
ಭೋಪಾಲ್(ಜು.01): ಕೊರೋನಾ ಹಾವಳಿ ಸೃಷ್ಟಿಸಿದ ಆರ್ಥಿಕ ಬಿಕ್ಕಟ್ಟು ಮಧ್ಯೆಯೇ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ಸಂಗ್ರಹಿಸುತ್ತಿವೆ ಎಂದು ಅಳಲು ತೋಡಿಕೊಂಡ ಪೋಷಕರಿಗೆ ಮಧ್ಯಪ್ರದೇಶ ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಅವರು ‘ಹೋಗಿ ಸಾಯಿರಿ’ ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
ಇತ್ತೀಚೆಗಷ್ಟೇ ಸುಮಾರು 90-100 ವಿದ್ಯಾರ್ಥಿಗಳ ಪೋಷಕರು ಸಚಿವರ ನಿವಾಸಕ್ಕೆ ಭೇಟಿ ನೀಡಿ, ‘ಹೆಚ್ಚುವರಿ ಶುಲ್ಕ ವಿಧಿಸಬಾರದೆಂಬ ಹೈಕೋರ್ಟ್ ಆದೇಶಗಳನ್ನು ಗಾಳಿಗೆ ತೂರಿ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿವೆ. ಈ ಸಂಬಂಧ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ. ನಾವೇನು ಮಾಡಬೇಕು?’ ಎಂದು ಪ್ರಶ್ನಿಸಿದರು. ಆಗ ಸಚಿವರು ‘ಹೋಗಿ ಸಾಯಿರಿ, ನಿಮಗೇಗೆ ಇಷ್ಟಬರುತ್ತೋ ಹಾಗೆ ಮಾಡಿ’ ಎಂದು ಉಡಾಫೆಯಾಗಿ ಹೇಳಿದ್ದಾರೆ.
ಇದರ ಬೆನ್ನಲ್ಲೇ ಪರ್ಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಕಾಂಗ್ರೆಸ್ ಮತ್ತು ಪೋಷಕರ ಸಂಘಟನೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಆಗ್ರಹಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ