ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ!

Published : Sep 13, 2020, 12:55 PM ISTUpdated : Sep 13, 2020, 01:00 PM IST
ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ!

ಸಾರಾಂಶ

ಬಿಹಾರ ಚುನಾವಣೆಗೂ ಮುನ್ನ ದಿಗ್ಗಜ ನಾಯಕ ಕೊನೆಯುಸಿರು| ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ!| ಸಾವಿಗೂ ಮುನ್ನ ಸಿಎಂ ನಿತೀಶ್ ಕುಮಾರ್‌ಗೆ ಪತ್ರ ಬರೆದಿದ್ದ ಸಿಂಗ್

ನವದೆಹಲಿ(ಸೆ.13): ಬಿಹಾರದ ದಿಗ್ಗಜ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. 

ಇತ್ತೀಚೆಗಷ್ಟೇ ಮಾಜಿ ಕೇಂದ್ರ ಸಚಿವ ರಘುವಂಶ್ ಪ್ರಸಾದ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ತಡೆರಾತ್ರಿ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ವೆಂಟಿಲೇಟರ್‌ಸಪೋರ್ಟ್‌ನಲ್ಲಿರಿಸಲಾಗಿತ್ತು. ಹೀಗಿದ್ದರೂ ಅವರ ಆರೋಗ್ಯ ಸುಧಾರಿಸಿರಲಿಲ್ಲ. ಹೀಗಿರುವಾಗ ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ರಘುವಂಶ್ ಪ್ರಸಾದ್ ಸಿಂಗ್ ಬಿಹಾರದ ಅಗ್ರ ನಾಯಕರಾಗಿ ಗುರುತಿಸಿಕೊಂಡವರು. ಇನ್ನು ಆರೋಗ್ಯ ಹದಗೆಟ್ಟು ಏಮ್ಸ್‌ಗೆ ದಾಖಲಾಗಿದ್ದ ಮಾಜಿ ಸಚಿವರು ಗುರುವಾರ ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‌ರಗೆ ಪತ್ರವೊಂದನ್ನು ಬರೆದಿದ್ದರು. ಇದರಲ್ಲಿ ಅವರು ತಾನು ಆರ್‌ಜೆಡಿಗೆ ವಿದಾಯ ಹೇಳುವುದಾಗಿ ಘೋಷಿಸಿದ್ದರು.

ಆದರೆ ಪಕ್ಷಕ್ಕೆ ರಾಜೀನಾಮೆ ನೀಡುವ ಕುರಿತಾಗಿ ಬರೆದ ಪತ್ರವನ್ನು ಲಾಲೂ ಪ್ರಸಾದ್ ಯಾದವ್ ತಿರಸ್ಕರಿಸಿದ್ದರು ಹಾಗೂ ಅವರ ಮನವೊಲಿಸುವ ಯತ್ನ ನಡೆಸಿದ್ದರು. ಇನ್ನು ರಘುವಂಶ್ ಪ್ರಸಾದ್ ಸಿಂಗ್ ಅತ್ತ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ರವರಿಗೂ ಪತ್ರವೊಂದನ್ನು ಬರೆದು ಮೂರು ಬೇಡಿಕೆಗಳನ್ನಿಟ್ಟಿದ್ದರು. ಆದರೀಗ ಬಿಹಾರ ಚುನಾವಣೆ ಹೊಸ್ತಿಲಲ್ಲೇ ರಘುವಂಶ್ ಪ್ರಸಾದ್ ಸಿಂಗ್ ಕೊನೆಯುಸಿರೆಳೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉದ್ಯಮಿಗೆ ಲವ್‌ ಟ್ರ್ಯಾಪ್‌, ವೈರಲ್‌ ಆದ ಡಿಎಸ್‌ಪಿ ಕಲ್ಪನಾ ವರ್ಮಾ ಚಾಟ್‌..!
ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ