
ರಾಜ್ಕೋಟ್(ಸೆ.01): ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿದ್ದರಿಂದ ಆಕ್ರೋಶಕೊಂಡ ವ್ಯಕ್ತಿಯೊಬ್ಬ ಕಂಪನಿಯ ಬೋರ್ಡ್ ಮೀಟಿಂಗ್ ನಡೆಯುತ್ತಿರುವಾಗಲೇ ಕಿರಿಯ ಸಹೋದರನಿಗೆ ಚಾಕುವಿನಿಂದ ಇರಿದ ಘಟನೆ ಗುಜರಾತಿನ ಭಾವ್ನಗರದ ಹೊರವಲಯದಲ್ಲಿರುವ ತಂಬೋಲಿ ಕಾಸ್ಟಿಂಗ್ ಲಿ. ಫ್ಯಾಕ್ಟರಿಯಲ್ಲಿ ನಡೆದಿದೆ.
ಕಂಪನಿಯ ನಿರ್ದೇಶಕ ಮಂಡಳಿಯಿಂದ ಮೆಹುಲ್ ತಂಬೋಲಿ ಎಂಬಾತನನ್ನು ವಜಾ ಮಾಡಲಾಗಿತ್ತು. ಇದೇ ವಿಷಯವಾಗಿ ಶನಿವಾರ ತಂದೆಯ ಅಧ್ಯಕ್ಷತೆಯಲ್ಲಿ ನಿರ್ದೇಶಕ ಮಂಡಳಿ ಸಭೆ ನಡೆಯುತ್ತಿತ್ತು. ಈ ವೇಳೆ ಕ್ರೋಧಗೊಂಡ ಮೆಹುಲ್, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಿರಿಯ ಸಹೋದರ ವೈಭವ್ಗೆ ಚಾಕುವಿನಿಂದ ಇರಿದಿದ್ದಾನೆ.
ವೈಭವ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆರೋಗ್ಯ ಸ್ಥಿರವಾಗಿದೆ. ಸದ್ಯ ಮೆಹುಲ್ ಪರಾರಿಯಾಗಿದ್ದು, ದೂರು ದಾಖಲಿಸಿಕೊಂಡಿರುವ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ