
ನವದೆಹಲಿ(ಮೇ.29): ಕೊರೋನಾ ಭೀಕರತೆಗೆ ನಲುಗಿದ ಕುಟುಂಬಗಳಿಗೆ ಕೇಂದ್ರ ಸರ್ಕಾರ ನೆರವು ಘೋಷಿಸಿದೆ. ಈಗಾಗಲೇ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಕೇಂದ್ರ ಸರ್ಕಾರ ಇದೀಗ ಕೊರೋನಾ ವೈರಸ್ ಕಾರಣ ದುಡಿಯುವ ಸದಸ್ಯನ ಕಳೆದುಕೊಂಡ ಕುಟುಂಬಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಮೂಲಕ ನೆರವು ನೀಡಲು ಮುಂದಾಗಿದೆ.
ಕೋವಿಡ್ನಿಂದ ತಬ್ಬಲಿಯಾದ ಮಕ್ಕಳ ಸಬಲೀಕರಣಕ್ಕೆ ಹೊಸ ಯೋಜನೆ ಘೋಷಿಸಿದ ಮೋದಿ!.
ನೌಕರರ ರಾಜ್ಯ ವಿಮಾ ನಿಗಮದಡಿಯಲ್ಲಿ ಕೋವಿಡ್ನಿಂದಾಗಿ ಪ್ರಾಣ ಕಳೆದುಕೊಂಡ ಅವಲಂಬಿತರಿಗೆ ಕುಟುಂಬಕ್ಕೆ ಪಿಂಚಣಿ ನೀಡಲು ನಿರ್ಧರಿಸಲಾಗಿದೆ.ಜೊತೆಗೆ ವಿಮಾ ನೆರವು ಘೋಷಿಸಲಾಗಿದೆ. ಕುಟುಂಬಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆ ತಗ್ಗಿಸಲು ಈ ಯೋಜನೆಗಳು ಸಹಾಯ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
EDLI ಯೋಜನೆಯಡಿ ವಿಮಾ ಪ್ರಯೋಜನಗಳನ್ನು ವರ್ಧಿಸಲಾಗಿದೆ. ಕುಟುಂಬದ ಜೊತೆ ಭಾರತ ಸರ್ಕಾರ ನಿಂತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ
ನೌಕರರ ರಾಜ್ಯ ವಿಮಾ ನಿಗಮ (ESIC) ಅಡಿಯಲ್ಲಿ ಕುಟುಂಬ ಪಿಂಚಣಿ
ಕೊರೋನಾ ಕಾರಣ ಕುಟುಂಬದ ಆಧಾರ ಸ್ಥಂಭವಾಗಿದ್ದ ಸದಸ್ಯರು ನಿಧನರಾದರೆ, ಅವರ ಕುಟುಂಬಕ್ಕೆ ಗೌರವಯುತ ಜೀವನ ನಡೆಸಲು ಸರ್ಕಾರ ಎಲ್ಲಾ ನೆರವು ನೀಡಲಿದೆ. ಇದಕ್ಕಾಗಿ ಇಎಸ್ಐಸಿ ಪಿಂಚಣಿ ಯೋಜನೆ ಪ್ರಯೋಜನ ವಿಸ್ತರಿಸಲಾಗಿದೆ. ಸರಾಸರಿ ದೈನಂದಿನ ವೇತನದ 90% ಗೆ ಸಮಾನವಾದ ಪಿಂಚಣಿ ಸೌಲಭ್ಯವನ್ನು ನೀಡಲಾಗುತ್ತದೆ.
ನೌಕರರ ಭವಿಷ್ಯ ನಿಧಿ ಸಂಸ್ಥೆ- ನೌಕರರ ಠೇವಣಿ ಲಿಂಕ್ಡ್ ಇನ್ಶೂರೆನ್ಸ್ ಸ್ಕೀಮ್ (EDLI)
1) EDLI ಯೋಜನೆಯಡಿ ವಿಮಾ ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ. ನಿರ್ದಿಷ್ಟವಾಗಿ COVID ಯಿಂದ ಪ್ರಾಣ ಕಳೆದುಕೊಂಡ ನೌಕರರ ಕುಟುಂಬಗಳಿಗೆ ಸಹಾಯ ಮಾಡಲಿದೆ.
ವಿಮಾ ಮೊತ್ತವನ್ನು 6 ಲಕ್ಷದಿಂದ 7 ಲಕ್ಷಕ್ಕೆ ರೂಪಾಯಿಗೆ ಹೆಚ್ಚಿಸಲಾಗಿದೆ
2) 2.5 ಲಕ್ಷದ ಕನಿಷ್ಠ ವಿಮಾ ಪ್ರಯೋಜನವನ್ನು ಮರುಸ್ಥಾಪಿಸಲಾಗಿದೆ. ಮುಂದಿನ ಮೂರು ವರ್ಷಗಳವರೆಗೆ ವಿಸ್ತರಿಸಲಾಗಿದೆ
3) ಗುತ್ತಿಗೆ ಹಾಗೂ ಕಾರ್ಮಿಕರ ಕುಟುಂಬಗಳಿಗೆ ಅನುಕೂಲವಾಗುವಂತೆ ಉದ್ಯೋಗದ ಸ್ಥಿತಿಯನ್ನು ಉದಾರೀಕರಣಗೊಳಿಸಲಾಗಿದೆ. ಸಾವಿಗೆ ಮುಂಚಿನ ಕಳೆದ 12 ತಿಂಗಳುಗಳಲ್ಲಿ ಉದ್ಯೋಗಗಳನ್ನು ಬದಲಿಸಿದ ನೌಕರರ ಕುಟುಂಬಗಳಿಗೂ ಪ್ರಯೋಜನವನ್ನು ಒದಗಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ