ಭಾರತದ ನೆರವಿಗೆ ಧಾವಿಸಿದ ಫ್ರಾನ್ಸ್, ರಾಫೆಲ್ ಯುದ್ಧ ವಿಮಾನ ಜೊತೆಗೆ ಬರುತ್ತಿದೆ ಮೆಡಿಕಲ್ ಕಿಟ್!

Published : Jul 28, 2020, 02:58 PM IST
ಭಾರತದ ನೆರವಿಗೆ ಧಾವಿಸಿದ ಫ್ರಾನ್ಸ್, ರಾಫೆಲ್ ಯುದ್ಧ ವಿಮಾನ ಜೊತೆಗೆ ಬರುತ್ತಿದೆ ಮೆಡಿಕಲ್ ಕಿಟ್!

ಸಾರಾಂಶ

ಭಾರತದಲ್ಲಿ ಕೊರೋನಾ ಕೇಕೆ ಹಾಕುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಚಿಕಿತ್ಸೆಗಾಗಿ ಸರ್ಕಾರ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯುತ್ತಿದೆ. ಇದರ ಬೆನ್ನಲ್ಲೇ ಭಾರತಕ್ಕೆ ಇತರ ದೇಶಗಳು ಕೈಜೋಡಿಸಿದೆ.  ಇಸ್ರೇಲ್ ವೆಂಟಿಲೇಟರ್ ನೀಡಿದ ಬೆನ್ನಲ್ಲೇ ಇದೀಗ ಫ್ರಾನ್ಸ್ ಕೂಡ ಭಾರತಕ್ಕೆ ವೆಂಟಿಲೇಟರ್ ನೀಡಿದೆ.

ನವದೆಹಲಿ(ಜು.28);  ಕೊರೋನಾ ವೈರಸ್ ನಿಯಂತ್ರಣಕ್ಕೆ ಇದೀಗ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರಯಲಾಗುತ್ತಿದೆ. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲವು ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ಭಾರತದ ಕಾರ್ಯಕ್ಕೆ ವಿದೇಶಗಳು ಕೈಜೋಡಿಸಿದೆ. ಕೆಲ ದೇಶಗಳು ಭಾರತಕ್ಕೆ ಮೆಡಿಕಲ್ ಸಲಕರಣೆಯನ್ನು ಉಚಿತವಾಗಿ ನೀಡುತ್ತಿದೆ. ಸೋಂಕಿತರ ಚಿಕಿತ್ಸೆಗೆ ಈಗಾಗಲೇ ಇಸ್ರೇಲ್ ವೆಂಟಿಲೇಟರ್ ನೀಡಿತ್ತು. ಇದರ ಬೆನ್ನಲ್ಲೇ ಫ್ರಾನ್ಸ್ ಕೂಡ ಭಾರತಕ್ಕೆ ವೆಂಟಿಲೇಟರ್ ನೀಡಿದೆ.

ಫ್ರಾನ್ಸ್ ಒಟ್ಟು 120 ವೆಂಟಿಲೇಟರ್‌ನ್ನು ಭಾರತಕ್ಕೆ ನೀಡಿದೆ.  50 ಒಸಿರಿಸ್ 3 ವೆಂಟಿಲೇಟರ್ ಹಾಗೂ 70 ಯುವೆಲ್ 830 ವೆಂಟಿಲೇಟರ್‌ನ್ನು ಫ್ರಾನ್ಸ್ ನೀಡಿದೆ. ವಿಶೇಷ ಅಂದರೆ ಇದು ಫ್ರಾನ್ಸ್ ಉಚಿತವಾಗಿ ಭಾರತಕ್ಕೆ ವೆಂಟಿಲೇಟರ್ ನೀಡಿದೆ. 

ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯೆಲ್ ಮಾಕ್ರೋನ್ , ಭಾರತದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಫ್ರಾನ್ಸ್ ಸಹಕಾರ ನೀಡುವುದಾಗಿ ಹೇಳಿದ್ದರು. ಇಷ್ಟೇ ಅಲ್ಲ ವೆಂಟಿಲೇಟರ್ ನೀಡುವುದಾಗಿ ಘೋಷಿಸಿದ್ದರು. ಇದೀಗ ಒಂದೇ ವಾರದಲ್ಲಿ ಫ್ರಾನ್ಸ್ ವೆಂಟಿಲೇಟರ್ ಭಾರತಕ್ಕೆ ಕಳುಹಿಸಿಕೊಟ್ಟಿದೆ.

ಫ್ರಾನ್ಸ್ ದೇಶದಲ್ಲಿ ಕೊರೋನಾ ಮಿತಿ ಮೀರಿದಾಗ ಭಾರತ ಔಷಧಿಗಳನ್ನೂ ಪೂರೈಸಿತ್ತು. ಸಂಕಷ್ಟದ ಸಮಯದಲ್ಲಿ ಭಾರತ ನಮ್ಮ ಜೊತೆ ನಿಂತಿತ್ತು ಎಂದ ಇಮ್ಯಾನ್ಯುಯೆಲ್ ಹೇಳಿದ್ದಾರೆ.  ಫ್ರಾನ್ಸ್‌ನಿಂದ ಭಾರತ ರಾಫೆಲ್ ಯುದ್ಧವಿಮಾನಗಳನ್ನು ಖರೀದಿಸಿದೆ. ಮೊದಲ ಹಂತದಲ್ಲಿ 6 ಯದ್ಧವಿಮಾನಗಳನ್ನು ಫ್ರಾನ್ಸ್ ಭಾರತಕ್ಕೆ ನೀಡಿದೆ. ಫ್ರಾನ್ಸ್‌ನಿಂದ ಭಾರತೀಯ ವಾಯುಸೇನೆ ಪೈಲೆಟ್‌ಗಳು ಯುದ್ಧವಿಮಾನಗಳನ್ನು ಭಾರತಕ್ಕೆ ತರುತ್ತಿದ್ದಾರೆ. 

ಇಸ್ರೇಲ್ ಕೂಡ ಭಾರತಕ್ಕೆ ವೆಂಟಿಲೇಟರ್ ನೀಡಿದೆ. ಇಷ್ಟೇ ಅಲ್ಲ ಭಾರತ ಹಾಗೂ ಇಸ್ರೇಸ್ ಜಂಟಿಯಾಗಿ 30 ಸೆಕೆಂಡ್‌ನಲ್ಲಿ ಕೊರೋನಾ ವೈರಸ್ ಪರೀಕ್ಷೆ ನಡೆಸುವ ರ್ಯಾಪಿಡ್ ಕಿಟ್ ಅಭಿವೃದ್ಧಿ ಪಡಿಸುತ್ತಿದೆ. ಇದು ಕೊರೋನಾ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಸದ್ಯ ಭಾರತದಲ್ಲಿ ಕೊರೋನಾ ಪರೀಕ್ಷೆ ವರದಿಗಳು ತಡವಾಗಿ ಬರುತ್ತಿದೆ. ಇದರಿಂದ ಸೋಕು ಮತ್ತಷ್ಟು ಹರಡುವ ಸಾಧ್ಯತೆ ಇದೆ. ಆದರೆ ಭಾರತ ಹಾಗೂ ಇಸ್ರೇಲ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನೂತನ ಕಿಟ್ ಸೋಂಕು ಹರುಡವಿಕೆಯನ್ನು ತಡೆಯುವಲ್ಲಿ ಯಶಸ್ವಿಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?