
ಜೈಪುರ (ಏ.02): ರಾಜ್ಯದ ಪ್ರತಿ ಕುಟುಂಬಕ್ಕೂ ವಾರ್ಷಿಕ 5 ಲಕ್ಷ ರು. ವರೆಗೆ ಉಚಿತ ಆರೋಗ್ಯ ವಿಮೆ ಒದಗಿಸುವ ‘ಚಿರಂಜೀವಿ ಆರೋಗ್ಯ ವಿಮೆ’ ಯೋಜನೆಯನ್ನು ರಾಜಸ್ಥಾನ ಸರ್ಕಾರ ಗುರುವಾರ ಜಾರಿಗೊಳಿಸಿದೆ. ಗುರುವಾರದಿಂದಲೇ ಎಲ್ಲರೂ ಹೆಸರು ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದೆ.
ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ‘ರಾಜ್ಯದ ಪ್ರತಿ ನಾಗರಿಕರಿಗೂ ಆರೋಗ್ಯ ವಿಮೆ ಒದಗಿಸುವ ಯೋಜನೆ ಜಾರಿಗೊಳಿಸಿದ್ದೇವೆ. ಜನರು ತಮ್ಮ ಹೆಸರನ್ನು ನೋಂದಾಯಿಸಿ, ನಗದು ರಹಿತ ಚಿಕಿತ್ಸೆ ಪಡೆಯಬಹುದಾಗಿದೆ.
ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಿದವರು ಮತ್ತೆ ಮಾಡಬೇಕಾ? ...
ನೋಂದಣಿ ಗುರುವಾರದಿಂದಲೇ ಆರಂಭವಾಗಲಿದೆ. ಈ ಮೂಲಕ ರಾಜ್ಯದ ಎಲ್ಲ ಕುಟುಂಬಗಳಿಗೂ ವಾರ್ಷಿಕ 5 ಲಕ್ಷ ರು.ವರೆಗೆ ಉಚಿತ ಆರೋಗ್ಯ ವಿಮೆ ಒದಗಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ರಾಜಸ್ಥಾನ ಪಾತ್ರವಾಗಿದೆ’ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ