ಉತ್ತರಾಖಂಡ ದುರಂತಕ್ಕೆ ದೇವಿ ಶಾಪ ಕಾರಣ?

Kannadaprabha News   | Asianet News
Published : Feb 12, 2021, 08:40 AM ISTUpdated : Feb 12, 2021, 09:01 AM IST
ಉತ್ತರಾಖಂಡ ದುರಂತಕ್ಕೆ ದೇವಿ ಶಾಪ ಕಾರಣ?

ಸಾರಾಂಶ

ಉತ್ತರಾಖಂಡದಲ್ಲಿ ಭಾರೀ ಪ್ರಮಾಣದಲ್ಲಿ ಹಿಮ ಪ್ರವಾಹ ಉಂಟಾಗಿದ್ದು ಇದರ ಹಿಂದೆ ದೇವಿಯ ಶಾಪವಿದೆ ಎಂದು ಹೇಳಲಾಗುತ್ತಿದೆ. ದೇವಾಲಯ ಧ್ವಂಸವೇ ಇದರ ಕಾರಣ ಎನ್ನಲಾಗಿದೆ

ಚಮೋಲಿ (ಫೆ.12): ನೀರ್ಗಲ್ಲು ಸ್ಫೋಟ ದುರಂತಕ್ಕೆ ದೇವಿಯ ಶಾಪವೇ ಕಾರಣ. ಗ್ರಾಮದಲ್ಲಿದ್ದ ದೇವಿಯ ದೇಗುಲವನ್ನು ನಿರ್ನಾಮ ಮಾಡಿದ್ದರಿಂದ ಈ ಮಟ್ಟಿನ ಸಾವು-ನೋವು ಸಂಭವಿಸಿದೆ ಎಂದು ಸ್ಥಳೀಯರು ಆಪಾದಿಸುತ್ತಿದ್ದಾರೆ. 

ರಿಷಿ ನಗರ ಮತ್ತು ಧೌಲಿಗಂಗಾ ಜಂಕ್ಷನ್‌ನಲ್ಲಿ ರೈನಿ ಗ್ರಾಮದ ದೇವಿಯ ದೇಗುಲ ಇತ್ತು. ನದಿಯ ದಡವನ್ನು ಸುತ್ತಿ ದೇಗುಲಕ್ಕೆ ಹೋಗುವುದು ಕಷ್ಟವಾಗಿತ್ತು. ಹಾಗಾಗಿ ಗ್ರಾಮಸ್ಥರೆಲ್ಲ ಸೇರಿ ಮುಖ್ಯ ದೇಗುಲವನ್ನು ಪ್ರತಿನಿಧಿಸುವ ಸಣ್ಣ ದೇಗುಲವನ್ನು ರಸ್ತೆ ಬದಿ ನಿರ್ಮಿಸಿಕೊಂಡಿದ್ದರು. 

206 ಮಂದಿ ನಾಪತ್ತೆ: ಹೈಟೆಕ್‌ ಶೋಧಕ್ಕೂ ಸಿಗುತ್ತಿಲ್ಲ ನೀರ್ಗಲ್ಲು ಸ್ಫೋಟ ಸಂತ್ರಸ್ತರು!

ಆದರೆ ಕಳೆದ ವರ್ಷ ಸ್ಥಳೀಯ ಅಧಿಕಾರಿಗಳು ಮತ್ತು ಜಲವಿದ್ಯುತ್‌ಗಾರದ ಅಧಿಕಾರಿಗಳು ಭಾರೀ ವಿರೋಧದ ನಡುವೆಯೂ ದೇಗುಲವನ್ನು ಧ್ವಂಸ ಮಾಡಿದ್ದರು. 

ಸದ್ಯ ಪ್ರವಾಹದಿಂದಾಗಿ ಮುಖ್ಯ ದೇಗುಲವೂ ಸಂಪೂರ್ಣ ಕೊಚ್ಚಿ ಹೋಗಿದೆ. ಹೀಗಾಗಿ ಈ ದುರಂತಕ್ಕೆ ದೇವಿಯ ಶಾಪವೇ ಕಾರಣ ಎನ್ನುತ್ತಿದ್ದಾರೆ ಸ್ಥಳೀಯರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?