ಬೆಚ್ಚಿ ಬಿದ್ದ ಬಿಹಾರ: ವೈದ್ಯನ ಮೇಲೆ ಶೂಟೌಟ್‌, ಆಸ್ಪತ್ರೆಗೆ ನುಗ್ಗಿ ಐಸಿಯುನಲ್ಲಿದ್ದ ಕ್ರಿಮಿನಲ್ ಹತ್ಯೆ!

Published : Jul 19, 2025, 04:35 PM IST
CSBC Bihar Driver Constable Recruitment 2025 notification

ಸಾರಾಂಶ

ಗಯಾದಲ್ಲಿ ವೈದ್ಯರ ಮೇಲೆ ಗುಂಡಿನ ದಾಳಿ, ಪಾಟ್ನಾ ಆಸ್ಪತ್ರೆಯಲ್ಲಿ ಕ್ರಿಮಿನಲ್‌ನ ಹತ್ಯೆ. ಚುನಾವಣೆ ಹತ್ತಿರವಾಗುತ್ತಿರುವಾಗ ಬಿಹಾರದಲ್ಲಿ ಅಪರಾಧ ಘಟನೆಗಳು ಹೆಚ್ಚುತ್ತಿವೆ. ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುತ್ತಿರುವ ಈ ಘಟನೆಗಳು ಆತಂಕ ಮೂಡಿಸಿವೆ.

ಗಯಾ: ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಹಾರದಲ್ಲಿ ಅಪರಾಧ ಘಟನೆಗಳು ಏರಿಕೆಯಾಗುತ್ತಿದ್ದು, ಶನಿವಾರ ಗಯಾ ಜಿಲ್ಲೆಯಲ್ಲಿ ಮತ್ತೊಂದು ಶಾಕಿಂಗ್ ಘಟನೆಯು ನಡೆದಿದೆ. ವೈದ್ಯರೊಬ್ಬರ ಮೇಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಡಾ. ತಪೇಶ್ವರ ಪ್ರಸಾದ್‌ ಮೇಲೆ ಗುಂಡಿನ ದಾಳಿ

ನಿವೃತ್ತ ಆರೋಗ್ಯ ಇಲಾಖೆ ಅಧಿಕಾರಿ ಡಾ. ತಪೇಶ್ವರ ಪ್ರಸಾದ್‌ ಅವರು ಗಯಾದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 8 ಗಂಟೆಯ ಸುಮಾರಿಗೆ ಅವರು ತಮ್ಮ ಕೃಷಿ ಭೂಮಿಯಿಂದ ಮನೆಗೆ ಮರಳುತ್ತಿದ್ದ ವೇಳೆ, ಅಪರಿಚಿತ ಮೂವರು ಬೈಕ್ ಸವಾರ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಪರಿಚಿತ ದಾಳಿಕೋರರು ವೈದ್ಯರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಒಂದಷ್ಟು ಗುಂಡು ವೈದ್ಯರ ದವಡೆಗೆ ತಗುಲಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವೈದ್ಯರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

ಈ ಘಟನೆಯ ಹಿಂದೆ ಏನೆಲ್ಲಾ ಕಾರಣಗಳಿವೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ದಾಳಿಕೋರರ ಗುರುತು ಗಚ್ಚಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಬಿಹಾರದಲ್ಲಿ ಅಪರಾಧ ಪ್ರಕರಣಗಳು ಅಹಿತಕರವಾಗಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಮನೆ ಮಾಡಿದೆ. ಸರ್ಕಾರ ಮತ್ತು ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಜನರಿಂದ ವ್ಯಕ್ತವಾಗುತ್ತಿದೆ.

ಪಾಟ್ನಾದಲ್ಲಿ ಆಸ್ಪತ್ರೆಯೊಳಗೆಯೇ ಕ್ರಿಮಿನಲ್ ಹತ್ಯೆ

ಇದೇ ಸಮಯದಲ್ಲಿ, ಪಾಟ್ನಾದ ಆಸ್ಪತ್ರೆಯ ಐಸಿಯು ಘಟಕದಲ್ಲಿ ಭೀಕರ ಕೃತ್ಯವೊಂದು ನಡೆದಿದೆ. ದೀರ್ಘ ಕ್ರಿಮಿನಲ್ ಹಿನ್ನೆಲೆಯಿರುವ ಚಂದನ್ ಮಿಶ್ರಾ ಎಂಬ ಕೈದಿಯನ್ನು ಐದು ಮಂದಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಸ್ಪತ್ರೆಗೆ ನುಗ್ಗಿ ಪಾಯಿಂಟ್ ಬ್ಲಾಂಕ್ ಶಾಟ್‌ನಲ್ಲಿ ಹತ್ಯೆ ಮಾಡಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಚಂದನ್ ಮಿಶ್ರಾ ಮೇಲಿನ ಹತ್ಯಾ ದಾಳಿಯ ಹಿಂದೆ ಅವರ ವಿರೋಧಿ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕಾಯ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಈ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಿಂದ ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಬಿಹಾರ ಎಡಿಜಿ ಕುಂದನ್ ಕೃಷ್ಣನ್ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ವಿಚಾರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಈ ಇಬ್ಬರೂ ಘಟನೆಗಳು ಚುನಾವಣೆ ಪೂರ್ವದ ಬಿಹಾರದಲ್ಲಿ ಕಾನೂನು ಸುವ್ಯವಸ್ಥೆಯ ಸ್ಥಿತಿಗೆ ಸಂಬಂಧಿಸಿದಂತೆ ಗಂಭೀರ ಚಿಂತನೆಗಳಿಗೆ ಕಾರಣವಾಗಿವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
ಪುಟಿನ್ ಔತಣಕೂಟಕ್ಕೆ ರಾಹುಲ್ ಗಾಂಧಿ-ಖರ್ಗೆಗಿಲ್ಲ ಆಮಂತ್ರಣ, ಶಶಿ ತರೂರ್‌ಗೆ ಜಾಕ್‌ಪಾಟ್