ಹರ್ಯಾಣ ಫಲಿತಾಂಶ ನಿರೀಕ್ಷೆ ಬೇಸ್ತು ಬಿದ್ದಿದ್ದೆಲ್ಲಿ?

Published : Oct 25, 2019, 10:52 AM IST
ಹರ್ಯಾಣ ಫಲಿತಾಂಶ ನಿರೀಕ್ಷೆ ಬೇಸ್ತು ಬಿದ್ದಿದ್ದೆಲ್ಲಿ?

ಸಾರಾಂಶ

ಬಿಜೆಪಿ ಭರ್ಜರಿ ಬಹುಮತ ಪಡೆಯುತ್ತದೆ ಎಂಬ ಅಂದಾಜು, ಸಮೀಕ್ಷೆಗಳು ಹುಸಿ | ಲೋಕಸಭಾ ಚುನಾವಣೆ ಸಾಧನೆಯನ್ನು ಮಾನದಂಡವಾಗಿ ಇರಿಸಿದ್ದು ತಪ್ಪು |  ಬಿಜೆಪಿ ಮೇಲೆ ಜಾಟರ ಕೋಪ ಗುಪ್ತಗಾಮಿನಿಯಾಗಿದ್ದು ಯಾರಿಗೂ ಗೊತ್ತಾಗಲೇ ಇಲ್ಲ

ಚಂಡೀಗಢ (ಅ.25): ಬಹುತೇಕ ಚುನಾವಣಾಪೂರ್ವ ಹಾಗೂ ಚುನಾವಣೋತ್ತರ ಸಮೀಕ್ಷೆಗಳು ಹರ್ಯಾಣದಲ್ಲಿ ಬಿಜೆಪಿ ಭಾರೀ ಬಹುಮತದೊಂದಿಗೆ ಪುನಃ ಅಧಿಕಾರಕ್ಕೆ ಬರಲಿದೆ ಎಂದು ಅಂದಾಜಿಸಿದ್ದವು. ಈ ಅಂದಾಜು ಈಗ ತಪ್ಪಾಗಿದೆ.

ಹರ್ಯಾಣದಲ್ಲಿ ಫಲ ಕೊಟ್ಟ ಸೋನಿಯಾ ತಂತ್ರ

ಈ ತಪ್ಪು ಏಕಾಯಿತು ಎಂದು ವಿಶ್ಲೇಷಿಸಲು ಹೊರಟರೆ ಬಹುತೇಕ ಸಮೀಕ್ಷೆಗಳು 2019ರ ಲೋಕಸಭೆ ಚುನಾವಣೆಯನ್ನು ಮಾನದಂಡವಾಗಿ ಇರಿಸಿಕೊಂಡು ಅಂದಾಜು ಮಾಡಿದ್ದವು ಎಂದು ಹೇಳಲಾಗಿದೆ. 2019ರಲ್ಲಿ ಬಿಜೆಪಿ ಶೇ.58ರಷ್ಟುಮತ ಪಡೆದಿದ್ದರೆ, ಈ ಚುನಾವಣೆಯಲ್ಲಿ ಸುಮಾರು ಶೇ.36ರಷ್ಟುಮತ ಮಾತ್ರ ಪಡೆದಿದೆ. 2014ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಶೇ.2-3ರಷ್ಟುಹೆಚ್ಚು ಮತ ಪಡೆದಿದೆಯಾದರೂ, ಲೋಕಸಭೆ ಚುನಾವಣೆಯನ್ನು ವಿಧಾನಸಭೆ ಚುನಾವಣೆಗೆ ಮಾನದಂಡವಾಗಿ ಇರಿಸಿಕೊಳ್ಳುವುದು ಸರಿಯಲ್ಲ ಎಂದು ಈಗ ಸಾಬೀತಾಗಿದೆ.

ಇನ್ನು ಹರ್ಯಾಣದ ಪ್ರಬಲ ಜಾಟ್‌ ಸಮುದಾಯದವರನ್ನು ಬಿಜೆಪಿ ನಿರ್ಲಕ್ಷಿಸಿ, ಅನ್ಯ ಸಮುದಾಯದ ಮನೋಹರಲಾಲ್‌ ಖಟ್ಟರ್‌ ಅವರನ್ನು ಸಿಎಂ ಮಾಡಿತ್ತು. ಇದು ಜಾಟ್‌ ಸಮುದಾಯದ ಕೋಪಕ್ಕೆ ಕಾರಣವಾಗಿದೆ. 2014ರ ವಿಧಾನಸಭೆ ಚುನಾವಣೆಯಲ್ಲಿ ಶೇ.20 ಮತ ಪಡೆದಿದ್ದ ಕಾಂಗ್ರೆಸ್‌ ತನ್ನ ಮತದ ಪಾಲನ್ನು ಶೇ.29ಕ್ಕೆ ಹೆಚ್ಚಿಸಿಕೊಂಡಿದೆ. ಜೆಜೆಪಿ ಕೂಡ ಗಮನಾರ್ಹ ಮತ ಹಾಗೂ ಸ್ಥಾನ ಪಡೆದಿದೆ.

ಎಲ್ಲಾ ಮುಗಿಯಿತು ಎನ್ನುವಾಗಲೇ ಮತ್ತೆ ಪುಟಿದೆದ್ದ ಶರದ್ ಪವಾರ್!

ಚುನಾವಣೆಗಳನ್ನು ಬರೀ ಮೋದಿ ಅವರ ಪ್ರಚಾರದ ದೃಷ್ಟಿಯಲ್ಲಿ ನೋಡದೇ, ಸ್ಥಳೀಯ ಸರ್ಕಾರದ ದೃಷ್ಟಿಯಲ್ಲಿ ನೋಡಬೇಕು. ಸ್ಥಳೀಯ ಆಡಳಿತ ವಿರೋಧಿ ಅಲೆಯನ್ನು ಗಮನದಲ್ಲಿ ಇರಿಸಿಕೊಂಡು ಅಂದಾಜು ಮಾಡಬೇಕು ಎಂದು ಹರ್ಯಾಣ ಫಲಿತಾಂಶ ತೋರ್ಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!