ದೇಶದ ಆಸ್ತಿ ಮಾರಿದ್ದೇ ಕಾಂಗ್ರೆಸ್: ರಾಹುಲ್ ಮೇಲೆ ನಿರ್ಮಲಾ ಕಿಡಿ!

Published : Aug 26, 2021, 07:35 AM IST
ದೇಶದ ಆಸ್ತಿ ಮಾರಿದ್ದೇ ಕಾಂಗ್ರೆಸ್: ರಾಹುಲ್ ಮೇಲೆ ನಿರ್ಮಲಾ ಕಿಡಿ!

ಸಾರಾಂಶ

* ಕಾಂಗ್ರೆಸ್‌ ಅವಧಿಯಲ್ಲೂ ಹೀಗೆ ಮಾಡಿಲ್ಲವೆ? * ಆಗೇಕೆ ನೀವು ಆದೇಶ ಪ್ರತಿ ಹರಿದು ಹಾಕ​ಲಿ​ಲ್ಲ? * ದೇಶದ ಆಸ್ತಿ ಮಾರಿ ದುಡ್ಡು ಮಾಡಿ​ದ​ವ​ರು ನೀವು * ಆಸ್ತಿ ನಗದೀಕರಣ ಟೀಕಿಸಿದ ರಾಹುಲ್‌ಗೆ ನಿರ್ಮಲಾ ತಿರುಗೇಟು

ಮುಂಬೈ(ಆ.26): ‘6 ಲಕ್ಷ ಕೋಟಿ ರು.ಬಂಡವಾಳ ಸಂಗ್ರಹಣೆ ಸಲುವಾಗಿ ಸೋಮವಾರ ಘೋಷಿಸಲಾದ ಆಸ್ತಿ ನಗದೀಕರಣ ಯೋಜನೆಯನ್ನು ಟೀಕಿಸಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹರಿಹಾಯ್ದಿದ್ದಾರೆ. ‘ಈ ಯೋಜನೆ ಏನು? ಅದರಿಂದ ಏನಾಗುತ್ತದೆ ಎಂಬುದರ ಅರಿವಾದರೂ ರಾಹುಲ್‌ಗಿದೆಯೇ? ದೇಶದ ಆಸ್ತಿ ಮಾರಿ​ದುಡ್ಡು ಮಾಡಿ​ಕೊಂಡ​ವರು ನೀವು’ ಎಂದು ವ್ಯಂಗ್ಯವಾಡಿದ್ದಾರೆ.

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ಮಲಾ ‘2008ರಲ್ಲಿ ಕಾಂಗ್ರೆಸ್‌ ಅವಧಿಯಲ್ಲಿಯೇ ಮುಂಬೈ-ಪುಣೆ ಹೆದ್ದಾರಿ ನಗದೀಕರಣದ ಮೂಲಕ 8000 ಕೋಟಿ ರು. ಸಂಗ್ರಹಿಸಲಾಗಿತ್ತು. ನವದೆಹಲಿ ರೈಲ್ವೆ ನಿಲ್ದಾಣವನ್ನು ಗುತ್ತಿಗೆ ನೀಡಲು ಯುಪಿಎ ಸರ್ಕಾರವೇ ಆಹ್ವಾನ ನೀಡಿತ್ತು. ಹಾಗಿದ್ದರೆ ನೀವು ರೈಲ್ವೆ ನಿಲ್ದಾಣವನ್ನು ಮಾರಿಕೊಂಡಿದ್ದೀರಾ?’ ಎಂದು ಪ್ರಶ್ನಿಸಿದ್ದಾರೆ.

‘ರಾಹುಲ್‌ ಗಾಂಧಿಗೆ ನಿಜವಾಗಲೂ ಯೋಜನೆ ಬಗ್ಗೆ ವಿರೋಧವಿದ್ದರೆ, ಈ ಹಿಂದೆ ತಮ್ಮದೇ ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಪ್ರತಿಯನ್ನು ಹರಿದು ಎಸೆದಂತೆ ಈ ಯೋಜನೆಯ ಪ್ರತಿಗಳನ್ನು ಏಕೆ ಹರಿದು ಎಸೆಯಲಿಲ್ಲ?’ ಎಂದು ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ