ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್, ಗುಜರಾತ್‌ನ ಪಕ್ಷದ ಕಾರ್ಯದರ್ಶಿ ರಾಜೀನಾಮೆ!

Published : Aug 05, 2023, 04:04 PM IST
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಶಾಕ್, ಗುಜರಾತ್‌ನ ಪಕ್ಷದ ಕಾರ್ಯದರ್ಶಿ ರಾಜೀನಾಮೆ!

ಸಾರಾಂಶ

ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ ಬೆನ್ನಲ್ಲೇ ಬಿಜೆಪಿಗೆ ಹಿನ್ನಡೆಯಾಗಿದೆ. ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ರಾಜೀನಾಮೆ ಸಲ್ಲಿಸಿದ್ದಾರೆ. ದಿಢೀರ್ ಬೆಳವಣಿಗೆ ಪ್ರಧಾನಿ ಮೋದಿ ತವರಿನ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ

ಅಹಮ್ಮದಾಬಾದ್(ಆ.05) ಲೋಕಸಭಾ ಚುನಾವಣೆಗೆ ತಯಾರಿಗಳು ಆರಂಭಗೊಂಡಿದೆ. ಒಂದೆಡೆ I-N-D-I-A ಒಕ್ಕೂಟ ಸತತ ಸಭೆಗಳನ್ನು ನಡೆಸಿ ರಣತಂತ್ರ ರೂಪಿಸುತ್ತಿದೆ. ಇತ್ತ ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಚುನಾವಣೆ ಗೆಲ್ಲಲು ಕಸರತ್ತು ನಡೆಸುತ್ತಿದೆ. ಈ ಬೆಳವಣಿಗೆ ನಡೆವೆಯೆ ಪ್ರಧಾನಿ ಮೋದಿ ತವರು, ಬಿಜೆಪಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಗುಜರಾತ್‌ನಲ್ಲಿ ಪಕ್ಷದಲ್ಲಿ ಮಹತ್ತರ ಬದಲಾವಣೆಯಾಗಿದೆ. ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಸಿ ಪ್ರದೀಪ್ ಸಿನ್ಹ ವಘೇಲಾ ರಾಜೀನಾಮೆ ನೀಡಿದ್ದಾರೆ. 

ಗುಜರಾತ್ ಬಿಜೆಪಿ ಮಹಾ ಜನ ಸಂಪರ್ಕ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸುತ್ತಿದೆ. ಹಲವು ಜಿಲ್ಲೆಗಳಲ್ಲಿ ಮಹಾ ಜನ ಸಂಪರ್ಕ ಅಭಿಯಾನ ನಡೆಸುತ್ತಿದೆ. ಈ ಮೂಲಕ ಲೋಕಸಭಾ ಚುನಾವಣೆಗೂ ಮುನ್ನ ಮತಗಳನ್ನು ಭದ್ರಪಡಿಸಲು ಯತ್ನಿಸುತ್ತಿದೆ.ಇದೇ ವೇಳೆ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ವಿರುದ್ಧ ಬಂಡಾಯ ಎದ್ದಿರುವ ಬೆನ್ನಲ್ಲೇ ಇದೀಗ ರಾಜೀನಾಮೆ ಬೆಳವಣಿಗೆ ಬಿಜೆಪಿಗೆ ಹಿನ್ನಡೆ ತಂದಿದೆ.

I.N.D.I.A ಮೈತ್ರಿಯಲ್ಲಿ ಆಮ್‌ ಆದ್ಮಿ ನರಿ ಇದ್ದಂತೆ, ಕಾಂಗ್ರೆಸ್‌ ನಾಯಕ ಸಂದೀಪ್‌ ದೀಕ್ಷಿತ್‌ ವಾಗ್ದಾಳಿ!

2016, ಆಗಸ್ಟ್ 10 ರಂದು ಗುಜರಾತ್ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿ ವಹಿಸಿಕೊಂಡ ವಘೆಲಾ ಕಳೆದ ವಿಧಾನಸಭಾ ಚುನಾವಣೆ ಗೆಲುವಿನಲ್ಲಿ ಪ್ರಮುಕ ಪಾತ್ರ ನಿರ್ವಹಿಸಿದ್ದರು. ಇದೀಗ ರಾಜೀಮೆಗೆ ನಿಖರ ಕಾರಣ ಬಹಿರಂಗವಾಗಿಲ್ಲ. ಕೆಲ ದಿನಗಳ ಹಿಂದೇ ರಾಜೀನಾಮೆ ನೀಡಿದ್ದರು. ಇದೀಗ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ವಘೆಲಾ ಗುಡ್ ಬೈ ಹೇಳಿದ್ದಾರೆ.

ಸಿಆರ್ ಪಾಟೀಲ್ ವಿರುದ್ಧ ಧ್ವನಿ ಎತ್ತಿದ ಕಾರಣ ಸೂರತ್‌ನ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದ್ದರು. ಬಿಜೆಪಿ ನಾಯಕ ಜಿನೇಂದ್ರ ಶಾರನ್ನು ಸೂರತ್ ಪೊಲೀಸರು ಬಂಧಿಸಿದ್ದರು. ಈ ಬೆಳವಣಿಗೆ ಬಿಜೆಪಿ ಪಕ್ಷದೊಳಗೆ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇದೀದ ವಘೆಲಾ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಇದೆ. I-N-D-I-A ಒಕ್ಕೂಟವಾಗಿ 

ಲೋಕಸಭೆಗೆ ಈಗಲೇ ಸಾರ್ವತ್ರಿಕ ಚುನಾವಣೆ ನಡೆದರೆ 318 ಸ್ಥಾನಗಳನ್ನು ಗೆದ್ದು ಆಡಳಿತಾರೂಢ ಎನ್‌ಡಿಎ ಮಿತ್ರಕೂಟ ಸತತ ಮೂರನೆಯ ಬಾರಿಗೆ ಅಧಿಕಾರಕ್ಕೇರಲಿದೆ ಎಂದು ಟೀವಿ ವಾಹಿನಿಯೊಂದರ ಸಮೀಕ್ಷೆ ಭವಿಷ್ಯ ನುಡಿದಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ಪ್ರತಿಪಕ್ಷಗಳು ‘ಇಂಡಿಯಾ’ ಹೆಸರಿನಲ್ಲಿ ಮೈತ್ರಿಕೂಟ ಮಾಡಿಕೊಂಡಿದ್ದರೂ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗಿಳಿಸುವುದು ಸದ್ಯಕ್ಕೆ ಸಾಧ್ಯವಿಲ್ಲ ಎಂಬಂತೆ ಕಂಡುಬರುತ್ತಿದೆ ಎಂದು ‘ಇಂಡಿಯಾ ಟೀವಿ-ಸಿಎನ್‌ಎಕ್ಸ್‌’ ಸಮೀಕ್ಷೆ ಹೇಳಿದೆ.

Breaking: ಮೋದಿ ಸರ್‌ನೇಮ್‌ ಕೇಸ್‌: ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌; ಜೈಲು ಶಿಕ್ಷೆ, ಅನರ್ಹತೆಗೆ ಸುಪ್ರೀಂಕೋರ್ಟ್‌ ತಡೆ

2019ರ ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಐತಿಹಾಸಿಕ 303 ಸ್ಥಾನ ಗೆದ್ದು ಬೀಗಿದ್ದ ಬಿಜೆಪಿಯ ಸೀಟು ಗಳಿಕೆ ಈಗ ಚುನಾವಣೆ ನಡೆದರೆ 290ಕ್ಕೆ ಕುಸಿತ ಕಾಣಲಿದೆ. 353 ಸ್ಥಾನ ಗಳಿಸಿದ್ದ ಎನ್‌ಡಿಎ ಕೂಟ 318 ಸ್ಥಾನಗಳನ್ನು ಸಂಪಾದಿಸಲಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಬಿಜೆಪಿ 290 ಸ್ಥಾನ ಗಳಿಸುವುದರಿಂದ ಏಕಾಂಗಿಯಾಗಿ 3ನೇ ಬಾರಿ ಅಧಿಕಾರಕ್ಕೇರಲು ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ
ನಾನು ಮೋಸ ಮಾಡಿಲ್ಲ, ಗಾಸಿಪ್‌ ನಂಬಬೇಡಿ ಎಂದ Palash Muchhal; ಮದುವೆ ಕ್ಯಾನ್ಸಲ್‌ ಎಂದ Smriti Mandhana