ಮೆದುಳು ಸರ್ಜರಿ ಬಳಿಕ ಮಾಜಿ ರಾಷ್ಟ್ರಪತಿ ಪ್ರಣಬ್‌ ಸ್ಥಿತಿ ಚಿಂತಾಜನಕ!

Published : Aug 12, 2020, 08:22 AM ISTUpdated : Aug 12, 2020, 08:31 AM IST
ಮೆದುಳು ಸರ್ಜರಿ ಬಳಿಕ ಮಾಜಿ ರಾಷ್ಟ್ರಪತಿ ಪ್ರಣಬ್‌ ಸ್ಥಿತಿ ಚಿಂತಾಜನಕ!

ಸಾರಾಂಶ

ಮೆದುಳು ಸರ್ಜರಿ ಬಳಿಕ ಪ್ರಣಬ್‌ ಸ್ಥಿತಿ ಚಿಂತಾಜನಕ|  ತಜ್ಞ ವೈದ್ಯರಿಂದ ಸತತ ನಿಗಾ: ಸೇನಾ ಆಸ್ಪತ್ರೆ| ಚಿಕಿತ್ಸೆಗೆ ಯಾವುದೇ ರೀತಿಯ ಸ್ಪಂದನೆ ತೋರಿಲ್ಲ.

ನವದೆಹಲಿ(ಆ.12): ಕೊರೋನಾ ಸೋಂಕಿನ ನಡುವೆಯೇ ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್‌ ಆಸ್ಪತ್ರೆ ತಿಳಿಸಿದೆ.

ವೆಂಟಿಲೇಟರ್‌ನಲ್ಲಿ ಪ್ರಣಬ್ ಮುಖರ್ಜಿ, ಮೆದುಳಿನ ಸರ್ಜರಿ ಯಶಸ್ವಿ!

84 ವರ್ಷದ ಪ್ರಣಬ್‌ ಮುಖರ್ಜಿ ಅವರು ಸೋಮವಾರ ಮಧ್ಯಾಹ್ನ 12.07 ಗಂಟೆಗೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದರು. ತಪಾಸಣೆ ವೇಳೆ ಅವರ ಮೆದುಳಿನಲ್ಲಿ ದೊಡ್ಡ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟಿರುವುದು ಕಂಡುಬಂತು. ಜೀವ ರಕ್ಷಣೆಗಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾದರು. ಅವರಿಗೆ ವೆಂಟಿಲೇಟರ್‌ ಅಳವಡಿಕೆ ಮಾಡಲಾಗಿದ್ದು, ದೇಹ ಸ್ಥಿತಿ ವಿಷಮಗೊಂಡಿದೆ. ಅವರು ಚಿಕಿತ್ಸೆಗೆ ಯಾವುದೇ ರೀತಿಯ ಸ್ಪಂದನೆ ತೋರಿಲ್ಲ. ವಿಶೇಷ ತಜ್ಞ ವೈದ್ಯರ ತಂಡ ನಿರಂತರವಾಗಿ ಪ್ರಣಬ್‌ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ ಎಂದು ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.

ಬೇರೆ ತಪಾಸಣೆಗೆ ಹೋದಾಗ ತಮಗೆ ಕೊರೋನಾ ಇರುವುದು ಪತ್ತೆಯಾಗಿದೆ. ತಮ್ಮ ಜತೆ ಸಂಪರ್ಕ ಹೊಂದಿದ್ದವರು ಪ್ರತ್ಯೇಕವಾಗಿರಿ ಹಾಗೂ ಕೊರೋನಾ ತಪಾಸಣೆ ಮಾಡಿಸಿಕೊಳ್ಳಿ ಎಂದು ಪ್ರಣಬ್‌ ಅವರು ಸೋಮವಾರ ಟ್ವೀಟ್‌ ಮಾಡಿದ್ದರು. ಅದಾದ ಬೆನ್ನಲ್ಲೇ ಅವರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ನಡೆದಿತ್ತು.

2012ರ ಜುಲೈನಿಂದ 2017ರವರೆಗೆ ಪ್ರಣಬ್‌ ಮುಖರ್ಜಿ ಅವರು ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!