ಮೋದಿ ಮುಂದೆ ಗೋವಾ ಸಿಎಂ ಮಹದಾಯಿ ಕ್ಯಾತೆ

Kannadaprabha News   | Asianet News
Published : Feb 21, 2021, 12:55 PM IST
ಮೋದಿ ಮುಂದೆ ಗೋವಾ ಸಿಎಂ ಮಹದಾಯಿ ಕ್ಯಾತೆ

ಸಾರಾಂಶ

ನೀತಿ ಆಯೋಗದ ಸಭೆಯಲ್ಲಿ ಮಹದಾಯಿ ವಿಷಯ ಪ್ರಸ್ತಾಪಿಸಿದ ಗೋವಾ ಸಿಎಂ ಪ್ರಮೋದ್‌ ಸಾವಂತ್‌| ಮಹದಾಯಿ ನದಿಯನ್ನು ಕರ್ನಾಟಕ ತಿರುಗಿಸಿದರೆ ಗೋವಾ ಪರಿಸರ ಹಾಗೂ ಕುಡಿಯುವ ನೀರಿನ ಲಭ್ಯತೆ ಮೇಲೆ ಭಾರೀ ದುಷ್ಪರಿಣಾಮ ಬೀರಲಿದೆ ಎಂದು ಪ್ರಧಾನಿ ಮೋದಿಗೆ ತಿಳಿಸಿದ ಪ್ರಮೋದ್‌ ಸಾವಂತ್‌| 

ಪಣಜಿ(ಫೆ.21): ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಜರುಗಿದ ನೀತಿ ಆಯೋಗದ ಸಭೆಯಲ್ಲಿ ಕರ್ನಾಟಕದ ಜತೆಗಿನ ಮಹದಾಯಿ ನದಿ ನೀರು ಹಂಚಿಕೆ ವಿವಾದ ಕೆದಕಿದ್ದಾರೆ. 

ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನೀತಿ ಆಯೋಗದ ಸಭೆಯಲ್ಲಿ ಮಹದಾಯಿ ವಿಷಯ ಪ್ರಸ್ತಾಪಿಸಿ, ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ ಎಂದು ತಿಳಿಸಿದೆ ಎಂದು ಹೇಳಿದ್ದಾರೆ.

'ಮಹದಾಯಿ ಕಾಮಗಾರಿ ಆರಂಭಿಸದಿದ್ದರೆ ಬೆಂಗಳೂರು ಚಲೋ'

ಮಹದಾಯಿ ನದಿಯನ್ನು ಕರ್ನಾಟಕ ತಿರುಗಿಸಿದರೆ ಗೋವಾ ಪರಿಸರ ಹಾಗೂ ಕುಡಿಯುವ ನೀರಿನ ಲಭ್ಯತೆ ಮೇಲೆ ಭಾರೀ ದುಷ್ಪರಿಣಾಮ ಬೀರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದೆ. ಈಗ ನೀರಿನ ಕೊರತೆ ಆಗದಿದ್ದರೂ ಮುಂದಿನ ದಿನಗಳಲ್ಲಿ ನೀರು ಕೊರತೆ ಆಗಲಿದೆ ಎಂದು ತಿಳಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ₹610 ಕೋಟಿ ಟಿಕೆಟ್‌ ಹಣ ವಾಪಸ್‌ ನೀಡಿದ ಇಂಡಿಗೋ; ಪ್ರಯಾಣಿಕರಿಗೆ ತಲುಪಿದ ಲಗೇಜ್
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !