
ಕಾನ್ಪುರ(ಜು.28): ಜನರು ಮಾಸ್ಕ್ ಧರಿಸದಿದ್ದರೆ ಪೊಲೀಸರು ದಂಡ ವಿಧಿಸುವುದು ಮಾಮೂಲಿ. ಆದರೆ, ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬೆಕನ್ಗಂಜ್ ಪ್ರದೇಶದಲ್ಲಿ ಮಾಸ್ಕ್ ಹಾಕದಿದ್ದ ಕಾರಣಕ್ಕೆ ಪೊಲೀಸರು ಮೇಕೆಯನ್ನು ಬಂಧಿಸಿರುವ ವಿಚಿತ್ರ ಘಟನೆಯೊಂದು ನಡೆದಿದೆ.
ಬೆಂಗಳೂರಲ್ಲಿ ಮಾಸ್ಕ್ ಧರಿಸದವರಿಂದ 1.5 ಕೋಟಿ ದಂಡ ವಸೂಲಿ
ಪೊಲೀಸರ ಪ್ರಕಾರ, ರಸ್ತೆಯಲ್ಲಿ ಯುವಕನೊಬ್ಬ ಮಾಸ್ಕ್ ಧರಿಸದೆ ಮೇಕೆಯನ್ನು ಹೊಡೆದುಕೊಂಡು ಹೋಗುತ್ತಿದ್ದ. ಪೊಲೀಸ್ ಜೀಪ್ ಕಂಡೊಡನೆ ಆತ ಅಲ್ಲಿಂದ ಓಡಿ ಹೋದ. ಹೀಗಾಗಿ ಮೇಕೆಯನ್ನು ಠಾಣೆಗೆ ಕರೆತರಬೇಕಾಯಿತು ಎಂದು ಹೇಳಿದ್ದಾರೆ.
ಬಳಿಕ ಮೇಕೆಯ ಮಾಲೀಕ ಠಾಣೆಗೆ ಬಂದು ಕ್ಷಮೆ ಕೇಳಿದ್ದರಿಂದ ಪೊಲೀಸರು ಮೇಕೆಯನ್ನು ಬಿಟ್ಟು ಕಳುಹಿಸಿದ್ದಾರೆ. ಜೊತೆಗೆ ಮೇಕೆಯನ್ನು ರಸ್ತೆಯಲ್ಲಿ ಬಿಡದಂತೆ ಎಚ್ಚರಿಕೆಯನ್ನೂ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ