ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ!

Published : Aug 31, 2020, 06:17 PM ISTUpdated : Aug 31, 2020, 08:27 PM IST
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ!

ಸಾರಾಂಶ

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ತೀವ್ರ ಅಸ್ವಸ್ಥಗೊಂಡಿದ್ದ ಪ್ರಣಬ್ ಮುಖರ್ಜಿ ಇಂದು(ಆ.31) ಕೊನೆಯುಸಿರೆಳೆದಿದ್ದಾರೆ.

ದೆಹಲಿ(ಆ.31): ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ಕೋಮಾಗೆ ಜಾರಿದ್ದ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು(ಆ.31) ನಿಧನರಾಗಿದ್ದಾರೆ. ಆರ್ಮಿ ರಿಸರ್ಚ್ ಅಂಡ್ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ವರ್ಷದ ಪ್ರಣಬ್ ಮುಖರ್ಜಿ ಇಹಲೋಕ ತ್ಯಜಿಸಿದ್ದಾರೆ.

"

ಮೆದುಳಿನ ಶಸ್ತ್ರ ಚಿಕಿತ್ಸೆ ಬಳಿಕ ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದ ಪ್ರಣಬ್ ಮುಖರ್ಜಿಗೆ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರ(ಆ.31) ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು. ತೀವ್ರ ಅನಾರೋಗ್ಯದಿಂದ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ.

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಪ್ರಣಬ್ ಮುಖರ್ಜಿಯನ್ನು ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜೀವ ರಕ್ಷಣೆಗಾಗಿ ಮೆದುಳಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಶಸ್ತ್ರಿ ಚಿಕಿತ್ಸೆ ಬಳಿಕ ಪ್ರಣಬ್ ಆರೋಗ್ಯ ತೀವ್ರ ಹದಗೆಟ್ಟಿತ್ತು. 

ಪ್ರಣಬ್ ಮಖರ್ಜಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

 

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ!... #PranabMukherjee #RIP #FormerPresident #India https://kannada.asianetnews.com/india-news/former-president-of-india-pranab-mukherjee-passed-away-at-army-hospital-in-the-national-capital-delhi-qfxi7c

ಪ್ರಣಬ್ ಮುಖರ್ಜಿ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಿಂದ 2017 ರ ವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ.  ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದ ಪ್ರಣಬ್ ಮುಖರ್ಜಿ 2009ರಿಂದ 2012ರ ವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. 2019ರಲ್ಲಿ ಪ್ರಣಬ್ ಮುಖರ್ಜಿಗೆ ಕೇಂದ್ರ ಸರ್ಕಾರ ಭಾರತ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. 1969ರಲ್ಲಿ ಪ್ರಣಬ್ ಮುಖರ್ಜಿ ರಾಜಕೀಯ ಪ್ರವೇಶಿಸಿದರು, 

"

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !
ಇನ್ನೂ 3 ದಿನ ತಗ್ಗುವುದಿಲ್ಲ ಇಂಡಿಗೋಳು! - ನಿನ್ನೆ ಮತ್ತೆ 650 ವಿಮಾನ ರದ್ದು