
2014 ರಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ 11 ವರ್ಷಗಳ ನಂತರ ಮೊದಲ ಬಾರಿಗೆ ಸರ್ಕಾರ ಮತ್ತು ಉಪ ರಾಷ್ಟ್ರಪತಿಗಳ ನಡುವಿನ ತಿಕ್ಕಾಟ ರಾಜೀನಾಮೆ ನೀಡುವ ಹಂತದ ವರೆಗೆ ಹೋಯಿತಾ? ಎನ್ನುವ ಪ್ರಶ್ನೆ ನಿನ್ನೆ ತಡ ರಾತ್ರಿ 9.35 ಕ್ಕೆ ರಾಷ್ಟ್ರ ಪತಿ ದ್ರೌಪದಿ ಮುರ್ಮು ಅವರಿಗೆ ಜಗದೀಪ್ ಧನ್ ಕರ್ ಉಪ ರಾಷ್ಟ್ರಪತಿ ಸ್ಥಾನಕ್ಕೆ ಸಲ್ಲಿಸಿದ ರಾಜೀನಾಮೆಯ ನಂತರ ಉದ್ಭವವಾಗಿದೆ. ಇಲ್ಲಿಯವರೆಗೂ ಸರ್ಕಾರದ ಕಡೆಯಿಂದಾಗಲಿ ಅಥವಾ ರಾಷ್ಟ್ರಪತಿ ಕಚೇರಿ ಇಂದಾಗಲಿ ಒಂದು ಅಧಿಕೃತ ಹೇಳಿಕೆ ಬರದೇ ಇರುವುದು ಧನ್ ಕರ್ ರಾಜೀನಾಮೆ ಸರ್ಕಾರಕ್ಕೂ ಒಂದು ಆಶ್ಚರ್ಯ ತಂದಿದೆ ಮತ್ತು ಸರ್ಕಾರ ಇದನ್ನು ನಿರ್ವಹಿಸುವುದು ಹೇಗೆ ಎಂಬುದರ ಬಗ್ಗೆ ಏನನ್ನು ಯೋಚಿಸಿಲ್ಲ ಎಂಬುದನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ.
ರಾಷ್ಟ್ರಪತಿಗಳಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ವೈದ್ಯಕೀಯ ಕಾರಣಕ್ಕೆ ರಾಜೀನಾಮೆ ಎಂದು ಜಗದೀಪ್ ಧನ್ ಕರ್ ಹೇಳಿಕೊಂಡರು ಕೂಡ ನಿನ್ನೆ ಸೋಮವಾರ ಅರೋಗ್ಯವಾಗಿ ರಾಜ್ಯಸಭಾ ಸದನದ ಕಲಾಪ ನಿರ್ವಹಿಸಿದ ಉಪರಾಷ್ಟ್ರಪತಿಗಳಿಗೆ ಏಕಾ ಏಕೀ ರಾಜೀನಾಮೆ ಕೊಡಬೇಕು ಅನ್ನಿಸಿದ್ದು ತೆರೆಯ ಹಿಂದೆ ಏನೇನು ನಡೆದಿದೆ ಎಂಬ ಚರ್ಚೆ ಹುಟ್ಟು ಹಾಕಿದ್ದು ಹೊಸ ಹೊಸ ಚರ್ಚೆಗೂ ನಾಂದಿ ಹಾಡುತ್ತಿದೆ.
ಕಾರಣ 1.ಅಲಹಾಬಾದ್ ಹೈ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ತನಿಖೆಗೆ ವಿಪಕ್ಷ ಗಳ ಸಂಸದರು ಕೊಟ್ಟಿದ್ದ ಅರ್ಜಿ ಸ್ವೀಕರಿಸಿದ್ದು ಸರ್ಕಾರ ಮತ್ತು ಧನ್ ಕರ್ ನಡುವೆ ತಿಕ್ಕಾಟಕ್ಕೆ ಕಾರಣ ಆಯಿತಾ?
2.ಸರ್ಕಾರವನ್ನು ಕಿಂಚಿತ್ತೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ವಿಪಕ್ಷ ಸಂಸದರು ಕೊಟ್ಟ ಅರ್ಜಿ ಸ್ವೀಕರಿಸಿ ಸೇಕ್ರೆಟರಿ ಜೆನೆರಲ್ ಗೆ ನಿರ್ದೇಶನ ಕೊಟ್ಟಿದ್ದು ಸರ್ಕಾರದ ಅಸಮಾಧಾನಕ್ಕೆ ಕಾರಣ ಆಯಿತಾ?
3.ಬಿಜೆಪಿ ಸಂಸದರು ಕೂಡ judges enquiry act ಪ್ರಕಾರ ನ್ಯಾಯಮೂರ್ತಿಗಳ ವಿರುದ್ಧ ತನಿಖೆಗೆ ಅರ್ಜಿಗೆ ಸಹಿ ಹಾಕಿದರು ಕೂಡ ವಿಪಕ್ಷಗಳ ಅರ್ಜಿ ಸಲ್ಲಿಸಿದ್ದು ಸರ್ಕಾರದ ಬೇಸರಕ್ಕೆ ಕಾರಣ ಆಯಿತಾ?
4. ಆಪರೇಷನ್ ಸಿಂದೂರ ವಿಷಯದಲ್ಲಿ ಖರ್ಗೆ ಅವರಿಗೆ ಸರ್ಕಾರದ ಜೊತೆ ಚರ್ಚಿಸದೆ ಸುದೀರ್ಘ ಮಾತಿಗೆ ಅವಕಾಶ ಕೊಟ್ಟಿದ್ದು ಸಂಸಾದೀಯ ಇಲಾಖೆ ಮತ್ತು ಉಪರಾಷ್ಟ್ರ ಪತಿ ನಡುವೆ ಕಿಡಿ ಹಚ್ಚಿತಾ?
5. ನ್ಯಾಯಮೂರ್ತಿಗಳ ವಿರುದ್ಧ ತನಿಖೆ ಕೋರಿ ಸಲ್ಲಿಸಿದ್ದ ವಿಪಕ್ಷಗಳ ಅರ್ಜಿಯನ್ನು ಸ್ವೀಕರಿಸಿದ್ದು ಶಾಸಕಾಂಗ ನ್ಯಾಯಾಂಗದ ನಡುವೆ ತಿಕ್ಕಾಟ ಕ್ಕೆ ಕಾರಣ ಆಗಬಹುದು ಎಂದು ಸರ್ಕಾರ ಉಪರಾಷ್ಟ್ರ ಪತಿ ಗಳ ರಾಜೀನಾಮೆಗೆ ಒತ್ತಡ ಹೇರಿತಾ?
6. ನಿನ್ನೆ ಮಧ್ಯಾಹ್ನ 4.30 ಕ್ಕೆ ನಡೆದ ರಾಜ್ಯಸಭೆಯ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಸಭಾ ನಾಯಕ ಜೆ ಪಿ ನಡ್ದಾ ಮತ್ತು ಸಂಸಾದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗೈರು ಆಗಿ ಸರ್ಕಾರ ತನ್ನ ಬೇಸರವನ್ನು ಸೂಚಿಸಿತಾ?
ಇತಿಹಾಸ ದಲ್ಲಿ ಏನೇನು ಆಗಿತ್ತು?: ಇಲ್ಲಿಯವರೆಗೆ ಇಬ್ಬರು ಉಪ ರಾಷ್ಟ್ರಪತಿ ಗಳು ಅವಧಿಗೂ ಮುನ್ನ ರಾಜೀನಾಮೆ ಸಲ್ಲಿಸಿದ್ದರು. ಆದರೆ ಅದು ಟರ್ಮ್ ಎಂಡ್ ನಲ್ಲಿ ರಾಷ್ಟ್ರಪತಿ ಚುನಾವಣೆಗೆ ನಿಲ್ಲಲು.
ಆದರೆ ಜಗದೀಪ್ ಧನ್ ಕರ್ ಅವಧಿ ಆಗಸ್ಟ್ 2027 ರ ವರೆಗೆ ಇತ್ತು 2 ವರ್ಷ ಒಂದು ತಿಂಗಳು ಮೊದಲೇ ರಾಜೀನಾಮೆ ಕೊಟ್ಟಿದ್ದು ಮುಂದೆ ಯಾರು ಎಂಬ ಪ್ರಶ್ನೆಗೆ ಮುನ್ನುಡಿ ಬರೆದಿದೆ
ಮುಂದೇನು?: ಸಂವಿಧಾನದ ಪ್ರಕಾರ ಉಪ ರಾಷ್ಟ್ರಪತಿ ಚುನಾವಣೆಯನ್ನು ಇಷ್ಟೇ ದಿನಗಳಲ್ಲಿ ಅರ್ಥಾತ್ 6 ತಿಂಗಳಲ್ಲೇ ನಡೆಸಬೇಕು ಅಂತೇನು ನಿಯಮ ಇಲ್ಲ
ಅಭ್ಯರ್ಥಿಗಳು ಯಾರು?
1 ನಿತೀಶ್ ಕುಮಾರ್: ಬಿಹಾರದಲ್ಲಿ ಚಿರಾಗ್ ಪಾಸ್ವಾನ್ ಪ್ರತ್ಯೇಕ ವಾಗಿ ಸ್ಪರ್ಧೆಸಿ ಎನ್ಡಿಎ ವೋಟು ಒಡೆಯುವ ಆತಂಕ ಇರುವಾಗ ನಿತೀಶ್ ರನ್ನು ಉಪರಾಷ್ಟ್ ಪತಿ ಮಾಡಿ ಬಿಜೆಪಿ ಯ ಹಿಂದುಳಿದ ವರ್ಗದ ನಾಯಕ ರನ್ನು ಮುಖ್ಯಮಂತ್ರಿ ಅಭ್ಯರ್ಥಿ ಮಾಡುವುದು.ಆದರೆ ನಿತೀಶ್ ಒಪ್ಪುತ್ತಾರಾ ದೊಡ್ಡ ಪ್ರಶ್ನೆ.
2. ಶಶಿ ತರೂರ್: ಕೇರಳದ ಚುನಾವಣೆಗಳು ಮುಂದಿನ ವರ್ಷ ಇರುವಾಗ ಕಾಂಗ್ರೆಸ್ ಸಂಸದ ಶಶಿ ತರೂರ್ ರನ್ನು ಉಪ ರಾಷ್ಟ್ರಪತಿ ಮಾಡಿ ಲಾಭ ಪಡೆದು ಕೊಳ್ಳುವುದು ಜೊತೆಗೆ ಕಾಂಗ್ರೆಸ್ ಗೆ ಮುಜುಗರ ಉಂಟು ಮಾಡುವುದು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ