ಮೇ 31 ರವರೆಗೆ ಬೆಳೆ ಸಾಲಕ್ಕೆ ಬಡ್ಡಿ ಸಬ್ಸಿಡಿ ವಿಸ್ತರಣೆ

Suvarna News   | Asianet News
Published : Mar 31, 2020, 09:15 AM IST
ಮೇ 31 ರವರೆಗೆ ಬೆಳೆ ಸಾಲಕ್ಕೆ ಬಡ್ಡಿ ಸಬ್ಸಿಡಿ ವಿಸ್ತರಣೆ

ಸಾರಾಂಶ

ಕೊರೋನಾ ವೈರಸ್‌ ಕಾರಣ ಭಾರತ ಲಾಕ್‌ಡೌನ್‌ ಆಗಿದ್ದು, ಇದರ ಪರಿಣಾಮ ರೈತರ ಮೇಲೂ ಉಂಟಾಗಿದೆ. ಹೀಗಾಗಿ 3 ಲಕ್ಷ ರು.ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ನೀಡುವ ಬಡ್ಡಿ ಸಬ್ಸಿಡಿ ಸೌಲಭ್ಯವನ್ನು ಕೇಂದ್ರ ಸರ್ಕಾರ ಮೇ 31 ರವರೆಗೆ ವಿಸ್ತರಿಸಿದೆ. 

ನವದೆಹಲಿ (ಮಾ. 31): ಕೊರೋನಾ ವೈರಸ್‌ ಕಾರಣ ಭಾರತ ಲಾಕ್‌ಡೌನ್‌ ಆಗಿದ್ದು, ಇದರ ಪರಿಣಾಮ ರೈತರ ಮೇಲೂ ಉಂಟಾಗಿದೆ. ಹೀಗಾಗಿ 3 ಲಕ್ಷ ರು.ವರೆಗಿನ ಅಲ್ಪಾವಧಿ ಬೆಳೆ ಸಾಲಕ್ಕೆ ನೀಡುವ ಬಡ್ಡಿ ಸಬ್ಸಿಡಿ ಸೌಲಭ್ಯವನ್ನು ಕೇಂದ್ರ ಸರ್ಕಾರ ಮೇ 31 ರವರೆಗೆ ವಿಸ್ತರಿಸಿದೆ.

2020ರ ಮಾರ್ಚ್ 1 ರಿಂದ 2020ರ ಮೇ 31 ರ ನಡುವೆ ಮರುಪಾವತಿ ಆಗಬೇಕಾದ 3 ಲಕ್ಷ ರು.ವರೆಗಿನ ಸಾಲಕ್ಕೆ ಬಡ್ಡಿ ಸಬ್ಸಿಡಿ ಸೌಲಭ್ಯ ವಿಸ್ತರಣೆ ಆಗುತ್ತದೆ ಎಂದು ಅದು ಹೇಳಿದೆ.

ಕಚ್ಚಾತೈಲ ಬೆಲೆ 23 ಡಾಲರ್‌ಗೆ ಕುಸಿತ: 17 ವರ್ಷಗಳ ಕನಿಷ್ಠ

ಅಂದರೆ ಬಾಕಿ ಪಾವತಿಗೆ ಇದ್ದ ಅವಧಿಯನ್ನು ವಿಸ್ತರಿಸಲಾಗಿದೆ. ಇದರಿಂದಾಗಿ ರೈತರಿಗೆ ಬಡ್ಡಿ ಸಬ್ಸಿಡಿ ಪಡೆಯಲು ಇನ್ನಷ್ಟುಸಮಯ ಸಿಕ್ಕಂತೆ ಆಗಿದೆ.

ಈ ಪ್ರಕಾರ, 3 ಲಕ್ಷ ರು.ವರೆಗೆ ಅಲ್ಪಾವಧಿ ಬೆಳೆ ಸಾಲ ಪಡೆಯುವವರಿಗೆ ಶೇ.7 ರ ಬಡ್ಡಿ ವಿಧಿಸಲಾಗುತ್ತದೆ. ವಿಳಂಬ ಮಾಡದೇ ಸಮಯಕ್ಕೆ ಸರಿಯಾಗಿ ಸಾಲ ಮರುಪಾವತಿ ಮಾಡಿದವರಿಗೆ ಶೇ.4 ರ ಬಡ್ಡಿ ವಿಧಿಸಲಾಗುತ್ತದೆ ಎಂದು ಕೇಂದ್ರ ಕೃಷಿ ಸಚಿವಾಲಯ ಸೋಮವಾರ ತಿಳಿಸಿದೆ.

ಶೂನ್ಯ ಕೃಷಿಯಿಂದ ಲಕ್ಷಾಂತರ ಲಾಭ ಪಡೆಯುತ್ತಿರುವ ಐಟಿಐ ಪದವೀಧರ!

ಲಾಕ್‌ಡೌನ್‌ ಕಾರಣ ಹಲವು ರೈತರಿಗೆ ಬ್ಯಾಂಕ್‌ಗೆ ತೆರಳಿ ಸಾಲ ಮರುಪಾವತಿ ಮಾಡಲು ಆಗುತ್ತಿಲ್ಲ. ಅಲ್ಲದೆ, ಬೆಳೆಯನ್ನು ಮಾರುವುದು ಕೆಲವರಿಗೆ ಆಗುತ್ತಿಲ್ಲ ಹಾಗೂ ಮಾರಿದ ಬೆಳೆಗೆ ಸಕಾಲಕ್ಕೆ ಹಣ ಸಿಗುತ್ತಿಲ್ಲ. ಈ ಕಾರಣ ಬಡ್ಡಿ ಸಬ್ಸಿಡಿ ವಿಸ್ತರಣೆ ನಿರ್ಧಾರ ಪ್ರಕಟಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು