
ಹೈದರಾಬಾದ್: ರಾಜ್ಯ ಸರ್ಕಾರಗಳು ಕಳುಹಿಸುವ ಮಸೂದೆಗಳಿಗೆ ಅಂಕಿತ ಹಾಕದೆ ತಮ್ಮಲ್ಲೇ ಇಟ್ಟುಕೊಳ್ಳುವ ರಾಜ್ಯಪಾಲರುಗಳ ನಡೆಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು ಪ್ರಶ್ನಿಸಿದ್ದಾರೆ. ರಾಜ್ಯಪಾಲರು ಸಂವಿಧಾನಬದ್ಧವಾಗಿ ಕೆಲಸ ಮಾಡಬೇಕು. ವಿಧೇಯಕಗಳಿಗೆ ಅಂಕಿತ ಹಾಕುವುದಕ್ಕೆ ವಿಳಂಬ ಮಾಡಬಾರದು. ಸಂವಿಧಾನದಡಿ ಸೂಚಿಸಲಾಗಿರುವ ಕರ್ತವ್ಯವನ್ನು ನಿರ್ವಹಿಸುವಂತೆ ರಾಜ್ಯಪಾಲರಿಗೆ ಹೇಳುವುದಕ್ಕೆ ನ್ಯಾಯಾಲಯಗಳಿಗೆ ಮುಜುಗರವಾಗುತ್ತದೆ ಎಂದಿದ್ದಾರೆ.
ಹೈದರಾಬಾದ್ನ ನಾಲ್ಸರ್ ವಿಶ್ವವಿದ್ಯಾಲಯದಲ್ಲಿ ನ್ಯಾಯಾಲಯಗಳು ಹಾಗೂ ಸಂವಿಧಾನ ಕುರಿತ ಸಮ್ಮೇಳನದ ಐದನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಮಾತನಾಡಿದ ಅವರು, ರಾಜ್ಯಪಾಲರ ಕಾರ್ಯನಿರ್ವಹಣೆಯನ್ನು ಸಾಂವಿಧಾನಿಕ ನ್ಯಾಯಾಲಯಗಳ ಮುಂದೆ ತರುವುದು ಆರೋಗ್ಯಯುತ ಬೆಳವಣಿಗೆಯಲ್ಲ. ರಾಜ್ಯಪಾಲರ ಹುದ್ದೆ ಗಂಭೀರ ಸಾಂವಿಧಾನಿಕ ಸ್ಥಾನ. ಸಂವಿಧಾನ ಬದ್ಧವಾಗಿ ರಾಜ್ಯಪಾಲರು ಕಾರ್ಯನಿರ್ವಹಣೆ ಮಾಡಬೇಕು. ತನ್ಮೂಲಕ ನ್ಯಾಯಾಲಯಗಳ ಮುಂದೆ ಇರುವ ಪ್ರಕರಣಗಳ ಸಂಖ್ಯೆಯನ್ನು ಕಡಿತಗೊಳಿಸಬೇಕು ಎಂದು ಸಲಹೆ ಮಾಡಿದ್ದಾರೆ. ತಮಿಳುನಾಡು ಹಾಗೂ ಪಂಜಾಬ್ ರಾಜ್ಯಪಾಲರು ರಾಜ್ಯ ಸರ್ಕಾರದ ಜತೆ ಸಂಘರ್ಷಕ್ಕೆ ಇಳಿದ ಹಿನ್ನೆಲೆಯಲ್ಲಿ ನಾಗರತ್ನ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಕುಟುಂಬ ಪಾಲನೆ ಮುಖ್ಯ, ಹಾಗಂತ ಮಹಿಳೆಯೊಬ್ಬಳೇ ಏಕೆ ತ್ಯಾಗ ಮಾಡಬೇಕು? ಜಸ್ಟೀಸ್ ನಾಗರತ್ನ ಪ್ರಶ್ನೆ
ಬೆಳಗಾವಿ ಗಡಿ ವಿವಾದ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾ.ಬಿವಿ ನಾಗರತ್ನ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ