ದೀಪಾವಳಿಗೆ 1.85 ಕೋಟಿ ಜನರಿಗೆ ಉಚಿತವಾಗಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್

Published : Oct 12, 2024, 03:46 PM IST
ದೀಪಾವಳಿಗೆ 1.85 ಕೋಟಿ ಜನರಿಗೆ ಉಚಿತವಾಗಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್

ಸಾರಾಂಶ

ದೀಪಾವಳಿಗೆ 1.85 ಕೋಟಿ ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಿದೆ. ಸಿಎಂ ಈ ಘೋಷಣೆ ಮಾಡಿದ್ದು, ದೀಪಾವಳಿಗೂ ಮುನ್ನ ವಿತರಣೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನವದೆಹಲಿ: ದೀಪಾವಳಿಗೂ ಮೊದಲೇ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮಹಿಳೆಯರಿಗೆ ಬಂಪರ್‌ ಕೊಡುಗೆಯನ್ನು ಘೋಷಣೆ ಮಾಡಿದೆ. ಈ ವರ್ಷದ ದೀಪಾವಳಿಗೆ ಉತ್ತರ ಪ್ರದೇಶ ಸರ್ಕಾರ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿಯಲ್ಲಿ 1.85  ಕೋಟಿ ಫಲಾನುಭವಿಗಳಿಗೆ ಉಚಿತವಾಗಿ ಎಲ್‌ಪಿಜಿ ಸಿಲಿಂಡರ್ ನೀಡುತ್ತಿದೆ. ಈ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆಯನ್ನು ಸಹ ಮಾಡಿದ್ದಾರೆ. ದೀಪಾವಳಿಗೂ ಮೊದಲೇ ಎಲ್ಲಾ ಫಲಾನುಭವಿಗಳಿಗೆ ಉಚಿತ ಸಿಲಿಂಡರ್ ತಲುಪಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

ದೀಪಾವಳಿ ಹಬ್ಬದ ಹಿನ್ನೆಲೆ ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಹೆಸರು ದಾಖಲಿಸಿಕೊಂಡಿರುವ ಎಲ್ಲಾ ಲಾಭಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೇ ರಾಜ್ಯ ಸರ್ಕಾರದಿಂದಲೇ ಎಲ್‌ಪಿಜಿ ಸಿಲಿಂಡರ್ ವಿತರಣೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಲ್ಲಾ ಪ್ರಕ್ರಿಯೆಗಳನ್ನು ಸರಿಯಾದ ಸಮಯಕ್ಕೆ ಪೂರೈಸಬೇಕು. ದೀಪಾವಳಿಯ ಮೊದಲು ಎಲ್ಲಾ ಫಲಾನುಭವಿಗಳ ಮನೆಗಳಿಗೆ ಎಲ್‌ಪಿಜಿ ಸಿಲಿಂಡರ್ ತಲುಪಿರಬೇಕು ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 

ಕಳೆದ ವರ್ಷವೂ ಸಹ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ದೀಪಾವಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ತಲುಪಿಸಿತ್ತು. ಕಳೆದ ವರ್ಷ 85 ಲಕ್ಷವಿದ್ದ ಫಲಾನುಭವಿಗಳ ಸಂಖ್ಯೆ ಈ ಬಾರಿ 1.85 ಕೋಟಿಗೆ ಏರಿಕೆಯಾಗಿದೆ. ಇದು ಕೇವಲ  ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಹೆಸರು ದಾಖಲಿಸಿಕೊಂಡ ಮಹಿಳೆಯರಿಗೆ ಮಾತ್ರ ಉಚಿತ ಸಿಲಿಂಡರ್ ಸಿಗುತ್ತದೆ.

LPG ಸಿಲಿಂಡರ್ ಬಾಳಿಕೆಗೆ ಏನು ಮಾಡಿದರೊಳಿತು?

ಪ್ರಧಾನಮಂತ್ರಿ ಉಜ್ವಲಾ ಯೋಜನೆಯಡಿ ಎಲ್‌ಪಿಜಿ ಸಿಲಿಂಡರ್ ಮೇಲೆ ಕೇಂದ್ರ ಸರ್ಕಾರ 300 ರೂಪಾಯಿ ಸಬ್ಸಿಡಿಯನ್ನು ನೀಡುತ್ತಿದೆ. ಮೊದಲು ಫಲಾನುಭವಿಗಳು ಪೂರ್ಣ ಹಣ ನೀಡಿ ಸಿಲಿಂಡರ್ ಖರೀದಿಸಬೇಕು. ನಂತರ ಸಬ್ಸಿಡಿ ಹಣವನ್ನು ಸರ್ಕಾರ ಫಲಾನುಭವಿಯ ಖಾತೆಗೆ ಜಮೆ ಮಾಡುತ್ತದೆ. ಫಲಾನುಭವಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರಬೇಕು. 

ಅಕ್ಟೋಬರ್ ತಿಂಗಳಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ಬೆಲೆಯನ್ನು 45 ರಿಂದ 48 ರೂ.ವರೆಗೆ ಏರಿಕೆಯಾಗಿತ್ತು. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿದೆ. ಸದ್ಯ ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,861 ರೂಪಾಯಿ, 14 ಕೆಜಿ ಸಿಲಿಂಡರ್ ಬೆಲೆ 840.50 ರೂಪಾಯಿ ಆಗಿದೆ. ಇದೀಗ ರಾಜ್ಯ ಸರ್ಕಾರದ ಘೋಷಣೆಯಿಂದ  1.85 ಕೋಟಿ ಜನರಿಗೆ 840 ರೂ. ಹಣ ಉಳಿತಾಯವಾಗಲಿದೆ.

ಮನೆಯಲ್ಲಿ LPG ಗ್ಯಾಸ್ ಸೋರಿಕೆ ಆಗುತ್ತಿರೋದನ್ನು ಕಂಡು ಹಿಡಿಯೋದು ಹೇಗೆ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!