
ನವದೆಹಲಿ(ಆ.12): ಸಂಸತ್ ಕಲಾಪದ ಕೊನೆಯ ದಿನ ಕೂಡ ವಿಪಕ್ಷಗಳು ರಾಜ್ಯಸಭೆಯಲ್ಲಿ ತೀವ್ರ ಕೋಲಾಹಲ ಎಬ್ಬಿಸಿ, ಮಾರ್ಷಲ್ಗಳೊಂದಿಗೆ ಸಂಘರ್ಷ ನಡೆಸಿದ ಘಟನೆ ನಡೆದಿದೆ. ಕಾಗದಪತ್ರಗಳನ್ನು ವಿಪಕ್ಷ ಸದಸ್ಯರು ಹರಿದು ತೂರಾಡಿದ್ದಾರೆ.
"
ಒಬಿಸಿ ಮಸೂದೆ ಪಾಸಾದ ಬಳಿಕ ವಿಮಾ ಕಂಪನಿಗಳ ಖಾಸಗೀಕರಣ ವಿಧೇಕಯವನ್ನು ಸರ್ಕಾರ ಕೈಗೆತ್ತಿಕೊಂಡಿತು. ಆಗ ಇದನ್ನು ವಿರೋಧಿಸಿ ವಿಪಕ್ಷ ಸದಸ್ಯರು ಸಭಾಪತಿ ಪೀಠದತ್ತ ಮುನ್ನುಗ್ಗಲು ಯತ್ನಿಸಿದರು. ಅವರನ್ನು ತಡೆಯಲು 50 ಪುರುಷ/ಮಹಿಳಾ ಮಾರ್ಷಲ್ಗಳನ್ನು ನಿಯೋಜಿಸಲಾಯಿತು. ಈ ವೇಳೆ ಮಾರ್ಷಲ್ಗಳು ಹಾಗೂ ಸಂಸದರ ನಡುವೆ ಸಂಘರ್ಷ ನಡೆಯಿತು.
"
ಈ ನಡುವೆ, ಪುರುಷ ಸಂಸದರಿದ್ದ ಕಡೆ ಮಹಿಳಾ ಮಾರ್ಷಲ್ಗಳನ್ನು ಹಾಕಲಾಗಿತ್ತು. ಮಹಿಳಾ ಸದಸ್ಯರಿದ್ದ ಕಡೆ ಪುರುಷ ಮಾರ್ಷಲ್ಗಳನ್ನು ಹಾಕಲಾಗಿತ್ತು. ಇದಕ್ಕೆ ಆಕ್ಷೇಪಿಸಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಮಹಿಳಾ ಸಂಸದರಿಗೆ ಸುರಕ್ಷತೆ ಇಲ್ಲ’ ಎಂದು ಕಿಡಿಕಾರಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ