
ನವದೆಹಲಿ(ಜೂ.30): ಸಾಮಾಜಿಕ ಜಾಲತಾಣಗಳ ದುರುಪಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ಬುಕ್ ಮತ್ತು ಗೂಗಲ್ ಅಧಿಕಾರಿಗಳನ್ನು ಐ.ಟಿ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ವಿಚಾರಣೆಗೊಳಪಡಿಸಿತು.
ಈ ವೇಳೆ ಸಾಮಾಜಿಕ ಜಾಲತಾಣಗಳ ದುರುಪಯೋಗ ತಡೆ ಮತ್ತು ನಾಗರಿಕರ ಹಕ್ಕುಗಳ ರಕ್ಷಣೆಗೆ ಭಾರತ ಸರ್ಕಾರ ರೂಪಿಸಿದ ನೂತನ ಕಾನೂನುಗಳನ್ನು, ಸರ್ಕಾರದ ಸೂಚನೆ ಹಾಗೂ ಕೋರ್ಟ್ ಆದೇಶ ಪಾಲಿಸಲೇಬೇಕು ಎಂದು ಶಶಿ ತರೂರ್ ನೇತೃತ್ವದ ಸಮಿತಿ ಸೂಚನೆ ನೀಡಿತು.
ಅಲ್ಲದೆ, ವಿಚಾರಣೆಗೆ ಕರೆದಾಗಲೆಲ್ಲ ಖುದ್ದು ಹಾಜರಾಗಬೇಕು. ಸಂಸದೀಯ ಸಚಿವಾಲಯವು ವರ್ಚುವಲ್ ಸಭೆಗೆ ಅವಕಾಶ ನೀಡುವುದಿಲ್ಲ ಎಂದು ಸಮಿತಿ ಹೇಳಿತು. ಈ ಮೂಲಕ ವರ್ಚುವಲ್ ಆಗಿ ಸಭೆಗೆ ಬರಲಾಗುವುದು ಎಂಬ ಫೇಸ್ಬುಕ್ ಕೋರಿಕೆ ತಳ್ಳಿಹಾಕಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ