
ಚಂಡೀಗಢ(ಡಿ.02): ಕೇಂದ್ರದ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವ ರೈತರ ಮೇಲೆ ಬಲಪ್ರಯೋಗ ಮಾಡಿದ ಸರ್ಕಾರದ ನಿಲುವನ್ನು ಖಂಡಿಸಿ ಮನೋಹರ್ ಲಾಲ್ ಖಟ್ಟರ್ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹರಾರಯಣದ ಪಕ್ಷೇತರ ಶಾಸಕ ಸೋಮಬೀರ್ ಸಂಗ್ವಾನ್ ವಾಪಸ್ ಪಡೆದಿದ್ದಾರೆ.
ಸರ್ಕಾರದ ರೈತ ವಿರೋಧಿ ನಿಲುವನ್ನು ವಿರೋಧಿಸಿ ಬೆಂಬಲ ವಾಪಸ್ ಪಡೆದಿದ್ದೇನೆ. ಬಿಜೆಪಿ ಸರ್ಕಾರ ರೈತರ ಪರ ನಿಲ್ಲುವುದು ಬಿಟ್ಟು, ದೆಹಲಿ ಪ್ರವೇಶಕ್ಕೆ ಮುಂದಾದ ರೈತರ ಮೇಲೆ ಮೇಲೆ ಅಶ್ರುವಾಯು, ಜಲ ಫಿರಂಗಿಗಳನ್ನು ಪ್ರಯೋಗಿಸಿದೆ. ಇಂಥ ಸರ್ಕಾರಕ್ಕೆ ಬೆಂಬಲ ಮುಂದುವರಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಸೋಮವಾರವಷ್ಟೇ ಅವರು ತಮಗೆ ನೀಡಲಾಗಿದ್ದ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ