ಹೆದ್ದಾರಿಗಳಲ್ಲಿ 20 ಕಿ.ಮೀ.ವರೆಗೆ ಪ್ರಯಾಣಕ್ಕೆ ಟೋಲ್‌ ಇಲ್ಲ: ಕಂಡೀಷನ್ ಅಪ್ಲೈ! ಕರ್ನಾಟಕದ ಈ ಮಾರ್ಗದಲ್ಲಿ ಚಾಲನೆ

Published : Sep 11, 2024, 07:48 AM IST
ಹೆದ್ದಾರಿಗಳಲ್ಲಿ 20 ಕಿ.ಮೀ.ವರೆಗೆ ಪ್ರಯಾಣಕ್ಕೆ ಟೋಲ್‌ ಇಲ್ಲ: ಕಂಡೀಷನ್ ಅಪ್ಲೈ! ಕರ್ನಾಟಕದ ಈ ಮಾರ್ಗದಲ್ಲಿ ಚಾಲನೆ

ಸಾರಾಂಶ

ಜಿಎನ್‌ಎಸ್‌ಎಸ್‌ ಅಳವಡಿಸಿದ ವಾಹನಗಳ ಮಾಲೀಕರಿಗೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಗುಡ್ ನ್ಯೂಸ್ ನೀಡಿದೆ. ಪ್ರಾಯೋಗಿಕವಾಗಿ ರಾಜ್ಯದ ಒಂದು ಮಾರ್ಗದಲ್ಲಿ ಜಿಎನ್‌ಎಸ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.

ನವದೆಹಲಿ: ಗ್ಲೋಬಲ್‌ ನೇವಿಗೇಶನ್ ಸ್ಯಾಟಲೈಟ್‌ ಸಿಸ್ಟಮ್‌ (ಜಿಎನ್‌ಎಸ್‌ಎಸ್‌- ಪ್ರಯಾಣಿಸಿದ ದೂರಕ್ಕಷ್ಟೇ ಶುಲ್ಕ ವಿಧಿಸಲು ಅನುವು ಮಾಡುವ ವ್ಯವಸ್ಥೆ) ಅಳವಡಿಸಿಕೊಂಡ ಖಾಸಗಿ ವಾಹನಗಳಿಗೆ, ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ 20 ಕಿ.ಮೀವರೆಗಿನ ಪ್ರಯಾಣಕ್ಕೆ ಶುಲ್ಕ ವಿಧಿಸದೇ ಇರುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ರಾಷ್ಟ್ರೀಯ ಹೆದ್ದಾರಿ ಶುಲ್ಕ ಕಾಯ್ದೆ, 2008ಕ್ಕೆ ತಿದ್ದುಪಡಿ ತರುವ ಮೂಲಕ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಹೊಸ ನಿಯಮಗಳ ಅನ್ವಯ, ‘ಮೊದಲಿನ 20 ಕಿ.ಮೀ ದೂರ ಪ್ರಯಾಣದವರೆಗೆ ಟೋಲ್‌ ಅನ್ವಯಿಸದು. 20 ಕಿ.ಮೀ. ದಾಟಿದ ನಂತರ ವಾಹನವು ಪ್ರಯಾಣಿಸಿದ ದೂರಕ್ಕೆ ಮಾತ್ರವೇ ಶುಲ್ಕ ಕಡಿತ ಮಾಡಲಾಗುತ್ತದೆ. 20 ಕಿ.ಮೀ. ಎಂಬುದು 1 ದಿನದ ಕೋಟಾ ಆಗಿದ್ದು, ಪ್ರತಿದಿನ 20 ಕಿ.ಮೀ.ನಷ್ಟು ಉಚಿತವಾಗಿ ಸಂಚರಿಸಬಹುದಾಗಿದೆ. ಜೊತೆಗೆ ಎರಡೂ ದಿಕ್ಕಿನಲ್ಲಿ ಮಾಡುವ ಎರಡೂ ಪ್ರತ್ಯೇಕ ಪ್ರಯಾಣಕ್ಕೂ ಈ ನಿಯಮ ಅನ್ವಯಿಸುತ್ತದೆ. ಈ ಹಿಂದಿನಂತೆ ಇಡೀ ಟೋಲ್‌ ವ್ಯಾಪ್ತಿಗೆ ಒಳಪಟ್ಟ ಅಷ್ಟೂ ದೂರಕ್ಕೆ ಶುಲ್ಕ ವಸೂಲಿ ಮಾಡುವುದಿಲ್ಲ’ ಎಂದು ಸರ್ಕಾರ ಮಾಹಿತಿ ನೀಡಿದೆ.

ಜಿಎನ್‌ಎಸ್‌ಎಸ್‌ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಹರ್ಯಾಣದ ಪಾಣಿಪತ್‌- ಹಿಸಾರ್‌ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತಂದಿದೆ.

ಪರಿಸರದ ರಕ್ಷಣೆ, ಭವಿಷ್ಯಕ್ಕಾಗಿ ಹಸಿರು ಇಂಧನ ಬಳಸಿ: ಸಚಿವ ನಿತಿನ್ ಗಡ್ಕರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!