
ನವದೆಹಲಿ(ಅ.25): ‘ಬಿಹಾರದಲ್ಲಿ ಬಿಜೆಪಿ ಗೆದ್ದರೆ ಉಚಿತ ಕೊರೋನಾ ಲಸಿಕೆ ನೀಡಲಾಗುವುದು’ ಎಂಬ ಪ್ರಣಾಳಿಕೆಯಲ್ಲಿನ ಅಂಶವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ. ‘ನಮ್ಮ ಘೋಷಣೆ ನಿಯಮಬದ್ಧವಾಗಿಯೇ ಇದೆ. ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಎಂದು ಹೇಳುವ ಅವಕಾಶ ನಮಗೆ ಇದೆ’ ಎಂದಿದ್ದಾರೆ.
ನಿರ್ಮಲಾ ಅವರೇ ಗುರುವಾರ ಪ್ರಣಾಳಿಕೆ ಬಿಡುಗಡೆ ಮಾಡಿದ್ದರು. ಆದರೆ ಉಚಿತ ಕೊರೋನಾ ಲಸಿಕೆ ಘೋಷಣೆಯನ್ನು ಪ್ರಶ್ನಿಸಿದ್ದ ಪ್ರತಿಪಕ್ಷಗಳು, ‘ಕೊರೋನಾ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇತರ ರಾಜ್ಯಗಳಿಗೆ ಏಕೆ ಕೊರೋನಾ ಲಸಿಕೆ ಉಚಿತವಿಲ್ಲ? ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದವು.
ಇದಕ್ಕೆ ಪ್ರತಿಕ್ರಿಯಿಸಿರುವ ನಿರ್ಮಲಾ, ‘ಅದು ಪ್ರಣಾಳಿಕೆ ಘೋಷಣೆ. ಅಧಿಕಾರಕ್ಕೆ ಬಂದಾಗ ಏನು ಮಾಡುತ್ತೇವೆ ಎಂದು ನಾವು ಹೇಳಬಹುದು. ಎಲ್ಲ ಪಕ್ಷಗಳೂ ಪ್ರಣಾಳಿಕೆಯಲ್ಲಿ ಭರವಸೆಗಳನ್ನು ನೀಡುತ್ತವೆ. ಅದನ್ನೇ ನಾವು ಮಾಡಿದ್ದೇವೆ. ಆರೋಗ್ಯ ಎಂಬುದು ರಾಜ್ಯ ಪಟ್ಟಿಯಲ್ಲಿ ಬರುವ ವಿಷಯ. ಹೀಗಾಗಿ ನಿಯಮಬದ್ಧವಾಗಿಯೇ ಇದೆ’ ಎಂದು ಶನಿವಾರ ಸುದ್ದಿಗಾರರಿಗೆ ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ