
ನವದೆಹಲಿ[ಜ.18]: ಒಂದೆಡೆ ಇಡೀ ದೇಶವೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಯಾವಾಗ ಸಿಗುತ್ತದೆ ಎಂದು ಕಾಯುತ್ತಿದೆ. ಹೀಗಿರುವಾಗಲೇ ಹಿರಿಯ ವಕೀಲೆ ಇಂಧಿರಾ ಜೈಸಿಂಗ್ ಬೆಚ್ಚಿ ಬೀಳಿಸುವ ಹೇಳಿಕೆಯೊಂದನ್ನು ನೀಡಿದ್ದಾರೆ. ನಿರ್ಭಯಾ ತಾಯಿ ಬಳಿ ಮನವಿಯೊಂದನ್ನು ಮಾಡಿರಿವ ವಕೀಲೆ ಸೋನಿಯಾ ಗಾಂಧಿಯಂತೆ ನಿರ್ಭಯಾ ಹತ್ಯಾಚಾರಿಗಳನ್ನು ಕ್ಷಮಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
'ನಾನು ಬಾಲಾಪರಾಧಿ': ನೇಣು ತಪ್ಪಿಸಿಕೊಳ್ಳಲು ನಿರ್ಭಯಾ ರೇಪಿಸ್ಟ್ ಪವನ್ ಹೊಸ ದಾಳ!
ಈ ಸಂಬಂಧ ಮನವಿ ಮಾಡಿಕೊಂಡಿರುವ ಹಿರಿಯ ವಕೀಲೆ 'ಯಾವ ರೀತಿ ಸೋನಿಯಾ ಗಾಂಧಿ ತನ್ನ ಪತಿ ರಾಜಕೀವ್ ಗಾಂಧಿ ಹಂತಕಿ ನಳಿನಿಯವರನ್ನು ಕ್ಷಮಿಸಿದರೋ, ಅದೇ ರೀತಿ ನಿರ್ಭಯಾ ತಾಯಿ ಕೂಡಾ ದೋಷಿಗಳನ್ನು ಕ್ಷಮಿಸಬೇಕು. ಅವರು ಸೋನಿಯಾ ಗಾಂಧಿ ಉದಾಹರಣೆಯನ್ನು ಅನುಸರಿಸಬೇಕು ಎಂದಿದ್ದಾರೆ.
ಯೋಗ್ಯರಲ್ಲ ನೀವು ಬದುಕಲು: ಫೆ.1ರಂದು ಹತ್ಯಾಚಾರಿಗಳಿಗೆ ಗಲ್ಲು!
ಹಿರಿಯ ವಕೀಲೆ ಇಂಧಿರಾ ಜೈಸಿಂಗ್ ಟ್ವೀಟ್ ಮಾಡಿದ್ದು, 'ಆಶಾ ದೇವಿ ನೋವು ಏನೆಂದು ನನಗೆ ತಿಳಿದಿದೆ. ಆದರೂ ರಾಜೀವ್ ಹಂತಕಿ ನಳಿನಿಯನ್ನು ಕ್ಷಮಿಸಿ, ಮೃತ್ಯುದಂಡ ನೀಡುವುದು ಬೇಡ ಎಂದಿದ್ದ ಸೋನಿಯಾ ಗಾಂಧಿ ಉದಾಹರಣೆಯನ್ನು ಅನುಸರಿಸಬೇಕೆಂದು ಆಶಾ ಸಿಂಗ್ ಬಳಿ ನಾನು ಮನವಿ ಮಾಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿದ್ದೇನೆ, ಆದರೆ ಗಲ್ಲು ಶಿಕ್ಷೆ ವಿರೋಧಿಸುತ್ತೇನೆ' ಎಂದಿದ್ದಾರೆ.
ಪಟಿಯಾಲಾ ಹೌಸ್ ಕೋರ್ಟ್ ನಿರ್ಭಯಾ ಅತ್ಯಾಚಾರಿಗಳಿಗೆ ಹೊಸ ಡೆತ್ ವಾರಂಟ್ ಹೊರಡಿಸಿದೆ. ಇದರ ಅನ್ವಯ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಾಲ್ವರೂ ಅಪರಾಧಿಗಳಿಗೆ ಫೆಬ್ರವರಿ 1 ರಂದು ಬೆಳಗ್ಗೆ 6 ಗಂಟೆಗೆ ಗಲ್ಲು ಶಿಕ್ಷೆಯಾಗಲಿದೆ. ಹೀಗಿದ್ದರೂ ಇದು ಅಂತಿಮ ದಿನಾಂಕ ಎಂದು ಹೇಳಲು ಸಾಧ್ಯವಿಲ್ಲ. ಅಪರಾಧಿಗಳಲ್ಲಿ ಮೂವರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಅವಕಾಶವಿದೆ. ಹೀಗಾಘಿ ಗಲ್ಲು ಶಿಕ್ಷೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.
ಫೆ.1ರಂದೂ ಗಲ್ಲು ಶಿಕ್ಷೆ ಅನುಮಾನ, 3 ದೋಷಿಗಳ ಮುಂದಿವೆ ಇನ್ನೂ ಹಲವು ಅವಕಾಶ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ