ಗೋವಾಕ್ಕೆ ಹೊರಟಿದ್ದ ವಿಮಾನ ಬೆಂಗ್ಳೂರಲ್ಲಿ ತುರ್ತು ಭೂಸ್ಪರ್ಶ

Published : Jan 03, 2020, 08:33 AM IST
ಗೋವಾಕ್ಕೆ ಹೊರಟಿದ್ದ ವಿಮಾನ ಬೆಂಗ್ಳೂರಲ್ಲಿ ತುರ್ತು ಭೂಸ್ಪರ್ಶ

ಸಾರಾಂಶ

ಚೆನ್ನೈನಿಂದ ಗೋವಾಗೆ ಹೊರಟಿದ್ದ ವಿಮಾನ ಬೆಂಗಳೂರಿನಲ್ಲಿ ತುರ್ತು ಭೂ ಸ್ಪರ್ಷ ಮಾಡಿದೆ. ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ. 

ಬೆಂಗಳೂರು [ಜ.03]:  ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈ-ಗೋವಾ ನಡುವೆ ಹಾರಾಟ ಮಾಡುತ್ತಿದ್ದ ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

68 ಮಂದಿ ಪ್ರಯಾಣಿಕರನ್ನು ಹೊತ್ತ ಸ್ಪೈಸ್‌ ಜೆಟ್‌ ಎಸ್‌ಜಿ-3105 ವಿಮಾನ ಬೆಳಗ್ಗೆ 11.04ಕ್ಕೆ ಚೆನ್ನೈನಿಂದ ಹೊರಟು ಮಧ್ಯಾಹ್ನ 12.10ಕ್ಕೆ ಗೋವಾ ತಲುಪಬೇಕಿತ್ತು. ಆದರೆ, ಚೆನ್ನೈನಿಂದ ಹೊರಟ ನಂತರ ವಿಮಾನದ ಕಾಕ್‌ಪಿಟ್‌ನ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ತಕ್ಷಣ ವಿಮಾನದ ಪೈಲೆಟ್‌ 11.56ಕ್ಕೆ ತುರ್ತು ಭೂಸ್ಪರ್ಶಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂದೇಶ ಕಳುಹಿಸಿದ್ದರು.

ಪೈಲೆಟ್‌ ಕಳುಹಿಸಿದ ಸಂದೇಶ ಪಡೆದ ಕೆಐಎ ಅಧಿಕಾರಿಗಳು ಸ್ಪೈಸ್‌ಜೆಟ್‌ ಎಸ್‌ಜಿ-3105 ವಿಮಾನದ ಭೂಸ್ಪರ್ಶಕ್ಕಾಗಿ ವ್ಯವಸ್ಥೆ ಮಾಡಿಕೊಂಡು ಸಂದೇಶ ರವಾನಿಸಿದ್ದರು. ಇದರಿಂದಾಗಿ ಮಧ್ಯಾಹ್ನ 12.17ಕ್ಕೆ ವಿಮಾನ ಅತ್ಯಂತ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದ್ದು, ವಿಮಾನದಲ್ಲಿದ್ದ 68 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಫಾಸ್ಟ್ಯಾಗ್‌ ಸ್ಕ್ಯಾನರ್ ಕೆಟ್ಟಿದ್ದರೆ ಟೋಲ್‌ ಕಟ್ಟಬೇಕಿಲ್ಲ...

ವಿಂಡ್‌ಶೀಲ್ಡ್‌ ದುರಸ್ತಿ ನಂತರ ಸಂಜೆ 4.30ಕ್ಕೆ ಪ್ರಯಾಣಿಕರೊಂದಿಗೆ ವಿಮಾನ ಗೋವಾಕ್ಕೆ ತೆರಳಿತು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರು ಖಚಿತ ಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯುವ ರೈತನ ಅದ್ಭುತ ಪ್ಲ್ಯಾನ್! ಯೂಟ್ಯೂಬ್ ನೋಡಿ ಲಕ್ಷ ಲಕ್ಷ ಲಾಭ, ಇಲ್ಲಿದೆ ಸೀಕ್ರೆಟ್!
ಕೆಟ್ಟ ಸೇಡು, ಬಿಸಿಯೂಟಕ್ಕೆ ಸಗಣಿ ಪುಡಿ ಬೆರೆಸಿದ ಪಾಪಿ : ಪವಾಡ ರೀತಿಯಲ್ಲಿ 50 ಮಕ್ಕಳ ರಕ್ಷಿಸಿದ ಶಿಕ್ಷಕಿ