ಗುಜರಾತ್‌ನಲ್ಲಿ 4 ಶಂಕಿತ ಐಸಿಸ್‌ ಉಗ್ರರ ಬಂಧನ: ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು

Published : May 21, 2024, 08:58 AM ISTUpdated : May 21, 2024, 09:01 AM IST
ಗುಜರಾತ್‌ನಲ್ಲಿ 4 ಶಂಕಿತ ಐಸಿಸ್‌ ಉಗ್ರರ ಬಂಧನ: ಭಾರೀ ದಾಳಿಗೆ ಸಂಚು ರೂಪಿಸಿದ್ದ ಉಗ್ರರು

ಸಾರಾಂಶ

ದೇಶದಲ್ಲಿ ಭಾರೀ ದುಷ್ಕೃತ್ಯಕ್ಕೆ ಸಜ್ಜಾಗಿದ್ದ ಜಾಲವೊಂದನ್ನು ಬೇಧಿಸಿರುವ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಐಸಿಸ್‌ಗೆ ಸೇರಿದ ನಾಲ್ವರು ಶಂಕಿತ ಉಗ್ರರನ್ನು ಸೋಮವಾರ ಬಂಧಿಸಿದೆ.

ಅಹಮದಾಬಾದ್‌: ದೇಶದಲ್ಲಿ ಭಾರೀ ದುಷ್ಕೃತ್ಯಕ್ಕೆ ಸಜ್ಜಾಗಿದ್ದ ಜಾಲವೊಂದನ್ನು ಬೇಧಿಸಿರುವ ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್), ಐಸಿಸ್‌ಗೆ ಸೇರಿದ ನಾಲ್ವರು ಶಂಕಿತ ಉಗ್ರರನ್ನು ಸೋಮವಾರ ಬಂಧಿಸಿದೆ. ಇದರೊಂದಿಗೆ ಸಂಭವನೀಯ ದುರಂತವೊಂದು ತಪ್ಪಿದೆ. ಬಂಧಿತರೆಲ್ಲರೂ ಶ್ರೀಲಂಕಾ ಮೂಲದ ಪ್ರಜೆಗಳಾಗಿದ್ದಾರೆ.

ಪಾಕಿಸ್ತಾನ ಮೂಲದ ಏಜೆಂಟ್‌ ಸೂಚನೆ ಅನ್ವಯ ಕಾರ್ಯನಿರ್ವಹಿಸುತ್ತಿದ್ದ ಈ ನಾಲ್ವರು ಐಸಿಸ್ (ಇಸ್ಲಾಮಿಕ್ ಸ್ಟೇಟ್‌) ಶಂಕಿತ ಉಗ್ರರು, ಭಾರತದಲ್ಲಿ ದೊಡ್ಡ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದರು. ಇದಕ್ಕೆ ಅಗತ್ಯವಾದ ಶಸ್ತ್ರಾಸ್ತ್ರಗಳನ್ನು ಪೂರೈಸುವ ಭರವಸೆಯನ್ನು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ ನೀಡಿದ್ದ. ಈ ನಡುವೆ ಯಾರ ಸೂಚನೆ ಅನ್ವಯ ಇವರೆಲ್ಲರೂ ಕಾರ್ಯನಿರ್ವಹಿಸುತ್ತಿದ್ದರೋ ಆತನ ಭೇಟಿಗೆಂದೇ ಈ ನಾಲ್ವರು ಶ್ರೀಲಂಕಾದಿಂದ ಚೆನ್ನೈ ಮಾರ್ಗವಾಗಿ ಅಹಮದಾಬಾದ್‌ಗೆ ಆಗಮಿಸಿದ್ದರು. ಈ ಭೇಟಿ ವೇಳೆ ಎಲ್ಲಿ? ಯಾವಾಗ? ಹೇಗೆ ದುಷ್ಕೃತ್ಯ ನಡೆಸಬೇಕು ಎಂಬ ಸಂದೇಶವನ್ನು ಹ್ಯಾಂಡ್ಲರ್‌ ಈ ನಾಲ್ವರಿಗೂ ರವಾನಿಸುವನಿದ್ದ. ಅಲ್ಲದೆ, ಶಸ್ತ್ರಾಸ್ತ್ರ ನೀಡುವುದಾಗಿ ಹೇಳಿದ್ದ.

ಪ್ರಧಾನಿ ಮೋದಿಯವರನ್ನ ಹೊಗಳಿದ್ದಕ್ಕೆ ಕಾಶ್ಮೀರದಲ್ಲಿ ಮಾಜಿ ಸರಪಂಚ್‌ನ ಹತ್ಯೆ?

ಆದರೆ ಈ ಕುರಿತು ಖಚಿತ ಮಾಹಿತಿ ಪಡೆದ ಎಟಿಎಸ್‌ ಸಿಬ್ಬಂದಿ, ಸೋಮವಾರ ವಿಮಾನ ನಿಲ್ದಾಣದ ಮೇಲೆ ದಾಳಿ ಮಾಡಿ ನಾಲ್ವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೇ 12ರಂದು ಅಹಮದಾಬಾದ್‌ ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬಾಂಬ್‌ ಕರೆ ಮಾಡಲಾಗಿತ್ತು. ಆದರೆ ಪರಿಶೀಲನೆ ವೇಳೆ ಅದೊಂದು ಹುಸಿ ಕರೆ ಎಂದು ಸಾಬೀತಾಗಿತ್ತು. ಅದರ ಬೆನ್ನಲ್ಲೇ ಶಂಕಿತ ಉಗ್ರರು ಬಲೆಗೆ ಬಿದ್ದಿದ್ದಾರೆ. ಕಳೆದ ವರ್ಷದ ಆಗಸ್ಟ್‌ನಲ್ಲೂ ಎಟಿಎಸ್‌ ಸಿಬ್ಬಂದಿ, ರಾಜ್‌ಕೋಟ್‌ ಬಳಿ ಅಲ್‌ಖೈದಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಿದ್ದರು.

ಖಲಿಸ್ತಾನಿ ಉಗ್ರ ನಿಜ್ಜರ್‌ಹತ್ಯೆ ಮಾಡಿದ್ದ ಸುಪಾರಿ ಹಂತಕರನ್ನ ಬಂಧಿಸಿದ ಕೆನಡಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!