'ದವಿಂದರ್‌ ಸಿಂಗ್ "ಖಾನ್‌" ಆಗಿದ್ರೆ RSS ವರಸೆ ಬೇರೆ ಇರುತ್ತಿತ್ತು'

Published : Jan 15, 2020, 11:00 AM ISTUpdated : Jan 15, 2020, 11:19 AM IST
'ದವಿಂದರ್‌ ಸಿಂಗ್ "ಖಾನ್‌" ಆಗಿದ್ರೆ RSS ವರಸೆ ಬೇರೆ ಇರುತ್ತಿತ್ತು'

ಸಾರಾಂಶ

ದವಿಂದರ್‌ ಖಾನ್‌ ಆಗಿದ್ರೆ ಆರ್‌ಎಸ್‌ಎಸ್‌ ವರಸೆ ಬೇರೆ ಇರುತ್ತಿತ್ತು| ಹಿಜ್ಬುಲ್‌ ಮುಜಾಹಿದೀನ್‌ ಭಯೋತ್ಪಾದಕರಿಗೆ ಆಶ್ರಯ ನೀಡಿ ಬಂಧಿತನಾಗಿರುವ ಜಮ್ಮು ಕಾಶಗಮೀರದ ಸೀನಿಯರ್ ಪೊಲೀಸ್ ಆಫೀಸರ್ ದವಿಂದರ್ ಸಿಂಗ್

ನವದೆಹಲಿ[ಜ.15]: ಹಿಜ್ಬುಲ್‌ ಮುಜಾಹಿದೀನ್‌ ಭಯೋತ್ಪಾದಕರಿಗೆ ಆಶ್ರಯ ನೀಡಿ ಬಂಧಿತನಾಗಿರುವ ಜಮ್ಮು-ಕಾಶ್ಮೀರದ ಹಿರಿಯ ಪೊಲೀಸ್‌ ಅಧಿಕಾರಿ ದವಿಂದರ್‌ ಸಿಂಗ್‌ ಪ್ರಕರಣಕ್ಕೂ ಕಾಂಗ್ರೆಸ್‌, ಜಾತಿ-ಧರ್ಮದ ಬಣ್ಣ ಬಳಿಯಲೂ ಯತ್ನಿಸಿದೆ.

ಉಗ್ರರಿಗೆ ಮನೆಯಲ್ಲೇ ಆಶ್ರಯ ಕೊಟ್ಟಿದ್ದ ಡಿವೈಎಸ್ಪಿ!

ಈ ಬಗ್ಗೆ ಪ್ರತಿಕ್ರಿಯಿಸಿರುವ ಲೋಕಸಭೆಯ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ, ‘ಬಂಧಿತ ಅಧಿಕಾರಿ ದವಿಂದರ್‌ ಸಿಂಗ್‌ ಬದಲು ದವಿಂದರ್‌ ಖಾನ್‌ ಆಗಿದ್ದರೆ ಕತೆಯೇ ಬೇರೆಯಾಗುತ್ತಿತ್ತು. ಆರೆಸ್ಸೆಸ್‌ ಬೆಂಬಲಿತ ಸಾಮಾಜಿಕ ಮಾಧ್ಯಮದ ಟ್ರೋಲ್‌ಗಳು ಬೇರೆ ರೀತಿಯೇ ಪ್ರತಿಕ್ರಿಯಿಸುತ್ತಿದ್ದರು. ನಮ್ಮ ದೇಶದ ವೈರಿಗಳನ್ನು ಜಾತಿ, ಧರ್ಮ, ವರ್ಣವನ್ನು ಮೀರಿ ನೋಡಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ಈ ನಡುವೆ ಸ್ವತಃ ಅಧಿರ್‌ ಅವರೇ ತಮ್ಮ ಹೆಸರಿನ ಮುಂದೆ ಖಾನ್‌ ಸೇರಿಸಿಕೊಳ್ಳಲಿ ಎಂದು ನಿವೃತ್ತ ಸೇನಾ ಮುಖ್ಯಸ್ಥ, ಕೇಂದ್ರ ಸಚಿವ ವಿ.ಕೆ.ಸಿಂಗ್‌ ತಿರುಗೇಟು ನೀಡಿದ್ದಾರೆ.

ಉಗ್ರರ ಜತೆ ಸಿಕ್ಕಿಬಿದ್ದ ಡಿವೈಎಸ್ಪಿ! : ಕಾರಿನಲ್ಲಿ ತೆರಳುತ್ತಿದ್ದಾಗ ಪೊಲೀಸ್‌ ಬಲೆಗೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು