ಜಿಪಿಎಸ್‌ ತೋರಿದ ದಾರೀಲಿ ಮದುವೆ ಮನೆಗೆ ಹೋಗ್ತಿದ್ದ ಕಾರು ಸೀದಾ ನದಿಗೆ ಬಿದ್ದು ಮೂವರ ಸಾವು!

Published : Nov 25, 2024, 11:13 AM IST
ಜಿಪಿಎಸ್‌ ತೋರಿದ ದಾರೀಲಿ ಮದುವೆ ಮನೆಗೆ ಹೋಗ್ತಿದ್ದ ಕಾರು ಸೀದಾ ನದಿಗೆ ಬಿದ್ದು ಮೂವರ ಸಾವು!

ಸಾರಾಂಶ

ಉತ್ತರ ಪ್ರದೇಶದಲ್ಲಿ ಗೂಗಲ್‌ ಮ್ಯಾಪ್ಸ್‌ನ ತಪ್ಪುದಾರಿಯಿಂದಾಗಿ ಮದುವೆಗೆ ಹೋಗುತ್ತಿದ್ದ ಕಾರು ನದಿಗೆ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಕಾಮಗಾರಿ ನಡೆಯುತ್ತಿದ್ದ ಸೇತುವೆಯನ್ನು ದಾರಿಯಾಗಿ ತೋರಿಸಿದ್ದೇ ದುರಂತಕ್ಕೆ ಕಾರಣ.

ನವದೆಹಲಿ (ನ.25): ಉತ್ತರ ಪ್ರದೇಶದ ಬರೇಲಿಯಲ್ಲಿ ಗೂಗಲ್‌ ಮ್ಯಾಪ್ಸ್‌ನಲ್ಲಿನ ಎಡವಟ್ಟಿನ ಕಾರಣದಿಂದ ಭಾರೀ ದುರಂತ ಸಂಭವಿಸಿದೆ. ಮದುವೆ ಮನೆಗೆ ರೀಚ್‌ ಆಗಲು ವ್ಯಕ್ತಿಗಳು ಗೂಗಲ್‌ ಮ್ಯಾಪ್ಸ್‌ ನೆಚ್ಚಿಕೊಂಡಿದ್ದರು. ಆದರೆ, ಗೂಗಲ್‌ ಮ್ಯಾಪ್‌ ಕಾಮಗಾರಿ ನಡೆಯುತ್ತಿದ್ದ ಬ್ರಿಜ್‌ಅನ್ನು ದಾರಿಯಾಗಿ ತೋರಿಸಿತ್ತು. ಇದರಿಂದಾಗಿ ಈ ಮಾರ್ಗದಲ್ಲಿ ಸಾಗಿದ ಕಾರು, ನದಿಗೆ ಉರುಳಿ ಬಿದ್ದು ಮೂವರು ಸಾವು ಕಂಡಿರುವ ಘಟನೆ ನಡೆದಿದೆ. ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಮ್‌ (ಜಿಪಿಎಸ್‌) ಸಹಾಯದಿಂದ ಸಂಚಾರ ಮಾಡುತ್ತಿದ್ದ ಕಾರು ಇನ್ನೂ ಕಾಮಗಾರಿ ನಡೆಯುತ್ತಿದ್ದ ಸೇತುವೆಯಿಂದ ಉರುಳಿ ನದಿಗೆ ಬಿದ್ದಿದೆ. ಇದರಿಂದಾಗಿ ಮದುವೆ ಮನೆಗೆ ಹೋಗ್ತಿದ್ದ ಮೂವರು ಮಸಣದ ದಾರಿ ಹಿಡಿದಿದ್ದಾರೆ.

ಭಾನುವಾರ ಬರೇಲಿಯಿಂದ ಬದೌನ್‌ ಜಿಲ್ಲೆಯ ದಾತ್‌ಗಂಜ್‌ನಲ್ಲಿ ನಡೆಯಬೇಕಿದ್ದ ಮದುವೆ ಮನೆಗೆ ಹೊರಟಿತ್ತು. ಬೆಳಗ್ಗೆ 10 ಗಂಟೆಯ ವೇಳೆಗೆ ಖಲ್ಪುರ್‌-ದಾತ್‌ಗಂಜ್‌ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದ ಸೇತುವೆಯ ಮಾಹಿತಿ ತಿಳಿಯದೇ ವಾಗವಾಗಿ ಚಲಿಸಿದೆ. ಈ ವೇಳೆ ಕಾರು ರಾಮ್‌ಗಂಗಾ ನದಿಗೆ ಉರುಳಿ ಬಿದ್ದಿದ್ದು ಪ್ರಯಾಣ ಮಾಡುತ್ತಿದ್ದ ಮೂವರು ಸಾವು ಕಂಡಿದ್ದಾರೆ. ಇತ್ತೀಚಿನ ಪ್ರವಾಹದ ವೇಳೆ ಸೇತುವೆಯ ಭಾಗ ಕುಸಿದಿತ್ತು. ಆದರೆ, ಇದು ಜಿಪಿಎಸ್‌ನಲ್ಲಿ ಪರಿಷ್ಕರಣೆ ಆಗದ ಹಿನ್ನಲೆಯಲ್ಲಿ ಈ ದುರಂತ ಸಂಭವಿಸಿದೆ.

ಸಾವು ಕಂಡಿರುವ ಇಬ್ಬರನ್ನು ವಿವೇಕ್‌ ಹಾಗೂ ಅಮಿತ್‌ ಎಂದು ಗುರುತಿಸಲಾಗಿದೆ. ಗುರುಗ್ರಾಮದಿಂದ ಹೊರಟಿಟ್ದದ ಅವರು ದಾತ್‌ಗಂಜ್‌ನಲ್ಲಿ ಸ್ನೇಹಿತನ ಮದುವೆಗಾಗಿ ತೆರಳಿದ್ದರು. 50 ಫೀಟ್‌ನಿಂದ ಕೆಳಗೆ ಕಾರು ಬಿದ್ದಿದ್ದರಿಂದ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಬಹಳ ಸಮಯದ ಬಳಿಕ ಸ್ಥಳೀಯರು ಸೇತುವೆಯ ಮೇಲಿನಿಂದ ಕಾರು ಬಿದ್ದಿದ್ದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು, ನಜ್ಜುಗುಜ್ಜಾದ ಕಾರ್‌ನಿಂದ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಕರ್ನಾಟಕ ಬಜೆಟ್‌ಗಿಂತ 8 ಪಟ್ಟು ಆಸ್ತಿಯ ಒಡೆಯನಾದ ಎಲಾನ್‌ ಮಸ್ಕ್‌!

'ಸೇತುವೆಯ ಮೇಲಿನಿಂದ ರಾಮಗಂಗಾ ನದಿಗೆ ಬಿದ್ದ ಕಾರ್‌ಅನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದೆವು. ವ್ಯಾಗನರ್‌ ಕಾರ್‌ಅನ್ನು ಟ್ಯಾಕ್ಸಿ ಮಾಡಿಕೊಂಡು ಇವರು ಬಂದಿದ್ದರು. ಅಪೂರ್ಣ ಸೇತುವೆಯ ಮೇಲಿನಿಂದ ಬಿದ್ದು ಸಾವು ಕಂಡಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಸಾವಿಗೀಡಾದ ವ್ಯಕ್ತಿಗಳ ಕುಟುಂಬದವರು ತಮ್ಮವರ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ದೂರಿದ್ದಾರೆ. ಅದಲ್ಲದೆ, ಅಪೂರ್ಣ ಸೇತುವೆಗೆ ಬ್ಯಾರಿಕೇಡ್‌ಗಳನ್ನು ಯಾಕೆ ಹಾಕಲಾಗಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿದ್ದಾರೆ.

Chitradurga: ಶೇಂಗಾ ಬೆಳೆದು ಸ್ವತಃ ಕೊಯ್ಲು ಮಾಡಿದ ಮೊಳಕಾಲ್ಮೂರು ಶ್ರೀ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
ವಿಧಾನಸಭೆ ಚುನಾವಣೆಗೆ 42 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್, ರಂಗೇರಿದ ಅಸ್ಸಾಂ ಎಲೆಕ್ಷನ್