ಹಿಂದೂ ಧರ್ಮಕ್ಕೆ ಮತಾಂತರಗೊಂಡ 40 ಮುಸ್ಲಿಂ ಕುಟುಂಬ!

Published : May 09, 2020, 12:51 PM ISTUpdated : May 09, 2020, 01:04 PM IST
ಹಿಂದೂ ಧರ್ಮಕ್ಕೆ ಮತಾಂತರಗೊಂಡ 40 ಮುಸ್ಲಿಂ ಕುಟುಂಬ!

ಸಾರಾಂಶ

ಕೊರೋನಾ ಆತಂಕದ ನಡುವೆ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಕುಟುಂಬಗಳು| ನಲ್ವತ್ತು ಕುಟುಂಬದ ಸುಮಾರು 250 ಮಂದಿ ಹಿಂದೂ ಧರ್ಮಕ್ಕೆ ಮತಾಂತರ| ಮೊಘಲ್ ಆಡಳಿತ ಅವಧಿಯಲ್ಲಿ ಒತ್ತಾಯಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬಗಳು

ಚಂಡೀಘಡ(ಮೇ.09): 40 ಕುಟುಂಬದ ಸುಮಾರು 250 ಮಂದಿ ಮುಸಲ್ಮಾನ ಧರ್ಮವನ್ನು ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರಗೊಮಡಿದ್ದಾರೆ. ಬಳಿಕ 80 ವರ್ಷ ಮಹಿಳೆಯ ಅಂತ್ಯ ಕ್ರಿಯೆಯನ್ನು ಹಿಂದೂ ಸಂಪ್ರದಾಯದನ್ವಯ ನೆರವೇರಿಸಿದ್ದಾರೆ.  ಈ ಘಟನೆ ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ನಡೆದಿದೆ. 

ಇನ್ನು ಈ ಬಗ್ಗೆ ಮಾಹಿತಿ ನೀಡಿದ ಗ್ರಾಮಸ್ಥರೊಬ್ಬರು, ಮತಾಂತರಗೊಂಡ ಬಿಟ್ಮಾಡಾದ ಈ ಕುಟುಂಬಗಳು ದನೋಡಾ ಕಲನ್ ಹಳ್ಳಿಯಲ್ಲಿ ಸ್ವಾತಂತ್ರ್ಯಕ್ಕೂ ಮೊದಲೇ ಇದ್ದರು ಎಂದು ಹೇಳಿದ್ದಾರೆ. ಅಲ್ಲದೇ ಇವರೆಲ್ಲರೂ ಮುಸ್ಲಮಾನರಾಗಿದ್ದರೂ ಜೀವನ ಶೈಲಿ ಹಿಂದೂಗಳಂತಿತ್ತು. ಕವಲ ಮೃತರ ಅಂತ್ಯ ಸಂಸ್ಕಾರವಷ್ಟೇ ಮುಸ್ಲಿಂ ಸಂಪ್ರದಾಯದಂತೆ ನಡೆಯುತ್ತಿತ್ತು. 

ಮದ್ಯ ಯಾಕೆ ಬಂದ್ ಮಾಡಿಸ್ತಿಲ್ಲ ಯಡಿಯೂರಪ್ಪಜ್ಜ ಉತ್ತರ ಕೊಡಿ ಎಂದ ಬಾಲಕಿ..!

ಇನ್ನು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶತ್ಬೀರ್ ಪ್ರತಿಕ್ರಿಯಿಸಿದ್ದು, 'ತಾಯಿ ಫೀಲಿ ದೇವಿ ಶುಕ್ರವಾರ ಮೃತಪಟ್ಟಿದ್ದರು. ಹೀಗಿರುವಾಗ ಗ್ರಾಮದ ಮುಸಲ್ಮಾನ ಕುಟುಂಬಗಳು, ಅವರು ಹಿಂದೂಗಳಂತೆ ಜೀವನ ಸಾಗಿಸುತ್ತಿದ್ದರು. ಹೀಗಿರುವಾಗ ಅವರನ್ನು ಹಿಂದೂ ಎಂದದು ಘೋಷಿಸಿ, ಅವರ ಅಂತಿಮ ಕ್ರಿಯೆಯನ್ನೂ ಹಿಂದೂ ಸಂಪ್ರದಾಯದನ್ವಯವೇ ನೆರವೇರಿಸಬೇಕೆಂದಿದ್ದಾರೆ' ಎಂದಿದ್ದಾರೆ.

ಇಷ್ಟೇ ಅಲ್ಲದೇ ತಾನು ದೂಮ್ ಜಾತಿಯವರಾಗಿದ್ದು, ನಮ್ಮ ಪೂರ್ವಜರು ಹಿಂದೂಗಳಾಗಿದ್ದರು. ಆದರೆ ಮೊಘಲ್ ದೊರೆ ಔರಂಗಜೇಬನ ಆಡಳಿತ ಅವಧಿಯಲ್ಲಿ ಒತ್ತಾಯ ಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದರು. ಇಡೀ ಗ್ರಾಮವೇ ಹಿಂದೂ ಹಬ್ಬಗಳನ್ನು ಆಚರಿಸುತ್ತದೆ, ಆದರೆ ಅಂತಿಮ ಕ್ರಿಯೆ ಮಾತ್ರ ಮುಸ್ಲಿಂ ಸಂಪ್ರದಾಯದಂತೆ ನೆರವೇರಿಸುತ್ತಿದ್ದರು ಎಂದಿದ್ದಾರೆ. 

ಈ ಹಿಂದೆ ಏಪ್ರಿಲ್ 18 ರಂದು ಹರ್ಯಾಣದ ಜಿಂದ್ ಜಿಲ್ಲೆಯ  6 ಕುಟುಂಬದ 35 ಮಂದಿ ಸದಸ್ಯರು ಹಿಂದೂ ಧರ್ಮವನ್ನು ತಮ್ಮದಾಗಿಸಿಕೊಂಡಿದ್ದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತಮಿಳು ಚಿತ್ರದಲ್ಲಿ ಕನ್ನಡ ಹಾಡು ಬಳಸಿದ್ದಕ್ಕೆ ದಂಡ, ಒಟಿಟಿ ರಿಲೀಸ್‌ಗೂ ಮುನ್ನ 30 ಲಕ್ಷ ಠೇವಣಿ ಇಡಿ ಎಂದ ಕೋರ್ಟ್‌!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ