ಗುಂಡಿಕ್ಕಿಕೊಂಡು ಹರ್ಯಾಣ ಐಪಿಎಸ್‌ ಅಧಿಕಾರಿ ಆತ್ಮ*ತ್ಯೆ

Kannadaprabha News   | Kannada Prabha
Published : Oct 08, 2025, 04:18 AM IST
Senior Haryana IPS Officer Shoots Himself At His House In Chandigarh

ಸಾರಾಂಶ

ಹರ್ಯಾಣದ ಹಿರಿಯ ಪೊಲೀಸ್‌ ಅಧಿಕಾರಿ ವೈ. ಪೂರಣ್‌ ಕುಮಾರ್‌ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಚಂಡೀಗಢ: ಹರ್ಯಾಣದ ಹಿರಿಯ ಪೊಲೀಸ್‌ ಅಧಿಕಾರಿ ವೈ. ಪೂರಣ್‌ ಕುಮಾರ್‌ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ತಮಗೆ ತಾವೇ ಗುಂಡು ಹೊಡೆದುಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

2001ನೇ ಬ್ಯಾಚ್‌ನ ಪೊಲೀಸ್‌ ಅಧಿಕಾರಿಯಾಗಿರುವ ಇವರು, ರೊಹ್ಟಕ್‌ನಲ್ಲಿರುವ ಪೊಲೀಸ್‌ ತರಬೇತಿ ಕೇಂದ್ರದ ಐಜಿ ಆಗಿದ್ದರು. ‘ಮಂಗಳವಾರ ಮಧ್ಯಾಹ್ನ 1:30ರ ಸುಮಾರಿಗೆ ಪೂರಣ್‌ರ ನಿವಾಸದಲ್ಲಿ ಶವ ಪತ್ತೆಯಾಗಿರುವ ಮಾಹಿತಿ ದೊರಕಿದ್ದು, ಸೆಕ್ಟರ್‌ 11ರ ಠಾಣಾಧಿಕಾರಿಯವರ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಮೃತದೇಹವು ಪೂರಣ್‌ರದ್ದೇ ಎಂಬುದು ಧೃಡಪಟ್ಟಿದ್ದು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯಿದೆ. ವಿಧಿವಿಜ್ಞಾನ ತಂಡ ಸ್ಥಳದಲ್ಲಿ ತನಿಖೆ ನಡೆಸುತ್ತಿದೆ’ ಎಂದು ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ
ಸೆಂಟ್ರಲ್ ಮೆಟ್ರೋ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವೆ ನೀಲಿ ಮಾರ್ಗದ ಸುರಂಗದಲ್ಲಿ ಹಠಾತ್ ನಿಂತ ಮೆಟ್ರೋ ರೈಲು