ತಮಿಳುನಾಡಲ್ಲಿ ಕಂಪ್ಲೀಟ್ ಲಾಕ್‌ಡೌನ್: ದಿನಸಿ, ತರಕಾರಿ ಅಂಗಡಿಯೂ ಬಂದ್

Suvarna News   | Asianet News
Published : May 23, 2021, 04:48 PM IST
ತಮಿಳುನಾಡಲ್ಲಿ ಕಂಪ್ಲೀಟ್ ಲಾಕ್‌ಡೌನ್: ದಿನಸಿ, ತರಕಾರಿ ಅಂಗಡಿಯೂ ಬಂದ್

ಸಾರಾಂಶ

ದಿನಸಿ, ತರಕಾರಿ ತರೋಕೆ ಅನುಮತಿಸಿದ್ರೆ ರಸ್ತೆಯಲ್ಲಿ ತಿರುಗ್ತಾರೆ ಜನ ಈ ಬಾರಿ ಕಂಪ್ಲೀಟ್ ಲಾಕ್‌ಡೌನ್, ದಿನಸಿ, ತರಕಾರಿ ಯಾವುದೂ ಇಲ್ಲ

ಚೆನ್ನೈ(ಮೇ.23): ತಮಿಳುನಾಡಿನಲ್ಲಿ ಮೇ 31ರ ತನಕ ಲಾಕ್‌ಡೌನ್ ವಿಸ್ತರಿಸಲಾಗಿದ್ದು, ಕಂಪ್ಲೀಟ್ ಲಾಕ್‌ಡೌನ್ ಮುಂದುವರಿಯಲಿದೆ. ಹಾಗೆಯೇ ದಿನಸಿ ಅಂಗಡಿ, ತರಕಾರಿ ಮಾರಾಟಕ್ಕೂ ಬ್ರೇಕ್ ಬೀಳಲಿದೆ. ಮೇ 24ರಿಂದ ಆರಂಭಿಸಿ ಒಂದು ವಾರದ ತನಕ ಯಾವುದೇ ವಿನಾಯಿತಿ ಇಲ್ಲದೆ ಲಾಕ್‌ಡೌನ್ ಇರಲಿದೆ ಎಂದು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ತಮಿಳುನಾಡಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ 36 ಸಾವಿರ ತಲುಪಿದೆ. ಲಾಕ್‌ಡೌನ್ ಅವಧಿಯಲ್ಲಿ ದಿನಸಿ ಮತ್ತು ತರಕಾರಿ ಮಾರುವ ಅಂಗಡಿಗಳು ಕೂಡಾ ಮುಚ್ಚಿರಲಿವೆ ಎಂದು ಸಿಎಂ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರ ಸಮಿತಿ ಕೊರೋನಾ ನಿರ್ಬಂಧಗಳನ್ನು ಇನ್ನಷ್ಟು ಸ್ಟ್ರಿಕ್ಟ್ ಮಾಡುವಂತೆ ಸಲಹೆ ನೀಡಿದೆ.

ತಮಿಳುನಾಡು ಪಾಸ್‌ ಪಡೆದು ಕರ್ನಾಟಕಕ್ಕೆ ಬಂದ್ರೆ ವಾಹನ ಸೀಜ್

ಶಾಸಕರೊಂದಿಗೆ ಸಭೆ ನಡೆಸಿದ ಸಿಎಂ ಸ್ಟಾಲಿನ್, ಲಾಕ್‌ಡೌನ್ ಹಿನ್ನೆಲೆ 22ರಂದು ರಾತ್ರಿ 9 ಗಂಟೆಯ ತನಕ ಅಂಗಡಿ ತೆರೆದಿರಲು ಅನುಮತಿಸಿದ್ದಾರೆ.  23 ರಾತ್ರಿ 9ರ ತನಕ ಬಸ್‌ ಓಡಾಟಕ್ಕೂ ಅನುಮತಿಸಲಾಗಿತ್ತು.

ಈ ಹಿಂದೆ ದಿನಸಿ, ತರಕಾರಿ ಖರೀದಿಗೆ ಅನುಮತಿಸಲಾಗಿತ್ತು. ಆದರೆ ಬಹಳಷ್ಟು ಜನ ಇದನ್ನು ದುರುಪಯೋಗಪಡಿಸಿದ್ದಾರೆ. ಅನಗತ್ಯ ರಸ್ತೆಯಲ್ಲಿ ತಿರುಗುತ್ತಿದ್ದಾರೆ.  ಪೊಲೀಸರ ಸೂಚನೆ ಇದ್ದರೂ ನಿಯಮ ಪಾಲಿಸುತ್ತಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana