
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ H5N1 ಬರ್ಡ್ ಫ್ಲೂ ವೈರಸ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದೆಹಲಿ ಝೂವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಎರಡು ಹಕ್ಕಿಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ಸೋಂಕಿನ ವಿಸ್ತರಣೆ ತಪ್ಪಿಸಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೆಹಲಿಯ ರಾಷ್ಟ್ರೀಯ ಪ್ರಾಣಿಸಂಗ್ರಹಾಲಯದಲ್ಲಿ (National Zoological Park) ಹಕ್ಕಿಗಳ ಆರೋಗ್ಯ ಪರೀಕ್ಷೆ ನಡೆಸುವ ವೇಳೆ, ಎರಡು ಕೊಕ್ಕರೆಗಳು ಬರ್ಡ್ ಫ್ಲೂ ವೈರಸ್ H5N1 ಸೋಂಕು ದೃಢಪಟ್ಟು ಮೃತಪಟ್ಟಿರುವುದು ದೃಢವಾಗಿದೆ. ಸೋಂಕಿನ ಭೀತಿಯಿಂದ ಮುಂದಿನ ಆದೇಶ ಹೊರಬರುವವರೆಗೂ ಝೂವನ್ನು ಸಾರ್ವಜನಿಕರಿಗೆ ಮುಚ್ಚಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬರ್ಡ್ ಫ್ಲೂ ಮಾನವ ಮತ್ತು ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಬಹುದೆಂಬ ಕಾರಣದಿಂದಾಗಿ, ಆರೋಗ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ತುರ್ತು ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಝೂ ಪ್ರದೇಶದಲ್ಲಿ ತೀವ್ರ ಸ್ಯಾನಿಟೈಜೇಶನ್ ಕಾರ್ಯ ಆರಂಭವಾಗಿದ್ದು, ಸೋಂಕು ಹೆಚ್ಚುವ ಮುನ್ನ ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ.
ದೆಹಲಿಯಲ್ಲಿ ಬರ್ಡ್ ಫ್ಲೂ ಪ್ರಕರಣ ದೃಢಪಟ್ಟ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಧಿಕಾರಿಗಳು ಜನರಿಗೆ ಯಾವುದೇ ರೀತಿಯ ಗಾಬರಿಯಾಗದಂತೆ ಎಚ್ಚರಿಕೆ ನೀಡಿದ್ದು, ಸೋಂಕಿನ ಹರಡುವಿಕೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.
ದೆಹಲಿ ಮೃಗಾಲಯದ ಪ್ರಕಟಣೆಯ ಪ್ರಕಾರ, ಮಾದರಿಗಳನ್ನು ಬುಧವಾರ ಭೋಪಾಲ್ನ ರಾಷ್ಟ್ರೀಯ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ ಸಂಸ್ಥೆಗೆ (NIHSAD) ತಪಾಸಣೆಗಾಗಿ ಕಳುಹಿಸಲಾಗಿತ್ತು. ಆಗಸ್ಟ್ 28 ರಂದು ಸಂಜೆ ಭೋಪಾಲ್ನ NIHSAD ನಿಂದ ಎರಡೂ ಮಾದರಿಗಳಲ್ಲಿ H5N1 ಏವಿಯನ್ ಇನ್ಫ್ಲುಯೆನ್ಸ ವೈರಸ್ ಇರುವುದು ಪತ್ತೆಯಾಗಿತ್ತು. ತಕ್ಷಣವೇ ಮೃಗಾಲಯ ಬಂದ್ ಮಾಡಿ ಇತರ ಪ್ರಾಣಿಗಳು, ಪಕ್ಷಿಗಳು ಮತ್ತು ಮೃಗಾಲಯದ ಸಿಬ್ಬಂದಿಗೆ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಲಾಯ್ತು. 2021 ರಲ್ಲಿ ಹಕ್ಕಿ ಜ್ವರ ಹರಡಿದ ಕಾರಣ ದೆಹಲಿ ಮೃಗಾಲಯವನ್ನು ಕೊನೆಯ ಬಾರಿಗೆ ಮುಚ್ಚಲಾಗಿತ್ತು. ಆ ವರ್ಷದ ಫೆಬ್ರವರಿಯಲ್ಲಿ ಮೃಗಾಲಯದ ಆವರಣದಿಂದ ಸಂಗ್ರಹಿಸಲಾದ ಪಕ್ಷಿ ಹಿಕ್ಕೆಗಳ ಏಳು ಮಾದರಿಗಳು ಹಕ್ಕಿ ಜ್ವರಕ್ಕೆ ಮೃತಪಟ್ಟಿರುವುದು ದೃಢವಾಗಿತ್ತು. ಇದಕ್ಕೂ ಮುನ್ನ ಅಕ್ಟೋಬರ್ 2016 ರಲ್ಲಿ ಕೂಡ ರೋಗ ಹರಡುವಿಕೆಯನ್ನು ತಡೆಗಟ್ಟಲು ಮೃಗಾಲಯ ಮುಚ್ಚಲಾಗಿತ್ತು.
ಬರ್ಡ್ ಫ್ಲೂ ಸೋಂಕಿನ ಮೂಲವನ್ನು ಪತ್ತೆಹಚ್ಚಲು ತಜ್ಞರ ತಂಡ ಕಾರ್ಯಾರಂಭಿಸಿದ್ದು, ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ, ದೆಹಲಿ ಸರ್ಕಾರ ಮತ್ತು ಪಶುವೈದ್ಯಕೀಯ ಇಲಾಖೆ ನಡುವೆ ಸಂಯೋಜನೆ ಜರುಗುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ