300ಕ್ಕೂ ಹೆಚ್ಚು ಕೊರೋನಾ ರೋಗಿಗಳ ಅಂತ್ಯಸಂಸ್ಕಾರ ಮಾಡಿದ್ದ ವ್ಯಕ್ತಿ ಮಹಾಮಾರಿಗೆ ಬಲಿ

Published : May 18, 2021, 07:18 PM ISTUpdated : May 18, 2021, 07:20 PM IST
300ಕ್ಕೂ ಹೆಚ್ಚು ಕೊರೋನಾ ರೋಗಿಗಳ ಅಂತ್ಯಸಂಸ್ಕಾರ ಮಾಡಿದ್ದ ವ್ಯಕ್ತಿ ಮಹಾಮಾರಿಗೆ ಬಲಿ

ಸಾರಾಂಶ

* 300ಕ್ಕೂ ಹೆಚ್ಚು ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಿದಾತ ಕಿಲ್ಲರ್ ಕೊರೋನಾಗೆ ಬಲಿ *  ಕಳೆದ ವರ್ಷ ಕೊರೋನಾ ಸೋಂಕು ಕಾಣಿಸಿಕೊಂಡ ಸಂದರ್ಭದಿಂದಲೂ ಅಂತ್ಯ ಸಂಸ್ಕಾರ ನಡೆಸುವಲ್ಲಿ ತೊಡಗಿಸಿಕೊಂಡಿದ್ದ * ಹರಿಯಾಣದ ಹಿಸಾರ್ ನಗರ ಪಾಲಿಕೆ ಅಧಿಕಾರಿ ಆಗಿದ್ದ ಪ್ರವೀಣ್ ಕುಮಾರ್ (43)

ಹಿಸಾರ್ (ಹರಿಯಾಣ), (ಮೇ.18): ಸದ್ಯದ ಪರಿಸ್ಥಿತಿಯಲ್ಲಿ ಕೊರೋನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರಕ್ಕೆ ಯಾರು ಮುಂದೆ ಬರಲ್ಲ. ಕಾರಣ ಕೊರೋನಾ ಎನ್ನುವ ಭಯ. 

ಆದ್ರೆ, ಇಲ್ಲೊಬ್ಬರು ಕೊರೋನಾದಿಂದ ಸಾವನ್ನಪ್ಪಿದ 300ಕ್ಕೂ ಹೆಚ್ಚು ಮಂದಿಯ ಅಂತ್ಯಸಂಸ್ಕಾರವನ್ನು ಮಾಡಿ ಕೊನೆಗೆ ತಾನೇ ಕಿಲ್ಲರ್ ವೈರಸ್‌ಗೆ ಬಲಿಯಾಗಿದ್ದಾರೆ.

ಹೌದು...ಹರಿಯಾಣದ ಹಿಸಾರ್ ನಗರ ಪಾಲಿಕೆ ಅಧಿಕಾರಿ ಆಗಿದ್ದ ಪ್ರವೀಣ್ ಕುಮಾರ್ (43) ಮಂಗಳವಾರ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.  ಕಳೆದ ಭಾನುವಾರ ಪ್ರವೀಣ್‌ಗೆ ಕೊರೋನಾ ಸೋಂಕು ದೃಢಪಟ್ಟಿತ್ತು.ಈ ಹಿನ್ನೆಲೆಯಲ್ಲಿ ಅವರನ್ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದ್ರೆ,  ಇಂದು (ಮಂಗಳವಾರ) ಆಮ್ಲಜನಕ ಮಟ್ಟ ಕಡಿಮೆಯಾಗಿ ಅವರು ಸಾವನ್ನಪ್ಪಿರುವುದಾಗಿ ಪಾಲಿಕೆ ವಕ್ತಾರರೊಬ್ಬರು ಮಾಹಿತಿ ನೀಡಿದ್ದಾರೆ.

1100 ಮೃತದೇಹ ಅಂತ್ಯಸಂಸ್ಕಾರ: ಪ್ರೀತಿಯ ಮಗಳ ಮದ್ವೆಯನ್ನೇ ಮುಂದೂಡಿದ ತಂದೆ

ಕಳೆದ ವರ್ಷ ಕೊರೋನಾ ಸೋಂಕು ಕಾಣಿಸಿಕೊಂಡ ಸಂದರ್ಭದಿಂದಲೂ ಪ್ರವೀಣ್ ಕುಮಾರ್ ತಂಡ ಸೋಂಕಿನಿಂದ ಸಾವನ್ನಪ್ಪುವವರ ಅಂತ್ಯ ಸಂಸ್ಕಾರ ನಡೆಸುವಲ್ಲಿ ತೊಡಗಿಸಿಕೊಂಡಿತ್ತು. 

ಕೊರೊನಾದಿಂದ ಸಾವನ್ನಪ್ಪಿದ್ದವರ ಅಂತ್ಯಸಂಸ್ಕಾರ ನೆರವೇರಿಸಲು ನಗರ ಪಾಲಿಕೆ ನಿಯೋಜಿಸಿದ್ದ ತಂಡದ ಮುಖ್ಯಸ್ಥರಾಗಿದ್ದ ಪ್ರವೀಣ್ ಅವರು ಕಳೆದ ವರ್ಷದಿಂದ ಇದುವರೆಗೂ ಸುಮಾರು 300ಕ್ಕೂ ಮಂದಿಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ. 

ಮನೆಯವರೇ ಕೊರೋನಾ ರೋಗಿಗಳ ಶವಗಳನ್ನು ಮುಟ್ಟಲು ಹೆದರುತ್ತಿದ್ದ ಸಂದರ್ಭದಲ್ಲಿ ಸತ್ತವರ ಅಂತ್ಯಸಂಸ್ಕಾರವನ್ನು ಗೌರವವಾಗಿ ನೆರವೇರಿಸಿದ್ದರು. ಆದ್ರೆ, ಇದೀಗ ಮಹಾಮಾರಿ ಆತನನ್ನೇ ಬಲಿತೆಗೆದುಕೊಂಡಿದೆ.

ಕೊರೋನಾ ಮಾರ್ಗಸೂಚಿ ಅನ್ವಯ ಅವರ ಅಂತಿಮ ಸಂಸ್ಕಾರವನ್ನು ರಿಷಿ ನಗರದಲ್ಲಿ ನೆರವೇರಿಸಲಾಗಿದೆ. ಪ್ರವೀಣ್ ಕುಮಾರ್ ನಗರ ಪಾಲಿಕೆ ಸಫಾಯಿ ಕರ್ಮಾಚಾರಿ ಸಂಘಟನೆಯ ಅಧ್ಯಕ್ಷ ಕೂಡ ಆಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್