
ಬರ್ನಾಲ(ಜ.10): ಮದುವೆಯಾಗಿ ಹನಿಮೂನ್ ಹೋಗುವ ಬದಲು ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನವ ಜೋಡಿಗಳು ಸೇರಿದಂತೆ ಹಲವು ಘಟನೆಗಳು ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ನಡೆದಿದೆ. ಇದೀಗ ಮದುವೆ ಹೊರಟ್ಟಿದ್ದ ಮದುಮಗ ಸೇರಿದಂತೆ ಇಡೀ ದಿಬ್ಬಣವೇ, ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ಘಟನೆ ಪಂಜಾಬ್ನ ಬರ್ನಾಲ ಜಿಲ್ಲೆಯಲ್ಲಿ ನಡೆದಿದೆ.
ಪ್ರತಿಭಟನಾಕಾರರಿಗೆ ನೆರವಾಗಲು ಕಂಟೈನರ್ ಟ್ರಕ್ನ್ನು ಮನೆಯಾಗಿ ಪರಿವರ್ತಿಸಿದ ರೈತ!.
ಮೆಹೆಲ್ ಖಲನ್ ಟೋಲ್ ಪ್ಲಾಜಾದಲ್ಲಿ ರೈತರ ಪ್ರತಿಭಟನೆ 101 ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಮಸೂದೆ ಹಿಂಪಡೆಯುವ ವರೆಗೂ ಪ್ರತಿಭಟನೆ ನಡೆಸುವುದಾಗಿ ರೈತರು ಹೇಳಿದ್ದಾರೆ. ಇದೇ ದಾರಿಯಲ್ಲಿ ಮದುವೆಗೆ ಹೊರಟ್ಟಿದ್ದ 30 ವರ್ಷದ ಜಗದೀಪ್ ಸಿಂಗ್ ಹಾಗೂ ಕುಟಂಬಸ್ಥರು, ಟೋಲ್ ಪ್ಲಾಝಾ ಬಳಿ ವಾಹನ ನಿಲ್ಲಿಸಿದ್ದಾರೆ. ಬಳಿಕ ಪ್ರತಿಭಟನೆ ನಡೆಸುತ್ತಿದ್ದ ರೈತರ ಜೊತೆ ಸೇರಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಭಾರತೀಯ ಕಿಸಾನ್ ಯೂನಿಯನ್ ನಡೆಸುತ್ತಿದ್ದ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ಮದುಮಗ ಹಾಗು ಕುಟುಂಬಸ್ಥರು, ತಮ್ಮ ಮದುವೆ ವಿಳಂಬವಾದರೂ ಚಿಂತೆಯಿಲ್ಲ ಎಂದು ಹೋರಾಟ ಮಾಡಿದ್ದಾರೆ. ನನ್ನ ತಂದೆ ಸೇನೆಯಿಂದ ನಿವೃತ್ತರಾದ ಯೋಧ. ನಮಗೆ 5 ಎಕರೆ ಜಮೀನಿದೆ. ಇದರಲ್ಲಿ ಕೃಷಿ ಮಾಡುತ್ತಿದ್ದೇವೆ. ರೈತರ ನೋವು ನಮಗೆ ಚೆನ್ನಾಗಿ ತಿಳಿದಿದೆ. ಹೀಗಾಗಿ ಮದುವೆ ದಿಬ್ಬಣ ಸಮೇತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇವೆ ಎಂದು ಮದುಮಗ ಜಗದೀಪ್ ಸಿಂಗ್ ಹೇಳಿದ್ದಾರೆ.
11 ಗಂಟೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾರು 2 ಗಂಟೆಗಳ ಕಾಲ ಪ್ರತಿಭಟನೆಯಲ್ಲಿ ನಿರತ ಮದುವೆ ಕುಟುಂಬ, ಬಳಿಕ ಪ್ರತಿಭಟನಾ ನಿರತ ರೈತರಿಗೆ 11,000 ರೂಪಾಯಿ ನೀಡಿ, ನಮ್ಮ ಬೆಂಬಲ ಸದಾ ನಿಮಗಿರಲಿದೆ ಎಂದು ಮದುವೆಗೆ ತೆರಳಿದ್ದಾರೆ. ಮಂಟಪಕ್ಕೆ ಲೇಟಾಗಿ ತಲುಪಿದರೂ, ಜಗದೀಪ್ ಸಿಂಗ್ ಮದುವೆ ಶಾಸ್ತ್ರೋಕ್ತವಾಗಿ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ