Goa Elections: ಬಿಜೆಪಿಗೆ ಮತ್ತೊಂದು ಶಾಕ್, ಕಮಲ ಪಾಳಯಕ್ಕೆ ಮಾಜಿ ಸಿಎಂ ಗುಡ್‌ಬೈ!

Published : Jan 22, 2022, 02:14 PM IST
Goa Elections: ಬಿಜೆಪಿಗೆ ಮತ್ತೊಂದು ಶಾಕ್, ಕಮಲ ಪಾಳಯಕ್ಕೆ ಮಾಜಿ ಸಿಎಂ ಗುಡ್‌ಬೈ!

ಸಾರಾಂಶ

* ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರೀ ಹಿನ್ನಡೆ * ಪರಿಕ್ಕರ್ ಪುತ್ರ ಉತ್ಪಲ್ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನ * ಮಾಜಿ ಸಿಎಂ ಲಕ್ಷ್ಮೀಕಾಂತ್ ಪರ್ಸೇಕರ್ ಬಿಜೆಪಿಗೆ ಗುಡ್‌ಬೈ

ಪಣಜಿ(ಜ.22): ಗೋವಾ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರೀ ಹಿನ್ನಡೆಯಾಗಲಿದೆ. ಬಿಜೆಪಿಯ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ನಾಯಕ ಲಕ್ಷ್ಮೀಕಾಂತ್ ಪರ್ಸೇಕರ್ ಘೋಷಿಸಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಕೂಡ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಒಂದು ವಾರದಲ್ಲಿ ಇಬ್ಬರು ಪ್ರಮುಖ ಬಿಜೆಪಿ ನಾಯಕರು ಪಕ್ಷ ತೊರೆದಿರುವುದು ಪಕ್ಷಕ್ಕೆ ದೊಡ್ಡ ನಷ್ಟ ಎಂದು ಪರಿಗಣಿಸಲಾಗಿದೆ. ಇಬ್ಬರೂ ನಾಯಕರಿಗೆ ಅವರ ಸಾಂಪ್ರದಾಯಿಕ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಿಲ್ಲ ಎಂಬುವುದೇ ಇದಕ್ಕೆ ಕಾರಣ. ಹೀಗಾಗಿ ಇವರಿಬ್ಬರೂ ಬಿಜೆಪಿಯಿಂದ ದೂರ ಸರಿದಿದ್ದಾರೆ. 

ಗೋವಾದಲ್ಲಿ ಬಿಜೆಪಿಯನ್ನು ಬಲಪಡಿಸಲು ಮತ್ತು ಅಸ್ತಿತ್ವ ಸಾಧಿಸಲು ದಿವಂಗತ ಮನೋಹರ್ ಪರಿಕ್ಕರ್ ಮತ್ತು ಲಕ್ಷ್ಮೀಕಾಂತ್ ಪರ್ಸೇಕರ್ ಅವರ ಕಠಿಣ ಪರಿಶ್ರಮವೇ ಕಾರಣ ಎಂಬುವುದು ಉಲ್ಲೇಖನೀಯ ವಿಚಾರ. ಇಬ್ಬರೂ ನಾಯಕರು ಗೋವಾದೊಳಗೆ ಸಂಘಟನೆಯನ್ನು ಬಹಳವಾಗಿ ಬಲಪಡಿಸಿದರು ಮತ್ತು ಅವರನ್ನು ಅಧಿಕಾರದ ಏಣಿಯತ್ತ ಕೊಂಡೊಯ್ದರು. ಮನೋಹರ್ ಪರಿಕ್ಕರ್ ನಿಧನರಾಗಿದ್ದಾರೆ. ಅದೇ ಸಮಯದಲ್ಲಿ, ಲಕ್ಷ್ಮೀಕಾಂತ್ ಪರ್ಸೇಕರ್ ಅವರು ತಮ್ಮ ಸಾಂಪ್ರದಾಯಿಕ ಕ್ಷೇತ್ರವಾದ ಮಾಂಡ್ರೆಮ್‌ನಿಂದ ಈ ಬಾರಿಯೂ ಸ್ಪರ್ಧಿಸಲು ಬಯಸಿದ್ದರು, ಆದರೆ ಪಕ್ಷವು ಅವರ ಟಿಕೆಟ್ ಅನ್ನು ಕಡಿತಗೊಳಿಸಿ ಇನ್ನೊಬ್ಬರಿಗೆ ನೀಡಿತು. ಲಕ್ಷ್ಮೀಕಾಂತ್ ಅವರು ಸ್ವತಂತ್ರ ಅಭ್ಯರ್ಥಿಯಾಗಿಯೂ ಸ್ಪರ್ಧಿಸಬಹುದು. ಅದೇ ರೀತಿ ಉತ್ಪಲ್ ಪರಿಕ್ಕರ್ ವಿಷಯದಲ್ಲೂ ನಡೆದಿದೆ. ತಂದೆಯ ಸಾಂಪ್ರದಾಯಿಕ ಕ್ಷೇತ್ರವಾದ ಪಣಜಿಯಿಂದ ಅವರಿಗೆ ಟಿಕೆಟ್ ನೀಡಿಲ್ಲ. ಹೀಗಿರುವಾಗ ಉತ್ಪಲ್ ಬಿಜೆಪಿ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಬಿಜೆಪಿ 9 ಕ್ರಿಶ್ಚಿಯನ್ನರು ಮತ್ತು ಸಾಮಾನ್ಯ ಜಾತಿಯ ಜನರನ್ನು ನಾಮನಿರ್ದೇಶನ ಮಾಡಿದೆ

ಬಿಜೆಪಿಯಿಂದ ಇತ್ತೀಚೆಗೆ ಹೆಸರಿಸಲಾದ 34 ಅಭ್ಯರ್ಥಿಗಳ ಪೈಕಿ ಒಂಬತ್ತು ಮಂದಿ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರಾಗಿದ್ದರೆ, ಪರಿಶಿಷ್ಟ ಪಂಗಡದ ಮೂವರು ಅಭ್ಯರ್ಥಿಗಳು ಸಾಮಾನ್ಯ ಸ್ಥಾನಗಳಿಗೆ ನಾಮನಿರ್ದೇಶನಗೊಂಡಿದ್ದಾರೆ. ಪಕ್ಷವು 9 ಸಾಮಾನ್ಯ ಜಾತಿ ಮುಖಂಡರನ್ನು ಕಣಕ್ಕಿಳಿಸಿದ್ದು, ಪತ್ರಕರ್ತರಿಗೂ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿ 6 ಸ್ಥಾನಗಳಲ್ಲಿ ಪಕ್ಷವು ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಗೋವಾದಲ್ಲಿ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ 40 ಕ್ಷೇತ್ರಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬುವುದು ಉಲ್ಲೇಖನೀಯ. ಆದರೆ ಫಲಿತಾಂಶ ಮಾರ್ಚ್ 10 ರಂದು ಬರಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ₹610 ಕೋಟಿ ಟಿಕೆಟ್‌ ಹಣ ವಾಪಸ್‌ ನೀಡಿದ ಇಂಡಿಗೋ; ಪ್ರಯಾಣಿಕರಿಗೆ ತಲುಪಿದ ಲಗೇಜ್
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 6 !