
ನವದೆಹಲಿ(ಆ.01): ಸಮಾಜವಾದಿ ಪಕ್ಷದ ಮಾಜಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಅಮರ್ ಸಿಂಗ್(64) ಶನಿವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮರ್ ಸಿಂಗ್ರವರಿಗೆ ಮಾರ್ಚ್ ತಿಂಗಳಲ್ಲಿ ಕಿಡ್ನಿ ಸಂಬಂಧಿತ ಸಮಸ್ಯೆಗೆ ಸಿಂಗಾಪುರದ ಆಸ್ಪತ್ರೆಯಲ್ಲಿ ಸರ್ಜರಿ ನಡೆದಿತ್ತು. ಇವರು ಸಮಾಜವಾದಿ ಪಕ್ಷದ ಪ್ರಮುಖ ನಾಯಕರಾಗಿಯೂ ಗುರುತಿಸಿಕೊಂಡಿದ್ದರು.
2013ರಲ್ಲೇ ಕಿಡ್ನಿ ಸಮಸ್ಯೆಗೀಡಾಗಿದ್ದ ಅಮರ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಆಕ್ಟಿವ್ ಆಗಿದ್ದರು. ಬಕ್ರೀದ್ (ಈದ್-ಉಲ್-ಜುಹಾ) ಪ್ರಯುಕ್ತ ತಮ್ಮ ಸೋಶಿಯಲ್ ಮೀಡಿಯಾ ಖಾತೆ ಮೂಲಕ ಮುಸ್ಲಿಂ ಬಾಂಧವತರಿಗೆ ಶುಭ ಕೋರಿದ್ದರು. ಇನ್ನು ಬಾಲ್ ಗಂಗಾಧರ್ ತಿಲಕ್ ಪುಣ್ಯತಿಥಿ ಸಂಬಂಧ ಮಾಡಿದ್ದ ಟ್ವೀಟ್ ಅವರ ಕೊನೆಯ ಪೋಸ್ಟ್ ಆಗಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡಾ ಟ್ವೀಟ್ ಮೂಲಕ ಅಮರ್ ಸಿಂಗ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. 'ಹಿರಿಯ ನಾಯಕ ಹಾಗೂ ಸಂಸದ ಶ್ರೀ ಅಮರ್ ಸಿಂಗ್ ನಿಧನ ಸುದ್ದಿಯಿಂದ ಬಹಳ ದುಃಖವಾಯಿತು. ಅವರು ಎಲ್ಲಾ ಪಕ್ಷದವರೊಂದಿಗೆ ಆತ್ಮೀಯವಾಗಿದ್ದರು' ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ