
ಪಣಜಿ(ಜ.10): ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ನಾಲ್ವರು ಗೋವಾ ನಾಯಕರು ಪಕ್ಷ ತ್ಯಜಿಸಿದ ಬೆನ್ನಲ್ಲೇ, ರಾಜ್ಯದ ಮತ್ತೋರ್ವ ಕಾಂಗ್ರೆಸ್ ನಾಯಕ ಸಿಎಎ ಬೆಂಬಲಿಸಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಉತ್ತಮ ಕಾಯ್ದೆಯಾಗಿದ್ದು, ಇದನ್ನು ಒಪ್ಪಿಕೊಳ್ಳುವ ಮೂಲಕ ಜನತೆ ಕೇಂದ್ರ ಸರ್ಕಾರವನ್ನು ಬೆಂಬಲಿಸಬೇಕು ಎಂದು ಗೋವಾ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಂಸದ ಜಾನ್ ಫರ್ನಾಂಡೀಸ್ ಕರೆ ನೀಡಿದ್ದಾರೆ.
ಇದು ಮಮತೆಯ ತಿರುವು: ಸಿಎಎ ವಿರೋಧಿಗಳಿಂದ ದೂರದ ಕುರುಹು!
ಸಿಎಎ ವಿರೋಧಿಸಿ ನಡೆಯುತ್ತಿರುವ ಹೋರಾಟ ಅಪ್ರಸ್ತುತ ಎಂದಿರುವ ಜಾನ್ ಫರ್ನಾಂಡೀಸ್, ಸಂಸತ್ತು ಪಾಸು ಮಾಡಿದ ಕಾನೂನನ್ನು ಗೌರವಿಸಬೇಕು ಎಂದು ಹೇಳಿದ್ದಾರೆ.
ಸಿಎಎ ವಿರೋಧಿಸಿ ಜಾಮಿಯಾ ಮಿಲ್ಲಿಯಾ ವಿವಿ ಹಾಗೂ ಜೆಎನ್ಯು ಕ್ಯಾಂಪಸ್ನಲ್ಲಿ ನಡೆಯುತ್ತಿರುವ ಹೋರಾಟ ದುರದೃಷ್ಟ ಎಂದು ಜಾನ್ ಫರ್ನಾಂಡೀಸ್ ಅಭಿಪ್ರಾಯಪಟ್ಟಿದ್ದಾರೆ.
CAA ಪರ ಅಭಿಯಾನ: ಬಿಜೆಪಿಗೆ 52 ಲಕ್ಷ ಮಿಸ್ಡ್ ಕಾಲ್!
ಗೋವಾದ ಪ್ರದೇಶ ಕಾಂಗ್ರೆಸ್ ಸಮಿತಿ(GPCC) ಮಾಜಿ ಅಧ್ಯಕ್ಷರಾಗಿರುವ ಜಾನ್ ಫರ್ನಾಂಡೀಸ್, ಸಿಎಎ ಬೆಂಬಲಿಸಿ ಹೇಳಿಕೆ ನೀಡಿರುವುದು ಪಕ್ಷಕ್ಕೆ ತೀವ್ರ ಮುಜುಗರ ತಂದಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ