
ಪಟನಾ: ಕರ್ನಾಟಕದ ಚಿಕ್ಕಬಳ್ಳಾಪುರದ ಯುವಕ ಪಡೆದಿದ್ದ ಯುಪಿಎಸ್ಸಿ ರ್ಯಾಂಕ್ ಅನ್ನು, ತನ್ನದೆಂದು ಸುಳ್ಳು ಹೇಳಿಕೊಂಡು ಸನ್ಮಾನ ಸ್ವೀಕರಿಸಿದ್ದ ಬಿಹಾರದ ಯುವಕನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮಾ.6ರಂದು 2025ನೇ ಸಾಲಿನ ಯುಸಿಎಸ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿತ್ತು. ಇದರಲ್ಲಿ 440ನೇ ರ್ಯಾಂಕ್ ಅನ್ನು ಚಿಕ್ಕಬಳ್ಳಾಪುರದ ರಂಜಿತ್ ಕುಮಾರ್ ಎಂಬುವವರು ಪಡೆದಿದ್ದರು. ಆದರೆ ಬಿಹಾರದ ರಂಜೀತ್ ತಾನೇ 440ನೇ ರ್ಯಾಂಕ್ ಪಡೆದಿದ್ದೇನೆ ಎಂದು ಊರವರನ್ನು ನಂಬಿಸಿದ್ದ.
ಹೀಗಾಗಿ ಶಾಸಕರು, ಸ್ಥಳೀಯ ಮುಖಂಡರು ಹಾಗೂ ಪೊಲೀಸರು ಆತನನ್ನು ಸನ್ಮಾನಿಸಿದ್ದರು. ಆತ ಆಡಿದ ಸ್ಫೂರ್ತಿದಾಯಕ ಮಾತುಗಳ ವಿಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಆತ ಹೇಳಿದ್ದು ಸುಳ್ಳು ಎಂಬ ವಿಷಯ ಬಹಿರಂಗವಾಗಿದೆ. ಹೀಗಾಗಿ ಸನ್ಮಾನ ಮಾಡಿದ್ದ ಪೊಲೀಸರೇ ಬಂಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ