾ ಮೇಯರ್ ರತಿನ್ ಚಕ್ರಬೊರ್ತಿ ಹಾಗೂ ಮಾಜಿ MLA ರಾನಘಟ್ ಪಾರ್ಥಸಾರಥಿ ಚಟರ್ಜಿ  ಬಿಜೆಪಿ ಸೇರಿಕೊಳ್ಳುತ್ತಿರುವ ಟಿಎಂಸಿ ಪ್ರಮುಖ ನಾಯಕರಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?