ಭೂಸೇನಾ ಮುಖ್ಯಸ್ಥರಾಗಿ ಜನರಲ್ ಮುಕುಂದ್ ನಾರವಾನೆ ಅಧಿಕಾರ ಸ್ವೀಕಾರ!

Published : Dec 31, 2019, 02:48 PM ISTUpdated : Dec 31, 2019, 03:36 PM IST
ಭೂಸೇನಾ ಮುಖ್ಯಸ್ಥರಾಗಿ ಜನರಲ್ ಮುಕುಂದ್ ನಾರವಾನೆ ಅಧಿಕಾರ ಸ್ವೀಕಾರ!

ಸಾರಾಂಶ

ಭಾರತೀಯ ಭೂಸೇನೆಗೆ ಹೊಸ ಸಾರಥಿ| ಭೂಸೇನಾ ಮುಖ್ಯಸ್ಥರಾಗಿ ಜನರಲ್ ಮುಕುಂದ್ ನಾರವಾನೆ ಅಧಿಕಾರ ಸ್ವೀಕಾರ| ಜನರಲ್ ಬಿಪಿನ್ ರಾವತ್ ಅವರಿಂದ ತೆರವಾದ ಸ್ಥಾನ| ಬಿಪಿನ್ ರಾವತ್ ದೇಶದ ಮೊದಲ CDS ಆಗಿ ನೇಮಕ| 37 ವರ್ಷಗಳ ಸುದೀರ್ಘ ಸೇವೆಯ ಅನುಭವ ಹೊಂದಿರುವ ಜನರಲ್ ಮನೋಜ್| ಭೂಸೇನೆಯ ಪೂರ್ವ ಕಮಾಂಡ್‌ನ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದ ನಾರವಾನೆ|

ನವದೆಹಲಿ(ಡಿ.31): ಭಾರತೀಯ ಭೂಸೇನಯ ನೂತನ ಮುಖ್ಯಸ್ಥರಾಗಿ ಜನರಲ್.ಮನೋಜ್ ಮುಕುಂದ್ ನಾರವಾನೆ ಅಧಿಕಾರ ಸ್ವೀಕರಿಸಿದ್ದಾರೆ. 

ಹಾಲಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಂದ ತೆರವಾದ ಸ್ಥಾನಕ್ಕೆ ಮುಕುಂದ್ ನಾರವಾನೆ ಅವರನ್ನು ನೇಮಿಸಲಾಗಿದೆ.

ಬಿಪಿನ್ ರಾವತ್ ದೇಶದ ಮೊದಲ CDS ಆಗಿ ನೇಮಕಗೊಂಡಿದ್ದು, ಈ ಮೂಲಕ ಮೂರೂ ಸೇನಾ ಪಡೆಗೆ ಸಂಬಂಧಿಸಿದ ವಿಚಾರಗಳಲ್ಲಿ ಸಮನ್ವಯ ಸಾಧಿಸಲು ರಕ್ಷಣಾ ಸಚಿವರಿಗೆ ಪ್ರಧಾನ ಸಲಹೆಗಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಮಿಲಿಟರಿಗೆ ಹೊಸ ಬಾಸ್‌: ಬಿಪಿನ್ ರಾವತ್ ದೇಶದ ಮೊದಲ CDS!

ಸೇನೆಯಲ್ಲಿ ಸುಮಾರು 37 ವರ್ಷಗಳ ಸೇವೆಯ ಅನುಭವ ಹೊಂದಿರುವ ಜನರಲ್ ಮನೋಜ್, ಈ ಅವಧಿಯಲ್ಲಿ ಚೀನಾ ಗಡಿ, ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಮಹತ್ವದ ಹುದ್ದೆಗಳನ್ನು ನಿರ್ವಹಿಸಿದ್ದಾರೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಜಾಗಕ್ಕೆ ಅನುಭವಿ ಯೋಧ

ಈ ಸುದೀರ್ಘ ಸೇವೆಯಲ್ಲಿ ಜನರಲ್ ಮನೋಜ್ ನಾರವಾನೆ ಅವರಿಗೆ ಈಗಾಗಲೇ ವಿಶಿಷ್ಟ ಸೇವಾ ಪದಕ, ಅತೀ ವಿಶಿಷ್ಠ ಸೇವಾ ಪದಕಗಳು ಸಂದಿವೆ. ಮುಕುಂದ್ ನಾರವಾನೆ ನೇತೃತ್ವದಲ್ಲಿ ಭಾರತೀಯ ಭೂಸೇನೆ ಮತ್ತಷ್ಟು ಸದೃಢವಾಗಲಿದೆ ಎಂದು ನಿರ್ಗಮಿತ ಭೂಸೇನಾ ಮುಖ್ಯಸ್ಥ ಬಿಪಿನ್ ರಾವತ್ ಭರವಸೆ ವ್ಯಕ್ತಪಡಿಸಿದ್ದಾರೆ.

ನಾರವಾನೆ ಸೇನೆಯ ಉಪ ಮುಖ್ಯಸ್ಥರಾಗುವುದಕ್ಕೂ ಮುನ್ನ ಕೋಲ್ಕತಾದಲ್ಲಿ ಪ್ರಧಾನ ಕಚೇರಿಯಿರುವ ಭೂಸೇನೆಯ ಪೂರ್ವ ಕಮಾಂಡ್‌ನ ಕಮಾಂಡರ್ ಆಗಿ ಸೇವೆ ಸಲ್ಲಿಸಿದ್ದರು.

ಜನರಲ್ ಮನೋಜ್ ನಾರವಾನೆ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ನುಸುಳುಕೋರರ ವಿರುದ್ಧ ಕಾರ್ಯಾಚರಣೆಗಳ ತಂತ್ರದ ರೂವಾರಿ ಕೂಡ ಹೌದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live:ಸ್ವತಃ ಏರ್‌ಪೋರ್ಟಿಗೇ ತೆರಳಿ ಪುಟಿನ್‌ಗೆ ಪ್ರಧಾನಿ ಮೋದಿ ಅಚ್ಚರಿಯ ಸ್ವಾಗತ
ತಾಯ್ನಾಡಿನ ರಕ್ಷಣೆಗೆ ಅಂಬೇಡ್ಕರರ ಪ್ರತಿಜ್ಞೆ- ದೇಶದ ರಕ್ಷಣೆ, ಅಭಿವೃದ್ಧಿ ಬಗ್ಗೆ ಯೋಚಿಸುತ್ತಿದ್ದವರು