
ಮುಂಬೈ(j.೧೭): ನಕಲಿ ಟಿಆರ್ಪಿ ಹಗರಣದಲ್ಲಿ ಬಂಧಿತರಾಗಿದ್ದ ಬಾರ್ಕ್ನ ಮಾಜಿ ಸಿಇಒ ಪಾರ್ಥೋ ದಾಸ್ಗುಪ್ತಾ ಅವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಇಲ್ಲಿನ ಜೆಜೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ನವಿ ಮುಂಬೈನ ತಲೋಜಾ ಕೇಂದ್ರ ಕಾರಾಗೃಹದಲ್ಲಿದ್ದ ದಾಸ್ಗುಪ್ತಾರ ರಕ್ತದಲ್ಲಿ ಸಕ್ಕರೆ ಪ್ರಮಾಣ ತೀವ್ರ ಹೆಚ್ಚಾದ ಹಿನ್ನೆಲೆಯಲ್ಲಿ ಶನಿವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಿ ಕೃತಕ ಉಸಿರಾಟ ವ್ಯವಸ್ಥೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಟಿಆರ್ಪಿ ಹಗರಣ ಸಂಬಂಧ ದಾಸ್ಗುಪ್ತಾ ಅವರನ್ನು ಮುಂಬೈ ಪೊಲೀಸರು ಡಿ.24ರಂದು ಬಂಧಿಸಿದ್ದರು. ಜಾಮೀನು ಕೋರಿ ದಾಸ್ಗುಪ್ತಾ ಸಲ್ಲಿಸಿದ್ದ ಮನವಿಯನ್ನು ಇತ್ತೀಚೆಗೆ ಮುಂಬೈ ಕೋರ್ಟ್ ತಿರಸ್ಕರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ