ಏ. 12ರಿಂದ ತಿಮ್ಮಪ್ಪನ ಉಚಿತ ದರ್ಶನ ಬಂದ್‌

Kannadaprabha News   | Asianet News
Published : Apr 09, 2021, 07:48 AM ISTUpdated : Apr 09, 2021, 08:16 AM IST
ಏ. 12ರಿಂದ ತಿಮ್ಮಪ್ಪನ ಉಚಿತ ದರ್ಶನ ಬಂದ್‌

ಸಾರಾಂಶ

 ಏ.12ರಿಂದಲೇ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನಕ್ಕಾಗಿ ನೀಡಲಾಗುವ ಸರ್ವ ದರ್ಶನ ಟೋಕನ್‌ಗಳ ವಿತರಣೆಯನ್ನು ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. 

ತಿರುಪತಿ (ಏ.09): ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಏ.12ರಿಂದಲೇ ಭಕ್ತರಿಗೆ ತಿರುಪತಿ ತಿಮ್ಮಪ್ಪನ ಉಚಿತ ದರ್ಶನಕ್ಕಾಗಿ ನೀಡಲಾಗುವ ಸರ್ವ ದರ್ಶನ ಟೋಕನ್‌ಗಳ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ನಿರ್ಧರಿಸಲಾಗಿದೆ.

 ತಿರುಪತಿಯಲ್ಲಿರುವ ಭೂದೇವಿ ಕಟ್ಟಡ ಮತ್ತು ವಿಷ್ಣು ನಿವಾಸಂನಲ್ಲಿ ತಿರುಪತಿ ತಿಮ್ಮಪ್ಪನ ಉಚಿತ ದರ್ಶನ ಕಲ್ಪಿಸುವ ‘ಸರ್ವ ದರ್ಶನ’ದ ಟೋಕನ್‌ಗಳನ್ನು ವಿತರಿಸಲಾಗುತ್ತದೆ. 

ಚೀನಾಗೆ ಸ್ಮಗಲ್ ಆಗುತ್ತಿದೆ ತಿಮ್ಮಪ್ಪನ ಭಕ್ತರ ಮುಡಿ ಕೂದಲು, ಭಾರತಕ್ಕೆ ಕೋಟಿ ಕೋಟಿ ನಷ್ಟ! ...

ಈ ಟೋಕನ್‌ಗಳಿಗಾಗಿ ಸಾವಿರಾರು ಭಕ್ತರು ವಿಷ್ಣು ನಿವಾಸಂ ಮತ್ತು ಭೂದೇವಿ ಕಟ್ಟಡದಲ್ಲಿ ಬೀಡುಬಿಡುತ್ತಿದ್ದು, ಇದರಿಂದ ಮತ್ತಷ್ಟುಮಂದಿಗೆ ಸೋಂಕು ಹಬ್ಬುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಏ.11ರವರೆಗೆ ಮಾತ್ರವೇ ಟೋಕನ್‌ ವಿತರಿಸಲಾಗುತ್ತದೆ. 

ಆ ನಂತರ ಟೋಕನ್‌ ವಿತರಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗುತ್ತದೆ ಟಿಟಿಡಿ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ