
ನವದೆಹಲಿ(ಮೇ.10): ಗ್ರಾಮೀಣ ಪ್ರದೇಶಗಳನ್ನು ಕೋವಿಡ್ ಮಾರಿಯಿಂದ ರಕ್ಷಿಸಲು, ಮನೆಮನೆಗೆ ತೆರಳಿ ಪರೀಕ್ಷೆ ನಡೆಸುವ ಅಭಿಯಾನಕ್ಕೆ ನಿರ್ಧರಿಸಿರುವ ಹರ್ಯಾಣ ಸರ್ಕಾರ, ಇದೀಗ ನಗರ ಪ್ರದೇಶಗಳಲ್ಲಿ ಸೋಂಕಿತರ ನೆರವಿಗೆ ಧಾವಿಸಿದೆ. ಸೋಂಕಿತರನ್ನು ಬಹುವಾಗಿ ಕಾಡುತ್ತಿರುವ ಆಕ್ಸಿಜನ್ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮನೆಮನೆಗೆ ತೆರಳಿ ಆಕ್ಸಿಜನ್ ರೀಫಿಲ್ಲಿಂಗ್ (ಮರುಭರ್ತಿ) ಮಾಡುವ ಯೋಜನೆ ಆರಂಭಕ್ಕೆ ನಿರ್ಧರಿಸಿದೆ. ಇದರಿಂದ ಜನರು ಆಕ್ಸಿಜನ್ ಸಿಲಿಂಡರ್ಗಾಗಿ ಅಲೆಯುವುದು ತಪ್ಪಲಿದೆ.
ಆಮ್ಲಜನಕ ಸಿಲಿಂಡರ್ಗೆ ರಾಜ್ಯದಲ್ಲಿ ಭಾರೀ ಬೇಡಿಕೆ ಸೃಷ್ಟಿಆಗಿರುವುದು ಹಾಗೂ ಕಾಳಸಂತೆಯಲ್ಲಿ ಸಿಲಿಂಡರ್ ಅನ್ನು ಮಾರಾಟ ಮಾಡುತ್ತಿರುವ ಘಟನೆಗಳು ವರದಿ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಈ ಯೋಜನೆಯಡಿ ಆಮ್ಲಜನಕದ ಅವಶ್ಯಕತೆ ಇರುವ ಕೊರೋನಾ ರೋಗಿಗಳು ಟ್ಡyಜಛ್ಞಿh್ಟy.ಜ್ಞಿ ವೆಬ್ಸೈಟ್ನಲ್ಲಿ ಕೋರಿಕೆ ಸಲ್ಲಿಸಿದರೆ ಸರ್ಕಾರ ಮನೆ ಬಾಗಿಲಿಗೇ ಆಗಮಿಸಿ ಆಮ್ಲಜನಕ ಸಿಲಿಂಡರ್ ಅನ್ನು ಭರ್ತಿ ಮಾಡಿಕೊಡಲಾಗುವುದು. ಈ ಕಾರ್ಯಕ್ಕೆ ರೆಡ್ ಕ್ರಾಸ್ ಸೊಸೈಟಿ ಹಾಗೂ ಮತ್ತಿತರ ಸ್ವಯಂ ಸೇವಾ ಸಂಘಟನೆಗಳ ನೆರವನ್ನು ಪಡೆಯಲು ಪಡೆಯಲು ಮುಂದಾಗಿದೆ. ವೆಬ್ಸೈಟ್ನಲ್ಲಿ ನೋಂದಣಿ ಆಗಿರುವ ಸಂಘಟನೆಯ ಸ್ವಯಂಸೇವಕರು ಆಮ್ಲಜನಕ ಸಿಲಿಂಡರ್ಗಳನ್ನು ರೋಗಿಗಳ ಮನೆ ಬಾಗಿಲಿಗೆ ತಲುಪಿಸಲಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ