ಡಾ. ಸಿಂಗ್ ಹುಟ್ಟುಹಬ್ಬ: 'ನಿಮ್ಮ ಪ್ರಾಮಾಣಿಕತೆ, ಶಿಸ್ತು ಹಾಗೂ ಸಮರ್ಪಣೆ ನಮಗೆ ಪ್ರೇರಣೆ!'

Published : Sep 26, 2020, 02:53 PM IST
ಡಾ. ಸಿಂಗ್ ಹುಟ್ಟುಹಬ್ಬ: 'ನಿಮ್ಮ ಪ್ರಾಮಾಣಿಕತೆ, ಶಿಸ್ತು ಹಾಗೂ ಸಮರ್ಪಣೆ ನಮಗೆ ಪ್ರೇರಣೆ!'

ಸಾರಾಂಶ

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಹುಟ್ಟುಹಬ್ಬದ ಸಂಭ್ರಮ| ರಾಹುಲ್ ಗಾಂಧಿ, ದೇವೇಗೌಡರಿಂದ ಶುಭ ಹಾರೈಕೆ| ನಿಮ್ಮ ಪ್ರಾಮಾಣಿಕತೆ, ಶಿಸ್ತು ಹಾಗೂ ಸಮರ್ಪಣೆ ನಮಗೆ ಪ್ರೇರಣೆ!

ನವದೆಹಲಿ(ಸೆ.26): ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ರವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಇಂದು ಅವರು ತಮ್ಮ 88ನೇ ಜನ್ಮ ಜನ್ಮದಿನವನ್ನಾಚರಿಸುತ್ತಿದ್ದಾರೆ.  ಮಾಜಿ ಪಿಎಂ ಎಚ್. ಡಿ. ದೇವೇಗೌಡ ಸೇರಿ ದೇಶದ ದಿಗ್ಗಜ ನಾಯಕರು ಡಾ. ಸಿಂಗ್‌ಗೆ ಶುಭ ಕೋರಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ವಯನಾಡ್‌ನ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿ ಮನಮೋಹನ್ ಸಿಂಗ್‌ರಿಗೆ ಶುಭ ಹಾರೈಸಿದ್ದಾರೆ.  ಟ್ವೀಟ್ ಮಾಡಿರುವ ರಾಹುಲ್ ಗಾಂಧಿ 'ಭಾರತಕ್ಕೆ ಡಾ. ಮನಮೋಹನ್‌ ಸಿಂಗ್‌ರಂತಹ ಆಳವಾದ ಜ್ಞಾನವಿರುವ ಪ್ರಧಾನ ಮಂತ್ರಿಯ ಅನುಪಸ್ಥಿತಿ ಕಾಡುತ್ತಿದೆ. ಅವರ ಪ್ರಾಮಾಣಿಕತೆ, ಶಿಸ್ತು ಹಾಗೂ ಸಮರ್ಪಣಾ ಭಾವ ನಮಗೆಲ್ಲರಿಗೂ ಪ್ರೇರಣೆ. ಅವರಿಗೆ ಜನ್ಮ ದಿನದ ಹಾರ್ಧಿಕ ಶುಭಾಶಯಗಳು. ಅವರ ಮುಂದಿನ ವರ್ಷಗಳು ಸುಖಕರವಾಗಿರಲಿ #HappyBirthdayDrMMSingh' ಎಂದು ಬರೆದಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್, ಜಯವೀರ್ ಶೆರ್ಗೀಲ್, ರೋಹನ್ ಗುಪ್ತಾ ಸೇರಿ ಅನೇಕ ಮಂದಿ ಸೋಶಿಯಲ್‌ ಮೀಡಿಯಾ ಮೂಲಕ ಶುಭ ಹಾರೈಸಿದ್ದಾರೆ. ಮನಮೋಹನ್ ಸಿಂಗ್  2004 ರಿಂದ 2014 ರವರೆಗೆ ಭಾರತದ ಪಿಎಂ ಆಗಿದ್ದರು. ಅವರು ಭಾರತದ ವಿಭಜನೆಗೂ ಮುನ್ನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 1932 ರ ಸೆಪ್ಟೆಂಬರ್  26ರಂದು ಜನಿಸಿದ್ದರು.

ಡಾ. ಸಿಂಗ್ ಪಂಜಾಬ್ ಹಾಗೂ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ಶಿಕ್ಷಣ ಪಡೆದಿದ್ದಾರೆ. ಆಕ್ಸ್‌ಫರ್ಡ್‌ ಯೂನಿವರ್ಸಿಟಿಯಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಕೂಡಾ ಗಳಿಸಿದ್ದಾರೆ. ಅವರು ಪಂಜಾಬ್ ಯೂನಿವರ್ಸಿಟಿ ಮಾತ್ರವಲ್ಲದೇ ದಿಲ್ಇ ಸ್ಕೂಲ್ ಆಫ್ ಇಕಾನಾಮಿಕ್ಸ್ ಹಾಗೂ ದಿಲ್ಲಿ ಯೂನಿವರ್ಟಿಟಿಯಲ್ಲೂ ಕಲಿಸಿದ್ದಾರೆ. ಅಲ್ಲದೇ ಭಾರತದ ಯೋಜನಾ ಆಯೋಗದ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಬಿಹಾರ ಸೋಲಿನ ಬಳಿಕ ಪ್ರಶಾಂತ್ ಕಿಶೋರ್ - ಪ್ರಿಯಾಂಕಾ ಗಾಂಧಿ ರಹಸ್ಯ ಭೇಟಿ?
ಸಿಪಿಎಂ ಮಾಜಿ ಮುಸ್ಲಿಂ ಸಂಸದ ರಾತ್ರೋರಾತ್ರಿ ಬ್ರಾಹ್ಮಣ!