
ನವದೆಹಲಿ(ಜ.30): ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಸಂಘರ್ಷ, ತೃಣ ಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಪರ್ವ ಹೆಚ್ಚಾಗುತ್ತಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಈ ನಡೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಕಂಗೆಡಿಸಿದೆ. ಈಗಾಗಲೇ ತೃಣಮೂಲ ಕಾಂಗ್ರೆಸ್ ತೊರೆದಿರುವ ಐವರು ನಾಯಕರು ಇದೀಗ ಬಿಜೆಪಿ ಸೇರಲು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ, ಜನ ಸೇವೆಗೆ ಅವಕಾಶ ನೀಡಿದ ಸಿಎಂಗೆ ಧನ್ಯವಾದ ಅಂದ್ರು...!.
ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ(ಜ.31) ಹೌರಾದಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ಟಿಎಂಸಿಯ ಐವರು ನಾಯಕರು ಬಿಜೆಪಿ ಸೇರಲು ಸಜ್ಜಾಗಿದ್ದರು. ಆದರೆ ದೆಹಲಿ ಬಾಂಬ್ ಸ್ಫೋಟದ ಕಾರಣ ಅಮಿತ್ ಶಾ ಕೋಲ್ಕತಾ ಭೇಟಿ ರದ್ದು ಮಾಡಿದ್ದಾರೆ. ಹೀಗಾಗಿ ಟಿಎಂಸಿಯ ಐವರು ನಾಯಕರು ದೆಹಲಿಗೆ ತೆರಳಿದ್ದಾರೆ.
ಬಂಗಾಳದ ತಂಟೆಗೆ ಬಂದರೆ ಛಿದ್ರ ಮಾಡ್ತೇವೆ ಹುಷಾರ್: ಬಿಜೆಪಿಗೆ ಟಿಎಂಸಿ ಬೆದರಿಕೆ!.
ಬಿಜೆಪಿ ಮುಖ್ಯ ಕಚೇರಿಯಲ್ಲಿ ಟಿಎಂಸಿಯ ಐವರು ನಾಯಕರನ್ನು ಅಮಿತ್ ಶಾ ಬಿಜೆಪಿಗೆ ಬರಮಾಡಿಕೊಳ್ಳಲಿದ್ದಾರೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಜೀಬ್ ಬ್ಯಾನರ್ಜಿ,MLA ಬೈಶಾಲಿ ದಾಲ್ಮಿಯಾ, ಉತ್ತರಾಪರ MLA ಪ್ರಬೀರ್ ಘೋಷಾಲ್, ಹೌರಾ ಮೇಯರ್ ರತಿನ್ ಚಕ್ರಬೊರ್ತಿ ಹಾಗೂ ಮಾಜಿ MLA ರಾನಘಟ್ ಪಾರ್ಥಸಾರಥಿ ಚಟರ್ಜಿ ಬಿಜೆಪಿ ಸೇರಿಕೊಳ್ಳುತ್ತಿರುವ ಟಿಎಂಸಿ ಪ್ರಮುಖ ನಾಯಕರಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ