ಇಂದಿನಿಂದ 3 ದಿನ ಬೆಂಗಳೂರಲ್ಲಿ ಜಿ20 ದೇಶಗಳ ಸಭೆ

Published : Dec 13, 2022, 08:48 AM IST
ಇಂದಿನಿಂದ 3 ದಿನ ಬೆಂಗಳೂರಲ್ಲಿ ಜಿ20 ದೇಶಗಳ ಸಭೆ

ಸಾರಾಂಶ

20 ದೇಶಗಳ ಹಣಕಾಸು ಸಚಿವರು, ಕೇಂದ್ರೀಯ ಬ್ಯಾಂಕ್‌ ಮುಖ್ಯಸ್ಥರು ಭಾಗಿ, ಹಣಕಾಸು ವಿಚಾರದಲ್ಲಿ ದೇಶಗಳ ನಡುವೆ ಸಹಯೋಗವೇ ಮುಖ್ಯ ಅಜೆಂಡಾ 

ಬೆಂಗಳೂರು(ಡಿ.13):  ಜಗತ್ತಿನ ಪ್ರಭಾವಿ ದೇಶಗಳ ಒಕ್ಕೂಟ ಎನ್ನಿಸಿಕೊಂಡಿರುವ ಜಿ20 ದೇಶಗಳ ಹಣಕಾಸು ಸಚಿವರು ಹಾಗೂ ಸೆಂಟ್ರಲ್‌ ಬ್ಯಾಂಕ್‌ ಗವರ್ನರುಗಳ ಸಭೆ ಇಂದಿ(ಮಂಗಳವಾರ)ನಿಂದ 3 ದಿನ ಬೆಂಗಳೂರಿನಲ್ಲಿ ನಡೆಯಲಿದೆ. ‘ಹಣಕಾಸು ಹೆಜ್ಜೆಗುರುತು’ ಕಾರ್ಯಸೂಚಿಯೊಂದಿಗೆ ಸಭೆ ನಡೆಯಲಿದೆ. ಹಣಕಾಸು ವಿಚಾರಗಳಲ್ಲಿ ಸಹಯೋಗ ಸಾಧಿಸುವ ಬಗ್ಗೆ ಸಮಾಲೋಚನೆಗಳು ನಡೆಯಲಿವೆ. ಜಿ20 ದೇಶಗಳ ಹಣಕಾಸು ಹಾಗೂ ಕೇಂದ್ರೀಯ ಬ್ಯಾಂಕುಗಳ ಉಪ ಮುಖ್ಯಸ್ಥರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಭಾರತದ ಹಣಕಾಸು ಸಚಿವಾಲಯ ಹಾಗೂ ರಿಸರ್ವ್‌ ಬ್ಯಾಂಕ್‌ಗಳು ಈ ಸಭೆಯ ಆತಿಥ್ಯ ವಹಿಸಿಕೊಂಡಿವೆ. ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಆರ್‌ಬಿಐ ಉಪ ಗವರ್ನರ್‌ ಮೈಕೆಲ್‌ ಡಿ. ಪಾತ್ರಾ ಅವರು ಈ ಸಭೆಯ ಜಂಟಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

G20 Summit: ಜಿ20 ಅಧ್ಯಕ್ಷತೆ ಅವಧಿ ಭಾರತಕ್ಕೆ ನಿರ್ಣಾಯಕ

ಜಿ20 ಸದಸ್ಯ ರಾಷ್ಟ್ರಗಳ ವಿತ್ತ ಹಾಗೂ ಕೇಂದ್ರೀಯ ಬ್ಯಾಂಕುಗಳ ಉಪಮುಖ್ಯಸ್ಥರು ಮಾತ್ರವಲ್ಲದೇ, ಭಾರತ ಆಹ್ವಾನಿಸಿರುವ ವಿವಿಧ ದೇಶಗಳ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯ ಬಳಿಕವೂ ಹಣಕಾಸಿಗೆ ಸಂಬಂಧಿಸಿದಂತೆ ಒಂದು ವರ್ಷದ ಅವಧಿಯಲ್ಲಿ ದೇಶಾದ್ಯಂತ 40 ಸಭೆಗಳು ನಡೆಯಲಿವೆ.

ಸಭೆಯ ಅಜೆಂಡಾ ಏನು?:

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಸುಸ್ಥಿರ ಹಣಕಾಸು, ಜಾಗತಿಕ ಆರೋಗ್ಯ, ಅಂತಾರಾಷ್ಟ್ರೀಯ ತೆರಿಗೆ ಪದ್ಧತಿ ಹಾಗೂ ಹಣಕಾಸು ವಲಯದ ವಿಷಯಗಳು ಸೇರಿದಂತೆ ಜಾಗತಿಕ ಪ್ರಸ್ತುತತೆ ಕುರಿತು ಗಹನವಾದ ಚರ್ಚೆ ನಡೆಯಲಿದೆ.
ಇದೇ ವೇಳೆ, 21ನೇ ಶತಮಾನದ ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳನ್ನು ಬಲಯುತಗೊಳಿಸುವ ಕುರಿತು ಸಂವಾದ ನಡೆಯಲಿದೆ. ಮತ್ತೊಂದೆಡೆ, ಹಸಿರು ಆರ್ಥಿಕತೆಯಲ್ಲಿ ಕೇಂದ್ರೀಯ ಬ್ಯಾಂಕುಗಳ ಪಾತ್ರ ಕುರಿತು ವಿಚಾರ ಸಂಕಿರಣವೂ ಆಯೋಜನೆಗೊಂಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್