ಹುಟ್ಟೂರು ಲಖನೌನಲ್ಲಿ ಶುಕ್ಲಾಗೆ ಅದ್ಧೂರಿ ಸ್ವಾಗತ, ಮೆರವಣಿಗೆ

Kannadaprabha News   | Kannada Prabha
Published : Aug 26, 2025, 02:57 AM IST
UP Government Launches Shubhanshu Shukla Scholarship

ಸಾರಾಂಶ

ಯಶಸ್ವಿ ಗಗನಯಾನದ ಬಳಿಕ ಮೊದಲ ಸಲ ತವರಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅವರಿಗೆ ಸೋಮವಾರ ಹುಟ್ಟೂರು ಲಖನೌನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು.

ಲಖನೌ: ಯಶಸ್ವಿ ಗಗನಯಾನದ ಬಳಿಕ ಮೊದಲ ಸಲ ತವರಿಗೆ ಮರಳಿರುವ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ, ಅವರಿಗೆ ಸೋಮವಾರ ಹುಟ್ಟೂರು ಲಖನೌನಲ್ಲಿ ಅದ್ಧೂರಿ ಸ್ವಾಗತ ದೊರೆಯಿತು.

ಲಖನೌ ವಿಮಾನ ನಿಲ್ದಾಣದಲ್ಲಿ ಕುಟುಂಬಸ್ಥರು ಅವರನ್ನು ಸ್ವಾಗತಿಸಿದರು. ಬಳಿ ತೆರೆದ ವಾಹನದಲ್ಲಿ ರೋಡ್‌ ಶೋ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ನೂರಾರು ಮಂದಿ ತ್ರಿವರ್ಣ ಧ್ವಜ ಹಾರಿಸುತ್ತಾ, ವಂದೇ ಮಾತರಂ ಘೋಷಣೆ ಕೂಗುತ್ತಾ ಜೊತೆ ಸಾಗಿದರು. ಬಳಿಕ ಮಾತನಾಡಿದ ಶುಕ್ಲಾ, ‘ ಇಲ್ಲಿ ನೆರೆದಿರುವವರ ಉತ್ಸಾಹ ನೋಡಲು ತುಂಬಾ ಖುಷಿಯಾಗಿದೆ’ ಎಂದರು.

ಈ ನಡುವೆ ಶುಕ್ಲಾ ದಂಪತಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನೂ ಭೇಟಿಯಾದರು.

ಸ್ಕಾಲರ್‌ಶಿಪ್:

ಅಂತರಿಕ್ಷ ಕುರಿತ ಕೋರ್ಸುಗಳ ವಿದ್ಯಾರ್ಥಿಗಳಿಗೆ ಶುಭಾಂಶು ಶುಕ್ಲಾ ಹೆಸರಿನಲ್ಲಿ ಸ್ಕಾಲರ್‌ಶಿಪ್‌ ನೀಡಲು ಯೋಗಿ ಸರ್ಕಾರ ನಿರ್ಧರಿಸಿದೆ.------

ಆ.17ರಂದೇ ಭಾರತಕ್ಕೆ ಬಂದಿದ್ದ ಶುಕ್ಲಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಇದೀಗ ತವರಿಗೆ ಮರಳಿದ್ದಾರೆ.

ವಾಯುಪಡೆಯ ಚಿಹ್ನೆ ಇರುವ ಕಂದುಬಣ್ಣದ ಜಾಕೆಟ್‌, ಅದರ ತೋಳಿನಲ್ಲಿ ತ್ರಿವರ್ಣ ಧ್ವಜ, ಮತ್ತೊಂದು ತೋಳಿನಲ್ಲಿ ಇಸ್ರೋ ಲಾಂಛನ ಧರಿಸಿ ಶುಕ್ಲಾ ಸೆಳೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು